ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!

Twitter
Facebook
LinkedIn
WhatsApp
ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!
ನವದೆಹಲಿ : ಜಾರಿ ನಿರ್ದೇಶನಾಲಯದಿಂದ ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ದೆಹಲಿ ಹೈಕೋರ್ಟ್‌ ಗುರುವಾರ ರಿಲೀಫ್‌ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅನುವು ಮಾಡಿಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ದೆಹಲಿ ಹೈಕೋರ್ಟ್‌ ವಜಾ ಮಾಡಿದೆ. 
ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಬಂಧನವಾಗಿದೆ. ಆದ ಕಾರಣದಿಂದ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ತೆಗೆದುಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದರ ವಿಚಾರ ನಡೆಸಿದ ಕೋರ್ಟ್‌, ಅರ್ಜಿಯನ್ನು ವಜಾ ಮಾಡಿದೆ. ‘ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂಥ ಯಾವ ಕಾನೂನು ಹೇಳುತ್ತದೆ’ ಎಂದು ದೆಹಲಿ ಹೈಕೋರ್ಟ್‌ ಪ್ರಶ್ನೆ ಮಾಡಿದೆ.
ಅದಲ್ಲದೆ, ಇದು ಸಂಪೂರ್ಣವಾಗಿ ಶಾಸಕಾಂಗದ ವಿಚಾರವಾಗಿದೆ. ಇದರಲ್ಲಿ ಮಧ್ಯಪ್ರವೇಶಿಸಲು ಕೋರ್ಟ್‌ಗೆ ಸಾಧ್ಯವಿಲ್ಲ. ಹಾಗಾಗಿ ಈ ವಿಚಾರದಲ್ಲಿ ಕೋರ್ಟ್‌ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
ಈ ವಿಷಯ ಕಾರ್ಯಾಂಗದ ವ್ಯಾಪ್ತಿಯಲ್ಲಿದೆ ಎಂದು ನಾವು ಅಭಿಪ್ರಾಯಪಡುತ್ತೇವೆ. ನಾವು ಅದನ್ನು ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ನಂತರ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯವು  ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ. ಈ ಬಗ್ಗೆ ಅರ್ಜಿದಾರರು ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಅಥವಾ ಲೆಫ್ಟಿನೆಂಟ್ ಗವರ್ನರ್ ಪರಿಗಣಿಸಿ ಮಧ್ಯಪ್ರವೇಶಿಸಬೇಕು ಎಂದು ಹೇಳಿದರು.
ಇದೆಲ್ಲ ಕಾರ್ಯಾಂಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಂಗದ ವ್ಯಾಪ್ತಿಗೆ ಒಳಪಡುವುದಿಲ್ಲ. ನಾವು ಅದನ್ನು ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ, ಅವರು ಅದನ್ನು ಮಾಡಲಿ. ಇದು ರಾಜಕೀಯ ವಿಷಯ. ನೀವೇ ನಿರ್ಧಾರ ಮಾಡಿ, ಇದರಲ್ಲಿ ಯಾವ ತೀರ್ಪು ನೀಡಲು ಬರುತ್ತದೆ? ಎಂದು ಪ್ರಶ್ನೆ ಮಾಡಿದೆ. ಇದರಲ್ಲಿ ನ್ಯಾಯಾಂಗದ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಪುನರುಚ್ಚರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist