ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

12 ವರ್ಷಗಳ ನಂತರ ಟ್ರೋಫಿ ಗೆಲ್ಲುವ ಕನಸು ಭಗ್ನ; ಆಟಗಾರರ ಜೊತೆ ಮೈದಾನದಲ್ಲಿಯೇ ಕಣ್ಣೀರಿಟ್ಟ ಫ್ಯಾನ್ಸ್..!

Twitter
Facebook
LinkedIn
WhatsApp
12 ವರ್ಷಗಳ ನಂತರ ಟ್ರೋಫಿ ಗೆಲ್ಲುವ ಕನಸು ಭಗ್ನ; ಆಟಗಾರರ ಜೊತೆ ಮೈದಾನದಲ್ಲಿಯೇ ಕಣ್ಣೀರಿಟ್ಟ ಫ್ಯಾನ್ಸ್..!

ಅಹಮದಾಬಾದ್: 13ನೇ ಆವೃತ್ತಿಯ ಏಕದಿನ ವಿಶ್ವಕಪ್ (ODI World Cup) ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ (Team India) ಭಾರೀ ನಿರಾಸೆಯಾಗಿದೆ. ಶತಕೋಟಿ ಭಾರತೀಯರ ಕನಸು ಭಗ್ನಗೊಂಡಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಅತೀವ ನೋವುಂಟುಮಾಡಿದೆ.

ಬೆಳಗ್ಗೆಯಿಂದಲೂ ಹರ್ಷೋದ್ಘಾರ ಹಾಕುತ್ತಾ ಟೀಂ ಇಂಡಿಯಾ ಗೆಲುವಿಗಾಗಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಆಸ್ಟ್ರೇಲಿಯಾ (Australia) ತಂಡದ ಗೆಲುವು ಹೇಳತೀರದ ನೋವು ತರಿಸಿತು. ಭಾರತದ ಧ್ವಜ ಹಾರಿಸುತ್ತಾ ದೇಶಾಭಿಮಾನ ಮೆರೆಯುತ್ತಿದ್ದ ಅಭಿಮಾನಿಗಳು ಕೊನೆಯಲ್ಲಿ ಕಣ್ಣಲ್ಲಿ ನೀರು ಕಚ್ಚಿಕೊಂಡು ಹೋಗುವಂತೆ ಮಾಡಿತು. 12 ವರ್ಷಗಳ ನಂತರ ಟ್ರೋಫಿ ಗೆಲ್ಲುವ ಭಾರತದ ಕನಸು ಮತ್ತೆ ಕನಸಾಗಿಯೇ ಉಳಿಯಿತು.

12 ವರ್ಷಗಳ ನಂತರ ಟ್ರೋಫಿ ಗೆಲ್ಲುವ ಕನಸು ಭಗ್ನ; ಆಟಗಾರರ ಜೊತೆ ಮೈದಾನದಲ್ಲಿಯೇ ಕಣ್ಣೀರಿಟ್ಟ ಫ್ಯಾನ್ಸ್..!

ಕೈತಪ್ಪಿದ 9ನೇ ಟ್ರೋಫಿ: ಭಾರತ ತಂಡ ಮಾಜಿ ಕ್ರಿಕೆಟಿಗ ಎಂ.ಎಸ್ ಧೋನಿ (MS Dhoni) ನಾಯಕತ್ವದಲ್ಲಿ 2011ರಲ್ಲಿ ಕೊನೆಯ ವಿಶ್ವಕಪ್ ಕಿರೀಟ ಗೆದ್ದು ಬೀಗಿತ್ತು. ಆದ್ರೆ 2013ರಿಂದ ಈಚೆಗೆ 9 ಐಸಿಸಿ ಟ್ರೋಫಿಗಳನ್ನ ಕಳೆದುಕೊಂಡಿರುವುದನ್ನು ಮರೆಯುವಂತಿಲ್ಲ.

2014ರ ಟಿ20 ವಿಶ್ವಕಪ್ ಟೂರ್ನಿ ಫೈನಲ್, 2015ರಲ್ಲಿ ಏಕದಿನ ವಿಶ್ವಕಪ್ ಸೆಮಿಫೈನಲ್, 2016ರ ಟಿ20 ವಿಶ್ವಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ಏಕದಿನ ವಿಶ್ವಕಪ್ ಸೆಮಿಫೈನಲ್, 2021ರ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್, 2022ರ ಟಿ20 ವಿಶ್ವಕಪ್ ಸೆಮಿಫೈನಲ್, 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿ ಐಸಿಸಿ ಟ್ರೋಫಿ ಕಳೆದುಕೊಂಡಿದ್ದ ಭಾರತ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲೂ ಸೋಲನುಭವಿಸಿ ಮತ್ತೆ ಅಭಿಮಾನಿಗಳ ಆಸೆಗೆ ತಣ್ಣೀರು ಹಾಕಿದೆ.

ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 240 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 43 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 6ನೇ ಬಾರಿಗೆ ಏಕದಿನ ವಿಶ್ವಕಪ್ ಟೂರ್ನಿ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist