ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೆರಿಕದ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿನಿಗೆ ಸಿಡಿಲು ಬಡಿದು ಮೆದುಳಿಗೆ ಹಾನಿ - ಸಾವು ಬದುಕಿನ ನಡುವೆ ಹೋರಾಟ!

Twitter
Facebook
LinkedIn
WhatsApp
43 2

ಹೂಸ್ಟನ್: ಅಮೆರಿಕದ ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಸಿಡಿಲು ಬಡಿದು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನ ಓದುತ್ತಿದ್ದ ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು ಜುಲೈ 4 ನೇ ವಾರಾಂತ್ಯದಲ್ಲಿ ಸ್ಯಾನ್ ಜಸಿಂಟೋ ಸ್ಮಾರಕ ಉದ್ಯಾನವನದಲ್ಲಿ ತನ್ನ ಸ್ನೇಹಿತರೊಂದಿಗೆ ಕೊಳದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಆಕೆಯ ಮೆದುಳಿಗೆ ತೀವ್ರ ಹಾನಿಯಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುಸ್ರೂಣ್ಯಗೆ ಸಿಡಿಲು ಬಡಿದು ಕೊಳಕ್ಕೆ ಬಿದ್ದಿದ್ದಾಳೆ. ಬಳಿಕ, ಹೃದಯ ಸ್ತಂಭನಕ್ಕೆ ಒಳಗಾಗಿದ್ದಳು. ಈಗ ಮೆದುಳು ಹಾನಿಗೊಳಗಾಗಿದೆ ಎಂದು ಸೋದರ ಸಂಬಂಧಿ ಸುರೇಂದ್ರ ಕುಮಾರ್ ಕೋಟ ತಿಳಿಸಿದ್ದಾರೆ.

‘ಆಕೆಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ’ ಎಂದೂ ಸುರೇಂದ್ರ ಹೇಳಿದರು. ಸುಸ್ರೂಣ್ಯ, ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಬಂದಿದ್ದರು. ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನದ ಸ್ನಾತಕ ಪದವಿಯನ್ನು ಬಹುತೇಕ ಮುಗಿಸಿ, ಇಂಟರ್‌ಶಿಪ್‌ಗಾಗಿ ಕಾಯುತ್ತಿದ್ದರು. ಈ ನಡುವೆ ಈ ದುರಂತ ಸಂಭವಿಸಿದೆ.

ಕುಟುಂಬವು ವೈದ್ಯಕೀಯ ವೆಚ್ಚಗಳಿಗೆ ನೆರವು ಕೋರಿ GoFundMe ಅನ್ನು ರಚಿಸಿದೆ. ಆಕೆಯ ಸಾಮಾಜಿಕ ಮಾಧ್ಯಮ ಪುಟದಲ್ಲಿ, ಕುಟುಂಬವು ಸಹಾಯಕ್ಕಾಗಿ ಮನವಿ ಮಾಡಿದೆ, ಸುಸ್ರೂಣ್ಯ ಶೀಘ್ರವೇ ಸಹಜ ಸ್ಥಿತಿಗೆ ಮರಳಲು ಸಹಾಯ ಮಾಡುವಂತೆ ಕೋರಿದೆ. ಆಕೆಯನ್ನು ಭಾರತಕ್ಕೆ ಏರ್ ಲಿಫ್ಟ್ ಮಾಡುವ ಅವಶ್ಯಕತೆಯಿದೆ.

ಪಾಕಿಸ್ತಾನ: ನಿರ್ಮಾಣ ಹಂತದ ಸೇತುವೆ ಬಳಿ ಗೋಡೆ ಕುಸಿದು 11 ಮಂದಿ ಕಾರ್ಮಿಕರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸೇತುವೆ ನಿರ್ಮಾಣದ ಸ್ಥಳದಲ್ಲಿನ ರಸ್ತೆಬದಿಯ ತಮ್ಮ ಟೆಂಟ್‌ಗಳಲ್ಲಿ ಕಾರ್ಮಿಕರು ಕುಳಿತಿದ್ದಾಗ ಗೋಡೆ ಬಿದ್ದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿ ಮತ್ತು ರಕ್ಷಣಾ ತುರ್ತು ಸೇವೆಯ ಮೊಹಮ್ಮದ್ ಅಕ್ರಂ ಮಾತನಾಡಿ, ನೆರೆಯ ಗೊಲ್ರಾ ಬಳಿಯಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಈ ನಡುವೆಯೇ ಕುಸಿತ ಸಂಭವಿಸಿದೆ ಮತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹೇಳಿದರು.

ಜೂನ್ 25 ರಿಂದ ಪಾಕಿಸ್ತಾನದಲ್ಲಿ ಮಾನ್ಸೂನ್ ಮಳೆ ಸುರಿಯುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 112 ಜನರು ಸಾವಿಗೀಡಾಗಿದ್ದಾರೆ.

ಮಳೆಯಿಂದಾಗಿ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಪಾಕಿಸ್ತಾನದ ನದಿಗಳು ತುಂಬಿ ಹರಿಯುತ್ತಿವೆ. ನೂರಾರು ಹಳ್ಳಿಗಳು ಮುಳುಗಿವೆ ಮತ್ತು ಕನಿಷ್ಠ 15,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಕಳೆದ ಬಾರಿ ಮಳೆಯಿಂದಾಗಿ ಪಾಕಿಸ್ತಾನದ ಮೂರನೇ ಒಂದು ಭಾಗದಷ್ಟು ಪ್ರದೇಶ ನೀರಿನಲ್ಲಿ ಮುಳುಗಿದ್ದು, 1,739 ಜನರು ಮೃತಪಟ್ಟಿದ್ದರು. ಇದಾದ ಒಂದು ವರ್ಷದ ನಂತರ ಪಾಕಿಸ್ತಾನದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ.

2022 ರಲ್ಲಿ ಪ್ರವಾಹವು ನಗದು ಕೊರತೆಯಿರುವ ಪಾಕಿಸ್ತಾನದಲ್ಲಿ 30 ಬಿಲಿಯನ್ ಡಾಲರ್ ನಷ್ಟವನ್ನು ಉಂಟುಮಾಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist