ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ನಮಗಾಗಿ ನೀವು ಏನು ಮಾಡಿದ್ದೀರಿ?’ ಎಂದು ಪ್ರಶ್ನಿಸಿ ಶೋಭಾ ಕರಂದ್ಲಾಜೆಗೆ ತರಾಟೆಗೆ ತೆಗೆದುಕೊಂಡ ಮೀನುಗಾರರು ...!

Twitter
Facebook
LinkedIn
WhatsApp
‘ನಮಗಾಗಿ ನೀವು ಏನು ಮಾಡಿದ್ದೀರಿ?’ ಎಂದು ಪ್ರಶ್ನಿಸಿ ಶೋಭಾ ಕರಂದ್ಲಾಜೆಗೆ ತರಾಟೆಗೆ ತೆಗೆದುಕೊಂಡ ಮೀನುಗಾರರು ...!

ಮಲ್ಪೆಯಿಂದ ಉಡುಪಿವರೆಗಿನ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (shobha karandlaje ) ಅವರನ್ನು ಮೀನುಗಾರರು ತರಾಟೆಗೆ ತೆದುಕೊಂಡಿದ್ದಾರೆ. ಉಡುಪಿಯ (Udupi) ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಮೀನುಗಾರರ ಸಂಘದ ಮುಖಂಡ ಕಿಶೋರ್ ಸುವರ್ಣ ಅವರು ಶೋಭಾ ಕರಂದ್ಲಾಜೆ ಬಿಮುಂದೆ ವಿಷಯ ಪ್ರಸ್ತಾಪಿಸಿದ್ದು, ಮೂರೂವರೆ ಕಿಲೋಮೀಟರ್ ಉದ್ದದ ಹೆದ್ದಾರಿ ನಿರ್ಮಾಣ ವಿಳಂಬದ ಬಗ್ಗೆ ಸಂಘದ ಸದಸ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ.

ಕೋಟ್ಯಂತರ ರೂಪಾಯಿ ಆದಾಯ ಬರುವ ಮಲ್ಪೆ ಬಂದರಿನ ಬಗ್ಗೆ ನಿಮಗೆ ನಿರ್ಲಕ್ಷ್ಯ ಏಕೆ? ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕ ರೀತಿಯಲ್ಲಿಲ್ಲ. ರಸ್ತೆಯ ಸರ್ವೆ ಮತ್ತು ಪರಿಹಾರದ ಬಗ್ಗೆ ಜನರಿಗೆ ಸಾಕಷ್ಟು ಗೊಂದಲಗಳಿವೆ. ಇದರ ವಿರುದ್ಧ ಹಲವು ಮಂದಿ ಕೋರ್ಟ್‌ಗೆ ಹೋಗಿದ್ದಾರೆ. ಇಲ್ಲಿ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಕೋಟ್ಯಂತರ ಆದಾಯ ಇರುವ ಈ ರಸ್ತೆ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಏಕೆ? ಎಂದು ಪ್ರಶ್ನಿಸಿದ್ದಾರೆ.

 

ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ?. ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ನೀವು ಜನರನ್ನು ಯಾಕೆ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಶೋಭಾ ಕರಂದ್ಲಾಜೆ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ