ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಮನಬಂದಂತೆ ಚಾಕು ಇರಿದ ಯುವಕ ;ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಮನಬಂದಂತೆ ಚಾಕು ಇರಿದ ಯುವಕ ;ಇಲ್ಲಿದೆ ವಿಡಿಯೋ

ನವದೆಹಲಿ: ಇಲ್ಲಿನ ಮುಖರ್ಜಿ ನಗರ ಪ್ರದೇಶದಲ್ಲಿ ಹಾಡಹಗಲೇ ಯುವತಿಯೊಬ್ಬಳ ಮೇಲೆ ಕಿಡಿಗೇಡಿ ಯುವಕ ಮನಬಂದಂತೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. 22 ವರ್ಷದ ಅಮನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಯುವಕ, ಯುವತಿ ಮೇಲೆ ಚಾಕುವಿನಿಂದ ಹಲವು ಬಾರಿ ಇರಿದಿರುವುದನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದು. ದಾರಿಹೋಕರು ಮಧ್ಯಪ್ರವೇಶಿಸಿ ಆರೋಪಿಯನ್ನು ಹಿಡಿಯಲು ಯತ್ನಿಸಿದರು. ಇದರಿಂದ ಭಯಗೊಂಡ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.

ಮಾಸ್ಕೋದಲ್ಲಿ ಉಗ್ರರ ದಾಳಿ; ಶೌಚಾಲಯದಲ್ಲಿ 28 ಜನರ ಮೃತದೇಹ ಪತ್ತೆ..!

ಮಾಸ್ಕೋದ ಕನ್ಸರ್ಟ್​ ಹಾಲ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಈವರೆಗೆ 150ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿದ್ದು, 107 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಗೂ ಶೌಚಾಲಯದಲ್ಲಿ 28 ಮಂದಿಯ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ದಾಳಿಗೆ ಸಂಬಂಧಿಸಿದಂತೆ 4 ಬಂದೂಕುಧಾರಿಗಳು ಸೇರಿದಂತೆ 11 ಮಂದಿಯನ್ನು ಮಾಸ್ಕೋ ಪೊಲೀಸರು ಬಂಧಿಸಿದ್ದಾರೆ. ದಾಳಿಯ ಬಳಿಕ 14 ಮಂದಿಯ ಮೃತ ದೇಹಗಳು ಮೆಟ್ಟಿಲುಗಳ ಮೇಲೆ ಬಿದ್ದಿರುವುದು ಕಂಡುಬಂದಿದೆ.

 

ಉಗ್ರರ ದಾಳಿ ನಡೆದ 24 ಗಂಟೆಗಳ ಬಳಿಕ ರಷ್ಯಾ ಅಧ್ಯಕ್ಷ ಪುಟಿನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಶತ್ರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾರು ಏನೇ ಮಾಡಿದರೂ ರಷ್ಯಾವನ್ನು ವಿಭಜನೆಗೊಳಿಸಲು ಸಾಧ್ಯವಿಲ್ಲ. ರಷ್ಯಾದ ಭದ್ರತಾ ಮುಖ್ಯಸ್ಥರು ತಮ್ಮ ತಂಡವು ಕಾರಿನಲ್ಲಿ ಪರಾರಿಯಾಗುತ್ತಿದ್ದ 4 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ