ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದ ದುಷ್ಕರ್ಮಿಗಳು!

Twitter
Facebook
LinkedIn
WhatsApp
ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದ ದುಷ್ಕರ್ಮಿಗಳು!

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ. ಶಿಕ್ಷಕಿ ಪ್ರಜ್ಞೆ ತಪ್ಪಿ ಬಿದ್ದಾಗ ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದ್ದು, ಹಲವೆಡೆ ಗಂಭೀರ ಗಾಯಗಳಾಗಿವೆ.

ಶಿಕ್ಷಕಿ ಯೋವಿಕಾ ಡಿಯೋಲಿ ರಸ್ತೆಯಲ್ಲಿ ಕುಟುಂಬದವರೊಂದಿಗೆ ವಾಸವಿದ್ದಾರೆ. ಶುಕ್ರವಾರ ಶಾಲೆ ಮುಗಿದು ಮಧ್ಯಾಹ್ನ 2.10ಕ್ಕೆ ಆಟೋದಲ್ಲಿ ಮನೆಗೆ ಮರಳುತ್ತಿದ್ದರು, ಮಂದಿರ ಮಾರ್ಗದ ಖೋಖಾ ಮಾರುಕಟ್ಟೆ ತಲುಪಿದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.

ದುಷ್ಕರ್ಮಿಗಳು ಅವರನ್ನು ಸ್ವಲ್ಪ ದೂರ ಎಳೆದೊಯ್ದು ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದೆ. ಜೊತೆಗೆ, ಹಣೆಯ ತಲೆ, ಭುಜ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಸಾಕೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ದುಷ್ಕರ್ಮಿಗಳು ಮುಖ ಮುಚ್ಚಿಕೊಂಡಿದ್ದರು.

ಬೆಂಗಳೂರು: ಬೈಕ್​ನಲ್ಲಿ ಬಂದು ಚಾಕು ತೋರಿಸಿ ಹಾಡಗಲೇ ದರೋಡೆ

ಬೆಂಗಳೂರು, ಆ.15: ಬೈಕ್​ನಲ್ಲಿ ಬಂದು ಮೂವರು ಯುವಕರು ಸ್ವಿಗ್ಗಿ ಡೆಲಿವರಿ ಬಾಯ್​ಗೆ(Swiggy Delivery Boy) ಚಾಕು ತೋರಿಸಿ ದರೋಡೆ(Robbery) ಮಾಡಿದ ಘಟನೆ ವಿವೇಕನಂದ ನಗರದಲ್ಲಿ(Vivekananda Nagar) ನಡೆದಿದೆ. ಸ್ವಿಗ್ಗಿ ಡೆಲಿವರಿ ಬಾಯ್ ವಿವೇಕನಂದನಗರದಲ್ಲಿ ಆರ್ಡರ್ ಕೊಟ್ಟು ನಿವಾಸದಿಂದ ಹೊರಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಊಟವನ್ನು ಕೊಟ್ಟು ಮನೆಯಿಂದ ಹೊರಗೆ ಬರುತ್ತಿದ್ದ. ಇದೇ ಸಮಯಕ್ಕೆ ಬೈಕ್‌ನಲ್ಲಿ ಬಂದ ಮೂವರು ಮನೆ ಮುಂದೆ ಬೈಕ್ ನಿಲ್ಲಿಸಿ ಸ್ವಿಗ್ಗಿ ನೌಕರನನ್ನು ಹಿಡಿದು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಇನ್ನೂ ಖದೀಮರು 1,000 ರೂ. ಮತ್ತು ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪುಲಕೇಶಿನಗರ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ