ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮದ್ಯ ಪ್ರಿಯರಿಗೆ ಮತ್ತೆ ಶಾಕ್ ; ಬಿಯರ್ ದರ ಹೆಚ್ಚಳ..!

Twitter
Facebook
LinkedIn
WhatsApp
ಮದ್ಯ ಪ್ರಿಯರಿಗೆ ಮತ್ತೆ ಶಾಕ್ ; ಬಿಯರ್ ದರ ಹೆಚ್ಚಳ..!

ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ  ಮತ್ತೆ ಆಘಾತ ನೀಡಿದೆ. ಪದೇ ಪದೇ ದರ ಏರಿಕೆ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದ್ದು, ಕಿಸೆಯಲ್ಲಾ ಖಾಲಿಯಾದರೂ ಕಿಕ್ ಮಾತ್ರ ಏರದಂತಾಗಿದೆ.! ರಾಜ್ಯ ಸರ್ಕಾರ ಬಿಯರ್ (Beer) ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಅಂದ್ರೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ (Beer Price) 10 ರಿಂದ 15 ರೂಪಾಯಿ ಹೆಚ್ಚಾಗಿದೆ. ಗುರುವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ.

7 ತಿಂಗಳಲ್ಲಿ 3ನೇ ಬಾರಿ ಬಿಯರ್ ದರ ಹೆಚ್ಚಳ

ಇದರೊಂದಿಗೆ, ಕಳೆದ 7 ತಿಂಗಳ ಅವಧಿಯಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾದಂತಾಗಿದೆ. ಬಿಯರ್ ಬೆಲೆ ಒಟ್ಟು 40 ರೂ. ಜಾಸ್ತಿ ಆಗಿದೆ. ಪದೆಪದೇ ದರ ಏರಿಸಿದರೆ ವ್ಯಾಪಾರಕ್ಕೂ ಹೊಡೆತ ಆಗುತ್ತದೆ ಎಂದು ಮಾರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುಕ್ಕಾಣಿ ಹಿಡಿಯುತ್ತದ್ದಂತೆಯೇ ಬಿಯರ್‌ ಮೇಲೆ ಶೇ 20ರಷ್ಟು ಸುಂಕ ಹೆಚ್ಚಿಸಿತ್ತು. ಉತ್ಪಾದನಾ ವೆಚ್ಚ ಸರಿದೂಗಿಸಿಸಲು ಬಾಟಲ್‌ ಮೇಲೆ 10 ರೂ. ಏರಿಸಿತ್ತು. ಇದೀಗ ಮತ್ತೆ ಬಿಯರ್‌ ದರ ಹೆಚ್ಚಳ ಮಾಡಿದೆ. ಈ ವರ್ಷ ಅಬಕಾರಿ ಇಲಾಖೆಯಿಂದ 36 ಸಾವಿರ ಕೋಟಿ ಆದಾಯ ಸಂಗ್ರಹಕ್ಕೆ ಗುರಿ ನೀಡಿದೆ.

ಈ ವರ್ಷ ರಾಜ್ಯ ಸರ್ಕಾರ ಅಬಾಕಾರಿ ಇಲಾಖೆಗೆ 36 ಸಾವಿರ ಕೋಟಿ ರೂಪಾಯಿ ಆದಾಯ ಸಂಗ್ರಹದ ಗುರಿ ನೀಡಿದೆ. 10 ತಿಂಗಳಲ್ಲಿ 27 ಸಾವಿರ ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಗುರಿ ತಲುಪಲು 9 ಸಾವಿರ ಕೋಟಿ ಸಂಗ್ರಹವಾಗಬೇಕಿದೆ. ಇತ್ತ ಬೆಲೆ ಏರಿಕೆಯಿಂದ ಮದ್ಯಪ್ರಿಯರು ಬಿಯರ್ ಸಹವಾಸವೇ ಬೇಡ ಎನ್ನುತ್ತಿದ್ದಾರೆ.

ಬಿಯರ್ ಮಾರಾಟದಿಂದ ಸರ್ಕಾರಕ್ಕೆ ಬರುವ ಆದಾಯ ಬಹಳ ಕಡಿಮೆ‌. ಹೀಗಾಗಿ ದರ ಏರಿಕೆ ಮಾಡಿ ಖಜಾನೆ ತುಂಬಿಸಿಕೊಳ್ಳಲು ಚಿಂತನೆ ಮಾಡಿದೆ. ಈ ಮೂಲಕ ಮದ್ಯ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ.

ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ಮದ್ಯದ ದರವನ್ನು ಕಳೆದ ತಿಂಗಳಷ್ಟೇ ಮದ್ಯ ಮಾರಾಟ ಕಂಪನಿಗಳು ಹೆಚ್ಚಳ ಮಾಡಿದ್ದವು. ಆದರೆ, ಇದರಲ್ಲಿ ಸರ್ಕಾರದ ಪಾತ್ರ ಇರಲಿಲ್ಲ. ಮದ್ಯ ಉತ್ಪಾದನಾ ಕಂಪನಿಗಳು ಕ್ವಾಟರ್​ಗೆ 20 ರಿಂದ 30 ರೂಪಾಯಿಯಷ್ಟು ದರ ಹೆಚ್ಚಳ ಮಾಡಿದ್ದವು. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂಬ ಕಾರಣ ನೀಡಿ ಮದ್ಯ ಉತ್ಪಾದಕ ಕಂಪನಿಗಳು ದರ ಹೆಚ್ಚಳ ಮಾಡಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist