ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿ ವೈ ವಿಜಯೇಂದ್ರ ಗೆ ರಾಜ್ಯಾದಕ್ಷ ಪಟ್ಟ; ಮೌನ ಮುರಿದ ಸೋಮಣ್ಣ..!

Twitter
Facebook
LinkedIn
WhatsApp
ಬಿ ವೈ ವಿಜಯೇಂದ್ರ ಗೆ ರಾಜ್ಯಾದಕ್ಷ ಪಟ್ಟ; ಮೌನ ಮುರಿದ ಸೋಮಣ್ಣ..!

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.

ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ (Somanna) ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ ಅಧ್ಯಕ್ಷ ಪಟ್ಟ ವಿಚಾರವನ್ನು ಸೋಮಣ್ಣ ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಎಂಬುದು ಪ್ರಶ್ನೆಯಾಗಿದ್ದು, ಅವರ ನಡೆ ಕುತೂಹಲ ಮೂಡಿಸಿದೆ. 

ವಿಜಯೇಂದ್ರ ಆಯ್ಕೆ ಕುರಿತು ಮಾಧ್ಯಮದವರು ಕೇಳಿದಾಗ ಸೋಮಣ್ಣ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಾನೇ ಸುದ್ದಿಗೋಷ್ಠಿ ಮಾಡ್ತೀನಿ ಎಂದಷ್ಟೇ ಹೇಳಿದವರು, ಮುಂದೆ ಒಂದು ಮಾತು ಕೂಡ ಆಡದೇ ಕಾರು ಹತ್ತಿ ಹೊರಟು ಹೋದರು.

ಈ ಹಿಂದೆಯೇ ಹೈಕಮಾಂಡ್ ಬಳಿ ಬಾಯಿ ಬಿಟ್ಟು ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ಸೋಮಣ್ಣ ಕೇಳಿದ್ದರು. ತಮಗೆ ಸಾಮರ್ಥ್ಯ ಇದೆ. ನಿಮ್ಮ ಮಾತು ಕೇಳಿ ಎರಡು ಕಡೆ ಸ್ಪರ್ಧಿಸಿ ಸೋತೆ. ನಿಮ್ಮಿಂದಲೇ ನನ್ನ ರಾಜಕೀಯ ಬದುಕು ಅತಂತ್ರವಾಯ್ತು ಅಂತ ಸೂಕ್ಷ್ಮವಾಗಿ ವರಿಷ್ಠರಿಗೆ ತಿಳಿಸಿದ್ದರು.

ಆದರೂ ತಮ್ಮನ್ನು ವರಿಷ್ಠರು ಪರಿಗಣಿಸದ ಹಿನ್ನೆಲೆಯಲ್ಲಿ ಸೋಮಣ್ಣ ತೀವ್ರ ಬೇಸರಗೊಂಡಿದ್ದಾರೆ. ಈಗ ಮುಂದೇನು ಮಾಡಬೇಕೆಂದು ಗಂಭೀರ ಆಲೋಚನೆಯಲ್ಲಿ ಇದ್ದಾರೆ. ಸೋಮಣ್ಣರಿಗೆ ಕಾಂಗ್ರೆಸ್‌ನಿಂದಲೂ ಆಹ್ವಾನ ಇದೆ ಎನ್ನಲಾಗಿದೆ. ಆದರೆ ಇದುವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಇನ್ಮುಂದೆ ಸೋಮಣ್ಣ ನಿರ್ಣಯ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ತಮಗೆ ಭಾರೀ ಅಪಮಾನ ಆಗಿದೆ ಎಂಬ ಭಾವನೆಯಲ್ಲಿ ಸೋಮಣ್ಣ ಇದ್ದಾರೆ ಎನ್ನಲಾಗಿದೆ.

ಬೂತ್ ಗೆದ್ದರೆ, ದೇಶ ಗೆಲ್ತೇವೆ: ಬಿವೈ ವಿಜಯೇಂದ್ರ

ಬೆಂಗಳೂರು: ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಸಿಗುವ ಗೌರವ ಬೂತ್ ಅಧ್ಯಕ್ಷರಿಗೂ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಾರೋ ಮಾಡಲಿ. ಮುಂದೆ ಅವರಿಗೆ ನಾವೆಲ್ಲರೂ ತಕ್ಕ ಉತ್ತರ ಕೊಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ