ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
52

ಮಡಿಕೇರಿ: ಬೈಕ್ (Bike) ಮತ್ತು ಆಲ್ಟೊ (Alto) ಕಾರಿನ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.

ಅಪ್ಪಾಜಿ (19) ಮೃತ ದುರ್ದೈವಿ. ಈತ ನಾಪೊಕ್ಲುವಿನ (Napoklu) ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಮೂರ್ನಾಡು (Murnad) ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮೂರ್ನಾಡು ಕಡೆಯಿಂದ ನಾಪೊಕ್ಲುವಿಗೆ ಬರುತ್ತಿದ್ದ ಆಲ್ಟೊ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. 

ತಾಲೂಕಿನ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಘಟನೆ ನಡೆದಿದ್ದು, ಅಪ್ಪಾಜಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕಿನಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ನಾಪೊಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ