ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನೊಳಗೆ ಶವವಾಗಿ ಪತ್ತೆಯಾದ ಖ್ಯಾತ ಮಲಯಾಳಂ ನಟ

Twitter
Facebook
LinkedIn
WhatsApp
Vinod Thomas ಮಲಯಾಳಂ ನಟ

ಮಲಯಾಳಂ ನಟ : ಚಿತ್ರರಂಗದ ಜನಪ್ರಿಯ ಮಲಯಾಳಂ ನಟ ವಿನೋದ್ ಥಾಮ್ಸ್  (Vinod Thomas) ಶವ ಕಾರಿನಲ್ಲಿ ಪತ್ತೆಯಾಗಿದೆ. ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೊಟೆಲ್‌ ಬಳಿ ನಿಲ್ಲಿಸಿದ್ದ ಕಾರಿನೊಳಗೆ  ಜನಪ್ರಿಯ ನಟ ವಿನೋದ್ ಥಾಮಸ್‌ ಶವ ಪತ್ತೆಯಾಗಿದ್ದು, ಜನರು ದಿಗ್ಭ್ರಮೆಗೆ ಒಳಗಾಗಿದ್ದಾರೆ. ವ್ಯಕ್ತಿಯೊಬ್ಬರು ಬಹಳ ಕಾಲದಿಂದ ಕಾರೊಂದು ಹೊಟೆಲ್ ಬಳಿ ನಿಂತಿದ್ದನ್ನು ಗಮನಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. 

ಪೊಲೀಸರು ಬಂದು ನೋಡಲಾಗಿ, ವ್ಯಕ್ತಿಯೊಬ್ಬರು ಕಾರಿನೊಳಗೆ ಮಲಗಿದ್ದನ್ನು ಗಮನಿಸಿದ್ದಾರೆ. ತಕ್ಷಣ ಕಾರಿನ ಡೋರ್ ಒಡೆದು ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಲ್ಲಿ ವೈದ್ಯರು ಆ ವ್ಯಕ್ತಿ ಸತ್ತಿದ್ದಾರೆ ಎಂದು ಘೋಷಿಸಿದ್ದಾರೆ ಎನ್ನಲಾಗಿದೆ. ಅವರದು ಕೊಲೆಯೋ ಆತ್ಮಹತ್ಯೆಯೋ ಎಂಬ ಮಾಹಿತಿ ಪೊಲೀಸ್ ತನಿಖೆ ಬಳಿಕ ಹೊರಬರಬೇಕಿದೆ. 

ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದ ನಟ ವಿನೋದ್ ಥಾಮಸ್ ಹೀಗೆ ದುರಂತ ಅಂತ್ಯ ಕಂಡಿದ್ದು ಮಲಯಾಳಂ ಚಿತ್ರಪ್ರೇಕ್ಷಕರಿಗೆ ಬರಸಿಡಲು ಬಡಿದಂತಾಗಿದೆ ಎನ್ನಲಾಗಿದೆ. ಬಹಳಷ್ಟು ಸಿನಿಮಾಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಅಲ್ಲಿನ ಪ್ರೇಕ್ಷಕರ ಮನೆಮನ ತಲುಪಿದ್ದ ನಟ ಹೀಗೆ ಕಾರಿನೊಳಗೆ ಶವವಾಗಿ ಮಲಗಿದ್ದಾರೆ ಎಂದರೆ ಪ್ರೇಕ್ಷಕರಿಗೆ ಶಾಕ್ ಆಗುವುದು ಸಹಜ. ಇದ್ದಕ್ಕಿಂದಂತೆ ಬಂದ ಇಂಥ ಶಾಕ್ ಸುದ್ದಿ ಕೇಳಿ ಮಲಯಾಳಂ ಚಿತ್ರಪ್ರೇಮಿಗಳು ಅವರ ಶವವನ್ನು ನೋಡಲು ತಂಡೋಪತಂಡವಾಗಿ ಬರುತ್ತಿದ್ದಾರೆ ಎನ್ನಲಾಗಿದೆ.

ಅಯ್ಯಪ್ಪನುಮ್ ಕೊಶ್ಯುಮ್, ನಾಥೋಲಿ ಒರು ಚೆರಿಯ ಮೀನಲ್ಲಾ, ಒರು ಮುರೈ ವಂತ್ ಪಾಠಯಾ, ಹ್ಯಾಪಿ ವೆಡ್ಡಿಂಗ್ ಮತ್ತು ಜೂನ್ ಮುಂತಾದ ಮಲಯಾಳಂ ಸಿನಿಮಾಗಳಲ್ಲಿ ನಟ ವಿನೋದ್ ಥಾಮಸ್ ನಟಿಸಿದ್ದಾರೆ. ತಾವು ನಟಿಸಿದ್ದ ಚಿತ್ರಗಳಲ್ಲಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಪ್ರೇಕ್ಷಕರ ಮನ ಮುಟ್ಟುವಲ್ಲಿ ಯಶಸ್ವಿಯಾಗಿದ್ದರು ಎನ್ನಲಾಗಿದೆ. ಈಗಲೂ ಕೂಡ ಸಾಕಷ್ಟು ಬೇಡಿಕೆ ಉಳಿಸಿಕೊಂಡಿದ್ದ ಈ ನಟ ಈಗ ಹೀಗೆ ಅನಾಥರಂತೆ ದುರಂತ ಅಂತ್ಯ ಕಂಡಿದ್ದಾರೆ. 

ಒಟ್ಟಿನಲ್ಲಿಮ ನಟ ವಿನೋದ್ ಥಾಮಸ್ ನಿಧನದ ಮೂಲಕ ಮಲಯಾಳಂ ಚಿತ್ರರಂಗ ಒಬ್ಬ ಶ್ರೇಷ್ಠ ನಟನನ್ನು ಕಳೆದುಕೊಂಡಂತಾಗಿದ್ದು, ಅಲ್ಲಿನ ಚಿತ್ರಪ್ರೇಮಿಗಳು ಅವರ ಧಾರುಣ ಸಾವಿಗೆ ಮರುಗುತ್ತಿದ್ದಾರೆ ಎನ್ನಲಾಗಿದೆ. ಮಧ್ಯ ವಯಸ್ಸಿನ ನಟ ಹೀಗೆ ಇದ್ದಕ್ಕಿದ್ದಂತೆ ಈ ಪ್ರಪಂಚದಿಂದ ದೂರವಾಗಿದ್ದು, ಅವರ ಕುಟುಂಬ, ಆಪ್ತರು, ಹಿತೈಷಿಗಳು ಸೇರಿದಂತೆ ಚಿತ್ರಪ್ರೇಮಿಗಳಿಗೆ ತುಂಬಲಾಗದ ನಷ್ಟವಾಗಿ ಪರಿಣಮಿಸಿದೆ. ದೇವರು ವಿನೋದ್ ಥಾಮಸ್ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಮಲಯಾಳಂ ಚಿತ್ರರಂಗದ ಕೋರಿಕೆ ಸಲ್ಲಿಸಿದೆ.

ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ಅರ್ಜುನ್ ಸರ್ಜಾ

ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ.

ವಯಸ್ಸಿನ ಕಾರಣದಿಂದಾಗಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರೆಳ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೀಗ ಅರ್ಜುನ್ ಸರ್ಜಾ ಕೂಡ  ಅದೇ ಕೆಲಸ ಮಾಡಿದ್ದಾರೆ. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದಾ ವಿಶ್ರಾಂತಿ ಪಡೆಯುತ್ತಿದ್ದಾರೆ.

ತಾಯಿಯ ಆರೋಗ್ಯ ವಿಚಾರಿಸುವಾಗ ಲೀಲಾವತಿ ಪುತ್ರ ವಿನೋದ್ ರಾಜ್(Vinod Raj)ಕಣ್ಣೀರಿಟ್ಟಿದ್ದಾರೆ. ಆನಂತರ ಲೀಲಾವತಿಯವರು ಬೇಗ ಆರೋಗ್ಯ ಸುಧಾರಿಸಲು ಭಗವಂತ ಹನುಮಂತನಲ್ಲಿ ಪ್ರಾರ್ಥಿಸುವುದಾಗಿ ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ. ದೊಡ್ಡ ಹನುಮಂತನ ದೇವಾಲಯ ಕಟ್ಟಿಸಿದ್ದು ಅಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದರು ಅರ್ಜುನ್ ಸರ್ಜಾ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ