ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bangalore : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಯುವತಿಯರ ರಕ್ಷಣೆ

Twitter
Facebook
LinkedIn
WhatsApp
Bangalore : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ;

ಬೆಂಗಳೂರು, ಫೆಬ್ರವರಿ 25: ನಗರದ ಥಾಯ್ ಸ್ಪಾ ಹೆಸರಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಯಲಹಂಕ ನ್ಯೂಟೌನ್ ಪೊಲೀಸರು  ದಾಳಿ ಮಾಡಿದ್ದು, ಆಂಜನೇಯಗೌಡ, ಹರೀಶ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ಏಳು ಜನ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ರೋರಾ ಲಕ್ಸುರಿ ಥಾಯ್ ಸ್ಪಾ (ಮಸಾಜ್​ ಪಾರ್ಲರ್​) ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ  ನಡೆಸುತ್ತಿದ್ದರು. ಆರೋಪಿಗಳು ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶದ ಮಹಿಳೆಯರನ್ನು ಟೂರಿಸ್ಟ್ ವೀಸಾ ಹಾಗೂ ಬ್ಯುಸಿನೆಸ್ ವೀಸಾ ಮೂಲಕ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಈ ವಿಚಾರ ತಿಳಿದ ಈಶಾನ್ಯ ವಿಭಾಗದ ಡಿಸಿಪಿ, ಯಲಹಂಕ ನ್ಯೂಟೌನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಪೊಲೀಸರು ದಾಳಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟಿ ಕೋಟಿ ಹಣದಾಸೆಗೆ ವೇಶ್ಯಾವಾಟಿಕೆ ಆರಂಭಿಸಿದ ಟೆಕ್ಕಿ

ಒಂದೂವರೆ ಲಕ್ಷ ಸಂಬಳದ ಕೆಲಸದಲ್ಲಿದ್ದ ಟೆಕ್ಕಿ ಹಣದ ದಾಹಕ್ಕೆ ಬಿದ್ದು ಸ್ಟಾಕ್ ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡು ಲಕ್ಷಲಕ್ಷ ಸಾಲವನ್ನು ಮಾಡಿದ್ದನು. ಆದರೆ ತಂತ್ರಜ್ಞಾನದಲ್ಲಿ ಹೆಚ್ಚಿನ ಜ್ಞಾನ ಹೊಂದಿದ್ದ ಈತ ಕೆಲಸಕ್ಕೆ ಗುಡ್​ಬೈ ಹೇಳಿ ಮ್ಯಾಟ್ರಿಮೋನಿ ಮಾದರಿಯ ಆ್ಯಪ್ ಅಭಿವೃದ್ಧಿ ಮಾಡಿ ಹಣ ಸಂಪಾದಿಸುತ್ತಿದ್ದನು. ನಂತರ ಕೋಟ್ಯಾಂತರ ರೂಪಾಯಿ ಸಂಪಾದಿಸುಲು ಈ ಟೆಕ್ಕಿ ವೇಶ್ಯಾವಾಟಿಕೆ ದಂಧೆಯ ಹಾದಿ ಹಿಡಿದ್ದನು.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ ವೈಶಾಕ್​ಗೆ ವೇತನಕ್ಕೇನು ಕೊರತೆ ಇರಲಿಲ್ಲ. ತಿಂಗಳಿಗೆ ಒಂದೂವರೆ ಲಕ್ಷರೂಪಾಯಿ ಸಂಬಳ ಪಡೆಯುತ್ತಿದ್ದನು. ಹೈಟೆಕ್ ಲೈಫ್​ ಸಾಗಿಸುತ್ತಿದ್ದನು. ಆದರೆ ಸ್ಟಾಕ್ ಮಾರ್ಕೆಟ್ ಹುಚ್ಚಿಗೆ ಬಿದ್ದ ವೈಶಾಕ್ ಅದರಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದನು. ಅಲ್ಲದೆ, ಲಕ್ಷ ಲಕ್ಷ ಸಾಲ ಮಾಡಿದ್ದನು.

ಟೆಕ್ನಾಲಜಿಯಲ್ಲಿ ತಂತ್ರಾಜ್ಞಾನದಲ್ಲಿ ಜ್ಞಾನ ಹೊಂದಿದ್ದ ವೈಶಾಕ್, ಉತ್ತಮ ವೇತನದ ಕಲಸ ಬಿಟ್ಟು ತಲೆ ಕೆಡಿಸಿಕೊಂಡಿದ್ದನು. ನಂತರ ಹಣ ಸಂಪಾದಿಸಲು ಮ್ಯಾಟ್ರಿಮೋನಿ ಮಾದರಿಯ ಆ್ಯಪ್ ಅಭಿವೃದ್ಧಿಪಡಿಸಿ ಅದರಲ್ಲಿ ವಿವಾಹವಾಗಲು ಇಚ್ಚಿಸುತ್ತಿರುವ ಯುವಕ-ಯುವತಿಯರನ್ನ ಆ್ಯಡ್ ಮಾಡಿ ಸಂಪರ್ಕ ಕಲ್ಪಿಸುತ್ತಿದ್ದನು. ಇಬ್ಬರಿಗೂ ಪರಸ್ಪರ ಕಾಂಟ್ಯಾಕ್ಟ್ ಮಾಡಿಸಲು ಹಣ ಪಡೆಯುತ್ತಿದ್ದನು. ಹೀಗೆ ಉತ್ತಮ ರೀತಿಯಲ್ಲಿ ಬ್ಯುಸಿನೆಸ್ ಸಾಗುತ್ತಿದ್ದಂತೆ ಬಿಟೆಕ್ ಮುಗಿಸಿದ್ದ ಗೋವಿಂದರಾಜು ಎಂಬಾತ ಈ ಆ್ಯಪ್​ಗೆ ಎಂಟ್ರಿಕೊಟ್ಟಿದ್ದನು. ಆ್ಯಪ್​ನ ಪ್ರೈವಸಿ ವರ್ಕ್ ನೋಡಿ ಶಾಕ್ ಆಗಿದ್ದ ಗೋವಿಂದರಾಜು, ವೈಶಾಕ್​ನನ್ನು ಸಂಪರ್ಕಿಸಿ ಮ್ಯಾಟ್ರಿಮೋನಿ ಕೆಲಸದ ಬದಲು ವೇಶ್ಯಾವಾಟಿಕೆ ದಂಧೆ ನಡೆಸುವಂತೆ ಖತರ್ನಾಕ್ ಐಡಿಯಾ ಕೊಟ್ಟಿದ್ದನು.

ಅಲ್ಲದೆ, ವಿದೇಶಿ ಮಹಿಳೆಯರಿಗೆ ಸಖತ್ ಡಿಮ್ಯಾಂಡ್ ಇದೆ, ಕೋಟಿ ಕೋಟಿ ಹಣ ಮಾಡಬಹುದು ಎಂದು ಮೈಂಡ್ ವಾಶ್ ಮಾಡಿದ್ದನು. ಅದಾಗಲೇ ಗೋವಿಂದರಾಜು ವಿದೇಶಿ ಪಿಂಪ್ ಜೊತೆ ಸಂಪರ್ದದಲ್ಲಿದ್ದನು. ಆಕೆಯಿಂದ ವಿದೇಶಿ ಯುವತಿಯರು ಸಿಗುತ್ತಾರೆ. ನೀನು ಕಾಂಟೆಕ್ಟ್​​ನಲ್ಲಿ ಗ್ರಾಹಕರನ್ನು ಹುಡುಕು ಎಂದು ವೈಶಾಕ್​ಗೆ ಹೇಳಿದ್ದನು. ಕೋಟಿಕೋಟಿ ಹಣ ಸಂಪಾದಿಸಲು ದಂಧೆಗೆ ಇಳಿದ ವೈಶಾಗ್​ಗೆ ಗೋವಿಂದರಾಜು ಆತನ ಆ್ಯಪ್​ನಲ್ಲಿದ್ದ ಕೆಲವು ಕಸ್ಟಮರ್​ಗಳನ್ನು ಹುಡುಕಿ ಕೊಡುತ್ತಿದ್ದನು. ದಿನ ಕಳೆದಂತೆ ಈ ದಂಧೆಯಿಂದ ಹೆಚ್ಚಿನ ಹಣ ಬರುವುದನ್ನು ನೋಡಿದ ವೈಶಾಕ್, ಇತರೆ ಇಬ್ಬರೊಂದಿಗೆ ಸೇರಿಕೊಂಡು ಹಲವು ವರ್ಷಗಳಿಂದ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು.

ರಷ್ಯಾ, ಖಜಕಿಸ್ತಾನ ಸೇರಿ ಬೇರೆ ಬೇರೆ ದೇಶಗಳಿಂದ ಯುವತಿಯರನ್ನು ಕರೆಸುತ್ತಿದ್ದರು. ಈ ವಿಚಾರ ತಿಳಿದ ಬೆಂಗಳೂರು ನಗರದ ಬಯ್ಯಪ್ಪನಹಳ್ಳಿ ಠಾಣಾ ಪೊಲೀಸರು, ಆರೋಪಿಗಳಾದ ವಿದೇಶಿ ಮಹಿಳೆ​, ಗೋವಿಂದರಾಜು ಹಾಗೂ ವೈಶಾಕ್​ನನ್ನ ಬಂಧಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ