ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ: ಪೆಟ್ರೋಲಿಯಂ ಪೈಪ್‌ ಲೈನಿಗೆ ಕನ್ನ ಕೊರೆದು 12 ಸಾವಿರ ಲೀಟರ್ ಇಂಧನ ಕಳವು...!

Twitter
Facebook
LinkedIn
WhatsApp
ಬೆಳ್ತಂಗಡಿ: ಪೆಟ್ರೋಲಿಯಂ ಪೈಪ್‌ ಲೈನಿಗೆ ಕನ್ನ ಕೊರೆದು 12 ಸಾವಿರ ಲೀಟರ್ ಇಂಧನ ಕಳವು...!

ಬೆಳ್ತಂಗಡಿ: ಪುದುವೆಟ್ಟಿನಲ್ಲಿ ಪೆಟ್ರೋಲಿಯಂ ಪೈಪ್‌ ಲೈನ್‌ಗೆಕನ್ನ ಕೊರೆದು ಲಕ್ಷಾಂತರ ರೂ. ಮೌಲ್ಯದ ಇಂಧನ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕಂಪೆನಿಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಪೆಟ್ರೋನೆಟ್‌ ಎಂ.ಎಚ್‌.ಬಿ. ಲಿ.ನ ನೆರಿಯದ ಸ್ಟೇಶನ್‌ ಇನ್‌ ಚಾರ್ಜ್‌ ಆಗಿರುವ ರಾಜನ್‌ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರು- ಹಾಸನ- ಬೆಂಗಳೂರು ಪೆಟ್ರೋನೆಟ್‌ ಪೈಪ್‌ ಮೂಲಕ ಪೆಟ್ರೋಲಿಯಂ ವಸ್ತುಗಳು ಸಾಗಾಟವಾಗುತ್ತಿದ್ದು, ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಮಾ. 16ರಿಂದ 19ರ ವರೆಗೆ ಕಳ್ಳರು ಪೆಟ್ರೋಲಿಯಂ ಪೈಪ್‌ ಲೈನ್‌ಗೆ ಕನ್ನ ಕೊರೆದು 2.5 ಇಂಚಿನ ಎಚ್‌.ಡಿ.ಪಿ.ಇ. ಪೈಪ್‌ ಅಳವಡಿಸಿ ಅದರ ಮೂಲಕ 12 ಸಾವಿರ ಲೀ.ಗೂ ಅಧಿಕ ಇಂಧನವನ್ನು ಕಳವು ಮಾಡಿದ್ದು, ಇದರ ಅಂದಾಜು ಮೌಲ್ಯ ಸುಮಾರು 9,60,000 ರೂ. ಆಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೆಲದಿಂದ ಸುಮಾರು 3 ಅಡಿ ಆಳದಲ್ಲಿರುವ ಪೈಪ್‌ ಲೈನನ್ನು ಅಗೆದು ಪೈಪ್‌ಗೆ ರಂಧ್ರ ಕೊರೆದು ಕಳ್ಳತನ ನಡೆಸಲಾಗಿದೆ.

ಇದರಲ್ಲಿ ಸ್ಥಳೀಯರ ಸಹಕಾರವೂ ಇರುವ ಶಂಕೆ ಇದ್ದು, ದೊಡ್ಡ ಮಟ್ಟದ ಇಂಧನ ಕಳ್ಳತನ ಜಾಲ ಇರುವ ಅನುಮಾನ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿಗಳು ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ..!

ಮಂಗಳೂರು :  ಪಂಜರದಲ್ಲಿದ್ದ ದೈತ್ಯ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ  ಜೈವಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು ತಪ್ಪಿಸಿಕೊಂಡ ಈ ಹೆಣ್ಣು ಕಾಳಿಂಗ ಸರ್ಪ ರಸ್ತೆ ದಾಟಿ ವಿಜ್ಞಾನ ಸೆಂಟರ್​ನತ್ತ ಸಾಗುತ್ತಿತ್ತು. ಸಾರ್ವಜನಿಕರು ಇದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.  ತಕ್ಷಣ ನಿಸರ್ಗಧಾಮದ ಸಿಬ್ಬಂದಿ ಧಾವಿಸಿ  ಅದನ್ನು ಸೆರೆ ಹಿಡಿದು ಮರಳಿ ಪಂಜರಕ್ಕೆ ಹಾಕಿದ್ದಾರೆ. ಈ ಗ ಸಂತನೋತ್ತಿಯ ಸಮಯವಾಗಿದ್ದು  ಒಂದು ಹೆಣ್ಣು ಮತ್ತು ಗಂಡು ಗಾಳಿಂಗ ಸರ್ಪಗಳು ಕಾದಾಟ ಮಾಡುತ್ತಿದ್ದಾಗ ಪಂಜರದ ಮೆಶ್ ಲಿಂಕ್ ತಪ್ಪಿ ಈ ಹೆಣ್ಣು  ಕಾಳಿಂಗ ಸರ್ಪ ಹೊರಕ್ಕೆ ತಪ್ಪಿಸಿ ಹೋಗಿದ್ದು ಇದನ್ನು ಗಮನಿಸಿದ ಸಿಬಂದಿ ಕೂಡಲೇ ಹಿಡಿದು  ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಿದ್ದಾರೆ.

ಸಂತನೋತ್ಪತ್ತಿ ಸಂದರ್ಭ  ಕಾಳಿಂಗ ಸರ್ಪಗಳ ಈ ಕಾದಾಟ  ಒಂದು ಸಹಜ ಪ್ರಕ್ರೀಯೆ ಆಗಿದೆ. ತಪ್ಪಿಸಿಕೊಂಡ ಹೆಣ್ಣು ಕಾಳಿಂಗ ಆರು ವರ್ಷ ವಯಸ್ಸಾಗಿದ್ದು ಸುಮಾರು 8 ಅಡಿ ಉದ್ದವಿದೆ.  ಹೆಣ್ಣು ಕಾಳಿಂಗ ಸಪೂರವಿದ್ದ ಕಾರಣ ಹೊರಗೆ ಹೋಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ದೇಶದ ದೊಡ್ಡ 17 ಮೃಗಾಲಯಗಳ ಪೈಕಿ ಇದು ಕೂಡ ಒಂದು. ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್​ ಒನ್​​ ಎಂಬ ಗೌರವಕ್ಕೂ ಪಾತ್ರವಾಗಿದೆ. ಅಳಿವಿನಂಚಿನ ಸೇರಿ ಅಪರೂಪದ ಹುಲಿ,  ಕಾಳಿಂಗ, ಸೇರಿದಂತೆ ಅನೇಕ ಅಪರೂಪದ ಪ್ರಾಣಿ ಮತ್ತು ಪಕ್ಷಿ ಸಂಕುಲ ಇಲ್ಲಿ ಇದ್ದು ಸಂತಾನಾಭಿವೃದ್ಧಿಯಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist