ಇಂದು ಉದ್ಯಮಿ ಜೊತೆ ಸಪ್ತಪದಿ ತುಳಿಯಲಿದ್ದಾರೆ ನಟಿ ಪೂಜಾ ಗಾಂಧಿ!
ಕನ್ನಡದ ಹೆಸರಾಂತ ನಟಿ ಪೂಜಾ ಗಾಂಧಿ (Pooja Gandhi) ಇಂದು ಸಪ್ತಪದಿ ತುಳಿಯಲಿದ್ದಾರೆ. ಸಂಜೆ ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಲಿದ್ದಾರೆ (Marriage). ತಮ್ಮ ಆಪ್ತರಿಗೆ ಈಗಾಗಲೇ ಆಹ್ವಾನ ನೀಡಿದ್ದು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.
ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.
ಕೈ ಬರಹದಲ್ಲಿ ಮಳೆ ಹುಡುಗಿಯ ಮದುವೆ ಕಾರ್ಡ್: ಮೆಚ್ಚಿದ ಕರುನಾಡು
ಸೆಲೆಬ್ರಿಟಿಗಳ ಮದುವೆ ಕಾರ್ಡಿಗೆ ಲಕ್ಷ ಲಕ್ಷ ಖರ್ಚು ಮಾಡುವವರನ್ನು ನೋಡಿದ್ದೇವೆ. ದುಬಾರಿ ಮದುವೆ ಕಾರ್ಡ್ ಹಂಚಿದವರೂ ನಮ್ಮ ನಡುವೆ ಇದ್ದಾರೆ. ಆದರೆ, ಎಲ್ಲರಿಗೂ ಮಾದರಿ ಆಗುವಂತಹ ಕೆಲಸ ಮಾಡಿದ್ದಾರೆ ಮಳೆ ಹುಡುಗಿ ಖ್ಯಾತಿಯ ನಟಿ ಪೂಜಾ ಗಾಂಧಿ (Pooja Gandhi). ಸ್ವತಃ ತಮ್ಮದೇ ಕೈ ಬರಹದಲ್ಲಿ ಮದುವೆ ಕಾರ್ಡ್ ಸಿದ್ಧ ಪಡಿಸಿ, ಅದನ್ನೇ ಎಲ್ಲರಿಗೂ ಕಳುಹಿಸಿ ಕೊಟ್ಟಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ, ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ಬಂದವರು. ಕನ್ನಡವೇ ಬಾರದ ಪೂಜಾ ಇದೀಗ ಸ್ವಚ್ಛ ಕನ್ನಡದಲ್ಲಿ ಮಾತನಾಡುತ್ತಾರೆ. ವಚನಗಳನ್ನು ಪಟಪಟ ಹೇಳುತ್ತಾರೆ. ತಮ್ಮದೇ ಕೈ ಬರಹದಲ್ಲಿ ಕನ್ನಡದ ಮದುವೆ ಆಮಂತ್ರಣ ಪತ್ರಿಕೆಯನ್ನು (Wedding Card) ಸಿದ್ಧ ಮಾಡಿದ್ದಾರೆ. ಈ ನಡೆಗೆ ಕನ್ನಡಿಗರಿ ಮೆಚ್ಚಿದ್ದಾರೆ. ಆ ಪತ್ರಿಕೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ.
ಇಂದು ಮದುವೆ
ಈ ಹಿಂದೆ ನಿಶ್ಚಾತಾರ್ಥ ಮುರಿದು ಬಿದ್ದ ಕಾರಣದಿಂದಾಗಿ ಮದುವೆಯನ್ನೇ ಮರೆತಿದ್ದ ಪೂಜಾ ಗಾಂಧಿ, ಇದೀಗ ಎಲ್ಲ ಕಹಿ ಘಟನೆಗಳನ್ನು ಮರೆತು ಮತ್ತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಿಂದಲೂ ದೂರವಿರುವ ಪೂಜಾ, ಕನ್ನಡ ಕಲಿಕೆಯ ಕಾರಣದಿಂದಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಗೆ ಬಂದಿದ್ದಾರೆ.
ಮಳೆ ಹುಡುಗಿ ಎಂದೇ ಖ್ಯಾತಿಯ ಆಗಿರುವ ಪೂಜಾ ಗಾಂಧಿ ನಾಳೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಅದೀಗ ಎಲ್ಲವೂ ನಿಜವಾಗಿದೆ. ಸ್ವತಃ ಪೂಜಾ ಗಾಂಧಿಯವರೆ ಮಾಧ್ಯಮಗಳಿಗೆ ತಮ್ಮ ಮದುವೆ ಕುರಿತಾಗಿ ಪತ್ರ ಬರೆದಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.
ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.