ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!

Twitter
Facebook
LinkedIn
WhatsApp
Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!

ಮುಂಬರುವ ಡಿಸೆಂಬರ್ – ಜನವರಿ ತಿಂಗಳಲ್ಲಿ ಬ್ಯಾಂಕ್ ಉದ್ಯೋಗಿಗಳ ಯೂನಿಯನ್‌ಗಳು ಬೃಹತ್‌ ಮುಷ್ಕರಕ್ಕೆ ಕರೆ ನೀಡಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಈ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್‌ಗಳಲ್ಲಿ ಸಾಕಷ್ಟು ಸಂಖ್ಯೆಯ ಉದ್ಯೋಗಿಗಳನ್ನು ನೇಮಕ ಮಾಡುವಂತೆ ಒತ್ತಾಯಿಸಿ ಬ್ಯಾಂಕ್ ಯೂನಿಯನ್‌ಗಳು ಮುಷ್ಕರ ನಡೆಸುತ್ತಿವೆ ಮತ್ತು ನಿಯಮಿತ ಉದ್ಯೋಗಗಳನ್ನು ಹೊರಗುತ್ತಿಗೆ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ.

ಎಲ್ಲೆಲ್ಲಿ ಯಾವ ದಿನ ಮುಷ್ಕರ

  • ಮುಷ್ಕರವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದೆ. ಇದು 2024ರ ಜನವರಿ 20 ರವರೆಗೆ ವಿವಿಧ ಹಂತಗಳಲ್ಲಿ ಮುಂದುವರಿಯಲಿದೆ. ಮುಷ್ಕರದ ವಿವಿಧ ಹಂತಗಳು ಹೀಗಿವೆ.
  • ಡಿಸೆಂಬರ್ 4ರಂದು, ದೇಶದ ಅತಿದೊಡ್ಡ ಬ್ಯಾಂಕ್‌ಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ಗಳ ಉದ್ಯೋಗಿಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ.
  • ಬ್ಯಾಂಕ್ ಆಫ್ ಬರೋಡಾ ಮತ್ತು ಬ್ಯಾಂಕ್ ಆಫ್ ಇಂಡಿಯಾದ ನೌಕರರು ಡಿಸೆಂಬರ್ 5 ರಂದು ಮುಷ್ಕರ ನಡೆಸಲಿದ್ದಾರೆ.
  • ಕೆನರಾ ಬ್ಯಾಂಕ್ ಮತ್ತು ಯುಕೊ ಬ್ಯಾಂಕ್ ನೌಕರರು ಡಿಸೆಂಬರ್ 6 ರಂದು ಮುಷ್ಕರ ನಡೆಸಲಿದ್ದಾರೆ.
  • ಇಂಡಿಯನ್ ಬ್ಯಾಂಕ್ ಮತ್ತು ಯುಕೋ ಬ್ಯಾಂಕ್‌ನ ನೌಕರರು ಡಿಸೆಂಬರ್ 7ರಂದು ಮುಷ್ಕರ ನಡೆಸಲಿದ್ದಾರೆ.
  • ಡಿಸೆಂಬರ್ 8ರಂದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರದ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ.
  • ಡಿಸೆಂಬರ್ 11 ರಂದು ಖಾಸಗಿ ಬ್ಯಾಂಕ್‌ಗಳ ನೌಕರರು ಮುಷ್ಕರ ನಡೆಸಲಿದ್ದಾರೆ.

2024ರ ಜನವರಿಯಲ್ಲಿ ಯಾವ ದಿನ ಸ್ಟ್ರೈಕ್‌ ಇದೆ

  • ಹೊಸ ವರ್ಷ 2024 ರಲ್ಲಿ, ಎಲ್ಲಾ ಬ್ಯಾಂಕ್ ನೌಕರರು ವಿವಿಧ ರಾಜ್ಯಗಳಲ್ಲಿ ಹಂತ ಹಂತವಾಗಿ ಏಕಕಾಲದಲ್ಲಿ ಮುಷ್ಕರ ನಡೆಸಲಿದ್ದಾರೆ.
  • ಜನವರಿ 2 ರಂದು, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪಗಳಲ್ಲಿ ದಕ್ಷಿಣ ಭಾರತದ ಎಲ್ಲಾ ಬ್ಯಾಂಕ್‌ಗಳ ನೌಕರರು ಮುಷ್ಕರ ನಡೆಸಲಿದ್ದಾರೆ.
  • ಜನವರಿ 3 ರಂದು, ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಪಶ್ಚಿಮ ಭಾರತದ ಗುಜರಾತ್, ಮಹಾರಾಷ್ಟ್ರ, ಗೋವಾ, ದಾದರ್, ದಮನ್, ದಿಯು ರಾಜ್ಯಗಳಲ್ಲಿ ಮುಷ್ಕರ ನಡೆಸಲಿದ್ದಾರೆ.
  • ಜನವರಿ 4ರಂದು ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರು ಮುಷ್ಕರ ನಡೆಸಲಿದ್ದಾರೆ.
  • ಜನವರಿ 5 ರಂದು ದೆಹಲಿ, ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಎಲ್ಲ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರು ಮುಷ್ಕರ ನಡೆಸಲಿದ್ದಾರೆ.
  • ಜನವರಿ 6 ರಂದು, ಪೂರ್ವ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ತ್ರಿಪುರಾ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ.

ಜನವರಿ 19-20 ರಂದು ರಾಷ್ಟ್ರವ್ಯಾಪಿ ಮುಷ್ಕರ

ಇದರ ನಂತರ, ಜನವರಿ 19 ಮತ್ತು 20 ರಂದು ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಬ್ಯಾಂಕ್ ಉದ್ಯೋಗಿಗಳು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಬ್ಯಾಂಕ್ ಗ್ರಾಹಕರ ಸಂಖ್ಯೆ ಹಲವು ಪಟ್ಟು ಹೆಚ್ಚಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಹೇಳಿದೆ. ಬ್ಯಾಂಕ್‌ಗಳ ವ್ಯವಹಾರದ ಪ್ರಮಾಣ ಹೆಚ್ಚಿದ್ದು, ಇದರಿಂದಾಗಿ ಬ್ಯಾಂಕ್ ಉದ್ಯೋಗಿಗಳ ಮೇಲೆ ಕೆಲಸದ ಹೊರೆ ಹೆಚ್ಚಿದೆ. ಆದರೆ, ಈ ಅವಧಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನೌಕರರ ನೇಮಕವಾಗಿಲ್ಲ. ನಿವೃತ್ತಿ, ಬಡ್ತಿ ಹಾಗೂ ಮರಣದಿಂದ ಬ್ಯಾಂಕ್ ಗಳಲ್ಲಿ ಹುದ್ದೆಗಳು ಹೆಚ್ಚಿದ್ದರೂ ಭರ್ತಿಯಾಗುತ್ತಿಲ್ಲ. ಸರ್ಕಾರದ ಅನೇಕ ಯೋಜನೆಗಳನ್ನು ಬ್ಯಾಂಕ್ ನಿರ್ವಹಿಸುತ್ತಿದೆ. ಸರ್ಕಾರಿ ಬ್ಯಾಂಕ್‌ಗಳಿಂದ 50 ಕೋಟಿ ಜನ್‌ಧನ್ ಖಾತೆ ತೆರೆಯಲಾಗಿದೆ. ಇದರಿಂದ ಶಾಖೆಗಳಲ್ಲಿ ನೌಕರರ ಮೇಲೆ ಕೆಲಸದ ಹೊರೆ ಹೆಚ್ಚಿದೆ.

ಖಾಯಂ ಉದ್ಯೋಗಗಳನ್ನು ಕೂಡ ಹೊರಗುತ್ತಿಗೆ ನೀಡಲಾಗುತ್ತಿದೆ

ಬ್ಯಾಂಕ್ ಶಾಖೆಗಳಲ್ಲಿ ಉದ್ಯೋಗಿಗಳ ಕೊರತೆಯಿದ್ದು, ಗ್ರಾಹಕರ ಸೇವೆಗೆ ತೊಂದರೆಯಾಗುತ್ತಿದೆ ಎಂದು ಒಕ್ಕೂಟ ಹೇಳಿದೆ. ಇದರಿಂದಾಗಿ ಗ್ರಾಹಕರ ದೂರುಗಳು ಬರುತ್ತಿವೆ. ಸರ್ಕಾರ ಮತ್ತು ಬ್ಯಾಂಕ್‌ಗಳು ಉದ್ದೇಶಪೂರ್ವಕವಾಗಿ ಕ್ಲರ್ಕ್ ಮತ್ತು ಅಧೀನ ನೌಕರರ ಸಂಖ್ಯೆಯನ್ನು ಕಡಿಮೆ ಮಾಡುತ್ತಿವೆ ಮತ್ತು ಮೇಲ್ವಿಚಾರಣಾ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುತ್ತಿವೆ ಎಂದು ಒಕ್ಕೂಟ ಆರೋಪಿಸಿದೆ. ಕನಿಷ್ಠ ಪಕ್ಷ ಕಾರ್ಮಿಕರು ಕೈಗಾರಿಕಾ ವಿವಾದ ಕಾಯ್ದೆಯಡಿ ಬರಬೇಕು ಎಂಬುದು ಇದರ ಹಿಂದಿನ ಉದ್ದೇಶ. ಅಲ್ಲದೆ, ನಿಯಮಿತ ಮತ್ತು ಖಾಯಂ ಉದ್ಯೋಗಗಳನ್ನು ಗುತ್ತಿಗೆ ಆಧಾರದ ಮೇಲೆ ಹೊರಗುತ್ತಿಗೆ ನೀಡಲಾಗುತ್ತಿದೆ. ಇದರಿಂದಾಗಿ ಗುಮಾಸ್ತರ ಮಟ್ಟದ ನೇಮಕಾತಿಯಲ್ಲಿ ಭಾರಿ ಕಡಿತವಾಗಿದೆ. ಇದೇ ಕಾರಣಕ್ಕೆ ಬ್ಯಾಂಕ್ ಒಕ್ಕೂಟಗಳು ಮುಷ್ಕರ ನಡೆಸುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist