ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ; ಸವಾರನಿಗೆ ಗಂಭೀರ ಗಾಯ.!

Twitter
Facebook
LinkedIn
WhatsApp
ಬಂಟ್ವಾಳ : ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ; ಸವಾರನಿಗೆ ಗಂಭೀರ ಗಾಯ.!

ಬಂಟ್ವಾಳ: ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ವಾಹನ ಸವಾರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ
ಶಿವಾಜಿ ನಗರದಲ್ಲಿ ಮಾ.22 ರಂದು ಸಂಜೆ ವೇಳೆ ನಡೆದಿದೆ.

ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ಮಲ್ಲೂರು ಕಡೆಯಿಂದ ಬೆಂಜನಪದವು ಕಡಗೆ ಬರುತ್ತಿದ್ದ ರಾಜಲಕ್ಷೀ ಬಸ್ ಹಾಗೂ ಬೆಂಜನಪದವು ಕಡೆಯಿಂದ ಹೋಗುತ್ತಿದ್ದ ಸ್ಕೂಟರ್ ‌ನಡುವೆ ಶಿವಾಜಿನಗರದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟರ್ ರಸ್ತೆಯ ಪಕ್ಕ ಪಕ್ಷಿಯಾಗಿದೆ. ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕನಿಗೆ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಕೆಂಪುಕಲ್ಲಿನ ಕೋರೆಯ ಗುಡ್ಡದ ಮೇಲೆ ಹತ್ತಿ ವಾರೆಯಾಗಿ ನಿಂತುಕೊಂಡಿದೆ.ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್, ಮೆಲ್ಕಾರ್ ಟ್ರಾಫಿಕ್ ಎ.ಎಸ್.ಐ.ಸುರೇಶ್,ಎಚ್.ಸಿ.ಚಂದ್ರಿಕಾ ಹಾಗೂ 112 ವಾಹನ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ; ಸವಾರನಿಗೆ ಗಂಭೀರ ಗಾಯ.!

ಸುಳ್ಯ: ಮಾಣಿ ಮೈಸೂರು ಹೆದ್ದಾರಿ ಪೆರಾಜೆ ಬಳಿ ಶುಕ್ರವಾರ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ವರದಿಯಾಗಿದೆ.

ಮರವೊಂದು ಬಿದ್ದ ಪರಿಣಾಮ ಕೆಲ ಸಮಯ ಸಂಚಾರಕ್ಕೆ ತೊಡಕು ಉಂಟಾಯಿತು. ಬಳಿಕ ಸ್ಥಳೀಯ ನಿವಾಸಿ ಆಶೋಕ್ ಪೀಚೆ ಅವರು ಅಗ್ನಿ ಶಾಮಕ‌ ದಳವರಿಗೆ ಪೋನ್ ಮಾಡಿ ತಿಳಿಸಲಾಯಿತು. ಅಗ್ನಿ‌ಶಾಮಕ ದಳದವರು ಸ್ಥಳಕ್ಕೆ ಬಂದು ಮರವನ್ನು‌ತೆರವುಗೊಳಿಸಿದರು.ಬಳಿಕ ವಾಹನ ಸಂಚಾರ ಸುಗಮಗೊಂಡಿತು.

ಬೈಕ್ ಗ್ಯಾರೇಜ್‌ನಲ್ಲಿ ಯುವಕನ ಪ್ರಾಣ ತೆಗೆದ ಕರೆಂಟ್ ಶಾಕ್..!

ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ  ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.

ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ ಪ್ರಜ್ವಲ್ (19) ಮೃತಪಟ್ಟ ದುರ್ದೈವಿ. ಬೈಕ್  ಗ್ಯಾರೇಜ್‌ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಕೆಲಸದ ವೇಳೆ ಏಕಾಏಕಿ ಶಾಕ್ ತಗಲಿದ್ದು , ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ವಿದ್ಯುತ್  ತಪ್ಪಿಸಿ  ಗಂಭಿರ ಗಾಯಗೊಂಡ ಯುವಕನನ್ನು ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಜೆಶ್ವರ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ