ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೀಸರ್‌ ಗ್ಯಾಸ್‌ ಸೋರಿಕೆಯಿಂದ ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು.!

Twitter
Facebook
LinkedIn
WhatsApp
ಗೀಸರ್‌ ಗ್ಯಾಸ್‌ ಸೋರಿಕೆಯಿಂದ ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು.!

ಬೆಂಗಳೂರು, (ಡಿಸೆಂಬರ್ 25): ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ  ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್‌(gas geyser) ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಆದ್ರೆ, ಇಂದು(ಡಿಸೆಂಬರ್ 25) ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.

ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್‌ ರೂಮ್‌ ಬಾಗಿಲು ಒಡೆದು ನೋಡಿದಾಗ ರಾಜೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಆದಾಗಲೇ ರಾಜೇಶ್ವರಿ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.

ತುಂಬ ಸಮಯ ಬಾತ್‌ ರೂಮ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಾಜೇಶ್ವರಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಗರ್ಭಿಣಿ ಸಾವು

ಬೆಂಗಳೂರು: ಡಿಸೆಂಬರ್ 23ರಂದು ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು ಮೃತಪಟ್ಟಿದ್ದರು. ರಮ್ಯ (23) ಮೃತ ದುರ್ದೈವಿ.

ಬೆಂಗಳೂರಿನ ಅಶ್ವತ್ ನಗರದಲ್ಲಿ ಈ ದುರ್ಘಟನೆ ನಡೆದಿತ್ತು. ರಮ್ಯ ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋದಾಗ, ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿತ್ತು. ಆದರೆ ಇದು ತಿಳಿಯದೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದಾಗ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು. ಇತ್ತ ರಮ್ಯರ ನಾಲ್ಕು ವರ್ಷದ ಮಗನಿಗೂ ಚಿಕಿತ್ಸೆ ಮುಂದುವರಿದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist