ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದೇ ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. 

ಕರ್ನಾಟಕದಲ್ಲಿ ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಕ್ಕೆ ಭಾರಿ ಬೇಡಿಕೆಯಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹಿರಿಯ ನಾಗರಿಕಗರಿಗೆ ಪ್ರಸ್ತುತ 1,200 ರೂ. ವೃದ್ಧಾಪ್ಯ ವೇತನವನ್ನು ನೀಡುತ್ತಿದ್ದೇವೆ. ಅದನ್ನು ಮುಂದಿನ 2024-25ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಮನವಿ ಬಂದಿದ್ದು, ಮುಂದಿನ ಬಜೆಟ್ ನಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ  ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು. 

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ತಿಳಿಸಿದ ಮುಖ್ಯಮಂತ್ರಿ,  ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ  ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ಸಚಿವೆ ಮನವಿ

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಕರ್ನಾಟಕದ ಸುಮಾರು 49 ಲಕ್ಷ ವೃದ್ಧರಿಗೆ ಸರ್ಕಾರದಿಂದ ಮಾಸಿಕ 1,200 ರೂ. ವೃದ್ಧಾಪ್ಯ ವೇತನವನ್ನು ನೀಡಲಾಗುತ್ತಿದೆ. ಇದನ್ನು 2,000 ರೂ.ವರೆಗೆ ಹೆಚ್ಚಳ ಮಾಡಬೇಕೆಂದು ಸಿದ್ದರಾಮಯ್ಯ ಅವರಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿ ಮಾಡಿದರು. ರಾಜ್ಯದಲ್ಲಿ ಹಿರಿಯರು ನಾಗರಿಕರು 5 ಗ್ಯಾರಂಟಿ ಕೊಟ್ಟಿದ್ದೀರಾ. ಹಾಗೇ ನಮಗೆ ಪಿಂಚಣಿ ಜಾಸ್ತಿ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ. ಹೀಗಾಗಿ ನೀವು ಹಿರಿಯರಿದ್ದೀರಾ. ಹಿರಿಯ ನಾಗರಿಕರ ಕಷ್ಟದ ಬಗ್ಗೆಯೂ ತಮಗೆ ಅರಿವಿರುತ್ತದೆ. ಆದ್ದರಿಂದ ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ