ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್

Twitter
Facebook
LinkedIn
WhatsApp
images 16

ಉಡುಪಿ: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿರುವ ಕಾರಣ ಈ ಮೂರು ಜಿಲ್ಲೆಯಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದಿದ್ದಾರೆ.ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ನೂತನ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಘೋಷಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ