ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಧ್ಯರಾತ್ರಿ ಸಂಭವಿಸಿದ ಅಪಘಾತವನ್ನು ನೋಡಲು ಸೇರಿದ್ದ ಜನರಿಗೆ ಗುದ್ದಿದ ಇನ್ನೊ೦ದು ಕಾರು ; ಇಬ್ಬರು ಪೊಲೀಸರು ಸೇರಿ 9 ಮಂದಿ ಸಾವು!

Twitter
Facebook
LinkedIn
WhatsApp
WhatsApp Image 2023 07 20 at 9.19.24 AM

ಅಹಮದಾಬಾದ್​​​​​​, (ಜುಲೈ 20): ಅಹಮದಾಬಾದ್​​​​​​ನ(Ahmedabad) ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ತಡರಾತ್ರಿ 1.30 ಗಂಟೆಗೆ ಟ್ರಕ್​  ಹಾಗೂ ಎಸ್​ಯುವಿ ಕಾರಿನ ನಡುವೆ ಸಂಭವಿಸಿದ್ದ ಅಪಘಾತವನ್ನು ನೋಡಲು ಸೇರಿದ್ದ ಜನರ ಮೇಲೆ ಇನ್ನೊಂದು ಕಾರು ವೇಗವಾಗಿ ಬಂದು ಗುದ್ದಿದೆ.  ಈ ದುರ್ಘಟನೆಯಲ್ಲಿ ಇಬ್ಬರು ಪೊಲೀಸರು, ವಿದ್ಯಾರ್ಥಿಗಳು ಸೇರಿದಂತೆ ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ 6 ಜನ ಮೃತಪಟ್ಟಿದ್ದರೆ, ಪೊಲೀಸರು ಸೇರಿ ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಕಾರು ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತದ ವೇಳೆ ಮೃತಪಟ್ಟವರಲ್ಲಿ ಹೆಚ್ಚಿನವರು ಕಾಲೇಜ್​ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಬೋಟಾಡ್, ಭಾವನಗರದಿಂದ ಅಹಮದಾಬಾದ್‌ಗೆ ಓದಲು ಬಂದಿದ್ದರು.

ಎಸ್‌ಯುವಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಇದನ್ನು ನೋಡಲು ನಿಂತಿದ್ದ ಜನರ ಮೇಲೆ ವೇಗವಾಗಿ ಬಂದ ಜಾಗ್ವರ್​ ಕಾರು ಹರಿದಿದೆ. ರಾಜ್‌ಪಥ್ ಕ್ಲಬ್ ಪ್ರದೇಶದಿಂದ ವೇಗವಾಗಿ ಬಂದ ಕಾರು, ಜನಸಂದಣಿಯ ಮೇಲೆ ನುಗ್ಗಿದೆ. ಕಾರು ವೇಗವಾಗಿ ಬಂದು ಗುದ್ದಿದ ರಭಸಕ್ಕೆ ಅನೇಕ ಜನರು ಘಟನಾ ಸ್ಥಳದಿಂದ ಸುಮಾರು 20 ರಿಂದ 25 ಅಡಿ ದೂರ ಹಾರಿ ಹೋಗಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist