ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

AAP ಈಗ ರಾಷ್ಟ್ರೀಯ ಪಕ್ಷ; ಆದೇಶ ಹೊರಡಿಸಿದ ಕೇಂದ್ರ ಚುನಾವಣಾ ಆಯೋಗ

Twitter
Facebook
LinkedIn
WhatsApp

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ (Aam Aadmi Party) ರಾಷ್ಟ್ರೀಯ ಪಕ್ಷ ಮಾನ್ಯತೆ ನೀಡಿ ಕೇಂದ್ರ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ. ಇದೇ ವೇಳೆ ತೃಣ ಮೂಲ ಕಾಂಗ್ರೆಸ್ (TMC) ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ರಾಷ್ಟ್ರೀಯ ಪಕ್ಷಗಳು ಅಲ್ಲ ಎಂದು ಹೇಳಿದೆ. ದೆಹಲಿ, ಪಂಜಾಬ್ ನಂತರ ಗುಜರಾತ್​ ರಾಜ್ಯದಲ್ಲೂ ಕೆಲವೊಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರೀಯ ಸ್ಥಾನಮಾನ ಪಡೆಯುವ ಅರ್ಹತೆಯನ್ನು ಗಿಟ್ಟಿಸಿಕೊಂಡಿತ್ತು. ಸದ್ಯ ಚುನಾವಣಾ ಆಯೋಗವು ಆಪ್ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡಿದೆ. ಅದರಂತೆ ಕೇವಲ 10 ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ.

ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ಸಿಕ್ಕಿದ ಬಗ್ಗೆ ಟ್ವೀಟ್ ಮಾಡಿದ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷವೇ? ಇದು ಪವಾಡಕ್ಕಿಂತ ಕಡಿಮೆಯಿಲ್ಲ. ಎಲ್ಲರಿಗೂ ಅಭಿನಂದನೆಗಳು, ದೇಶದ ಲಕ್ಷಾಂತರ ಜನರು ನಮ್ಮನ್ನು ಈ ಸ್ಥಾನಕ್ಕೆ ತಂದಿದ್ದಾರೆ. ಜನರು ನಮ್ಮಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಇಂದು ಜನರು ನಮಗೆ ಈ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಜವಾಬ್ದಾರಿಯನ್ನು ಚೆನ್ನಾಗಿ ಪೂರೈಸಲು ನಮ್ಮನ್ನು ಆಶೀರ್ವದಿಸಿ” ಎಂದು ಹೇಳಿದ್ದಾರೆ.

10 ವರ್ಷಗಳ ಹಿಂದೆ ಎಎಪಿ ರಚನೆಯಾಗಿ ಭರ್ಜರಿ ಉಚಿತ ಕೊಡುಗೆಗಳ ಘೋಷಣೆಗಳೊಂದಿಗೆ ದೆಹಲಿಯಲ್ಲಿ ಅಧಿಕಾರಕ್ಕೇರಿದ್ದ ಆಪ್ ಪಕ್ಷ, ನಂತರ ಮತ್ತೊಮ್ಮೆ ಅಧಿಕಾರ ಹಿಡಿಯಿತು. ಕಾಂಗ್ರೆಸ್ ಆಡಳಿತವಿದ್ದ ಪಂಜಾಬ್ ರಾಜ್ಯದಲ್ಲಿ ಪ್ರಚಂಡ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿತ್ತು. ನಂತರ ಗೋವಾ ಟಾರ್ಗೆಟ್ ಮಾಡಿದ್ದ ಆಪ್, ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಬಳಿಕ ಗುಜರಾತ್​ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷವು ಐದು ಸ್ಥಾನಗಳನ್ನು ಗೆದ್ದುಗೊಳ್ಳುವಲ್ಲಿ ಯಶಸ್ವಿಯಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ವಾರಗಳು ಬಾಕಿ ಇರುವಾಗ, ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪಕ್ಷದಿಂದ ಪದೇ ಪದೇ ವಿನಂತಿ ಮತ್ತು ಪ್ರಾತಿನಿಧ್ಯಗಳ ಹೊರತಾಗಿಯೂ ಇಸಿಐ ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ವಿಳಂಬ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಆಮ್ ಆದ್ಮಿ ಪಕ್ಷದ ಮನವಿ ಪರಿಶೀಲಿಸಿ ಏ.13ರೊಳಗೆ ಈ ಬಗ್ಗೆ ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು.

ಯಾವುದೇ ಒಂದು ಪಕ್ಷ ರಾಷ್ಟ್ರೀಯ ಪಕ್ಷವಾಗಲು ಮೂರು ಷರತ್ತುಗಳನ್ನು ಚುನಾವಣಾ ಆಯೋಗ ಮುಂದಿಡುತ್ತದೆ.  ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಗಳಿಸಲು, ಒಂದು ರಾಜಕೀಯ ಪಕ್ಷವು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಗುರುತಿಸಲ್ಪಡಬೇಕು. ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ಕನಿಷ್ಠ ಎರಡು ಸ್ಥಾನಗಳನ್ನು ಮತ್ತು ಶೇ. 6 ರಷ್ಟು ಮತಗಳನ್ನು ಆಯಾ ಪಕ್ಷವು ಪಡೆಯಬೇಕು.  ಶೇ. 3ರಷ್ಟು ವಿಧಾನಸಭಾ ಸ್ಥಾನಗಳನ್ನು ಅಥವಾ 3 ವಿಧಾನಸಭಾ ಸ್ಥಾನಗಳಲ್ಲಿ ಯಾವುದು ಹೆಚ್ಚೋ ಅದನ್ನು ಗೆಲ್ಲಬೇಕು. ಮಾತ್ರವಲ್ಲದೆ, ಶೇ. 8ಕ್ಕಿಂತ ಹೆಚ್ಚಿನ ಮತಗಳನ್ನು ಪಡೆಯಬೇಕು. ಆಗ ಮಾತ್ರ ಪಕ್ಷವೊಂದು ರಾಷ್ಟ್ರೀಯ ಸ್ಥಾನಮಾನವನ್ನು ಪಡೆಯಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist