ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ!

Twitter
Facebook
LinkedIn
WhatsApp
ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ!

ರಾಯಚೂರು, ಅ.30: ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ಮಾಡಲಾಗಿದೆ (Murder). ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ದಲಿತ ಮುಖಂಡ (Dalit Leader) ಪ್ರಸಾದ್(40) ಹತ್ಯೆ ಮಾಡಲಾಗಿದೆ.

ಬೈಕ್​​ ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು SP ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ವಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಬೆಂಗಳೂರಿನ ಎಲ್ಲ ವರ್ಕ್​ಶಾಪ್​ಗಳ ಪರಿಶೀಲನೆಗೆ ಸೂಚನೆ ನೀಡಿದ್ದೇನೆ: ರಾಮಲಿಂಗಾ ರೆಡ್ಡಿ

ಬೆಂಗಳೂರು ಅ.30: ನಗರದ ಹೊಸಕೆರೆಹಳ್ಳಿಯ ವೀರಭದ್ರನಗರದಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಎಸ್​ವಿ ಕೋಚ್ ವರ್ಕ್ಸ್​ನಲ್ಲಿ ಸಂಭವಿಸಿದ ಖಾಸಗಿ ಬಸ್ (Privet Bus)​​ ಅಗ್ನಿ ಅವಘಡ (Fire Accident) ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭೇಟಿ ನೀಡಿದರು. ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅಗ್ನಿ ಅವಘಡದಲ್ಲಿ ಸುಮಾರು 19 ಬಸ್​ಗಳು ಸುಟ್ಟು ಹೋಗಿವೆ. ವೆಲ್ಡಿಂಗ್ ಮಾಡುತ್ತಿದ್ದ ವೇಳೆ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ವರ್ಕ್​ಶಾಪ್​ ಮಾಲೀಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ನಗರದ ಎಲ್ಲಾ ವರ್ಕ್​ಶಾಪ್​ಗಳ ಪರಿಶೀಲನೆಗೆ ಸೂಚನೆ ನೀಡಿದ್ದೇನೆ ಎಂದರು.

ಎಲ್ಲೇಲ್ಲಿ ಬೆಂಕಿ ಅನಾಹುತ ಆಗುವಂತಹ ಸಾಧ್ಯತೆ ಇರುತ್ತೇ, ಅಲ್ಲಿ ಎಚ್ಚರಿಕೆಯಿಂದ ಇರಬೇಕು. ಈ ಪ್ರಕರಣದಲ್ಲಿ ಮಾಲೀಕನ ನಿರ್ಲಕ್ಷ್ಯ ಎದ್ದು ಕಾಣುತ್ತದೆ. ಪದೇ ಪದೇ ಅಗ್ನಿ ಅವಘಡಗಳು ಆಗುತ್ತಿವೆ. ವರ್ಕ್ ಶಾಪ್​ಗೆ ಲೈಸನ್ಸ್ ಬೇಕು. ವರ್ಕ್ ಶಾಪ್ ನಡೆಸುವವರು ನಿರ್ಲಕ್ಷ್ಯ ಮಾಡಿದ್ದಾರೆ. ತಪ್ಪು ಯಾರದ್ದು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಕಿ ನಂದಿಸುವ ಸಿಲಿಂಡರ್ ಜಾಸ್ತಿ ಇರಲಿಲ್ಲ. ಇಲ್ಲಿ ಸಾಕಷ್ಟು ಬಸ್​ಗಳು ಇದ್ದರೂ ಒಳಗೆ ಪ್ರವೇಶಿಸುವ ಗೇಟ್ ಮಾತ್ರ ಇದೆ, ನಿರ್ಗಮನ ಗೇಟ್ ಇಲ್ಲ ಎಂದು ತಿಳಿಸಿದರು.

ಪೊಲೀಸರ ಪ್ರಕಾರ ವೆಲ್ಡಿಂಗ್ ಮಾಡುವಾಗ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಯಾರೇ ಆಗಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮತ್ತೆ ಇಂತಹ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳುತ್ತೇವೆ. ಅಗ್ನಿಶಾಮಕದಳ ಮತ್ತು ಪೋಲಿಸರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ