ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಕೆಟ್ ಕೈತಪ್ಪಿದ ಬಳಿಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂಸದ.!

Twitter
Facebook
LinkedIn
WhatsApp
ಟಿಕೆಟ್ ಕೈತಪ್ಪಿದ ಬಳಿಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂಸದ.!

ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಲೋಕಸಭಾ ಸಂಸದ ಡಿಎಂಕೆಯ ಎ.ಗಣೇಶಮೂರ್ತಿ ಅವರು ಕೀಟನಾಶಕ(Pesticide) ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಟಿಕೆಟ್‌ನಲ್ಲಿ ಚುನಾಯಿತರಾದ ಗಣೇಶಮೂರ್ತಿ ಆರೋಗ್ಯ ಏಕಾಏಕಿ ಹದಗಟ್ಟಿತ್ತು, ಬಳಿಕ ಆಸ್ಪತ್ರೆಗೆ ದಾಖಲಿಸಿದಾಗ ಅವರು ಕೀಟನಾಶಕ ಸೇವಿಸಿದ್ದು ತಿಳಿದುಬಂದಿದೆ. ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದೆ ಎಂದು ಹೇಳಿದ್ದಾರೆ.

ಸಚಿವ ಎಸ್.ಮುತ್ತುಸಾಮಿ, ಮೊಡಕುರಿಚಿಯ ಬಿಜೆಪಿ ಶಾಸಕ ಡಾ.ಸಿ.ಸರಸ್ವತಿ, ಎಐಎಡಿಎಂಕೆಯ ಕೆ.ವಿ.ರಾಮಲಿಂಗಂ ಮುಂತಾದ ರಾಜಕೀಯ ಮುಖಂಡರು ಆಸ್ಪತ್ರೆಗೆ ಧಾವಿಸಿ ಗಣೇಶಮೂರ್ತಿ ಅವರ ಆರೋಗ್ಯ ವಿಚಾರಿಸಿದರು. ಅವರ ಈ ನಿರ್ಧಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 19ರಿಂದ ಆರಂಭವಾಗಿ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಜೂನ್ 4ರಂದು ಫಲಿತಾಂಶ ಹೊರಬರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ