ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bengaluru: ಕಡೆಗೂ ಸಾವು ಬದುಕಿನ ಹೋರಾಟದಲ್ಲಿ ಗೆದ್ದ ಬೈಕ್ ಸವಾರ!

Twitter
Facebook
LinkedIn
WhatsApp
Bengaluru: ಕಡೆಗೂ ಸಾವು ಬದುಕಿನ ಹೋರಾಟದಲ್ಲಿ ಗೆದ್ದ ಬೈಕ್ ಸವಾರ!

ಬೆಂಗಳೂರು (ನ.17): ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿ ಕೋಮಾ ಸ್ಥಿತಿಗೆ ತಲುಪಿದ್ದ, ಬೈಕ್ ಸವಾರ ಸಂದೀಪ್ ಕಡೆಗೂ ಸಾವು ಬದುಕಿನ ಹೋರಾಟ ಜಯಿಸಿದ್ದಾರೆ. ಈಗ ಪ್ರಜ್ಞಾವಸ್ಥೆಗೆ ಮರಳಿ ಬಂದಿದ್ದಾರೆ. ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್‌ಗೆ ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ. ಸಂದೀಪ್ ವಿದ್ಯಾರಣ್ಯಪುರ ನಿವಾಸಿಯಾಗಿದ್ದರು. 

ಸಂದೀಪ್ ನವೆಂಬರ್ ಒಂದರಂದು ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬಿದ್ದಿದ್ದು, ಸ್ನೇಹಿತರ ಜೊತೆ ಕ್ರಿಕೆಟ್ ಆಡಿ ವಾಪಸ್ ಬರುವಾಗ ಅವಘಡ ನಡೆದಿತ್ತು. ಹೆಬ್ಬಾಳದ ಖಾಸಗಿ ಅಸ್ಪತ್ರೆಯಲ್ಲಿ ಸಂದೀಪ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು, ಪ್ರಜ್ಞಾಹೀನನಾಗಿ ಕೋಮಾ ಸ್ಥಿತಿಗೆ ತಲುಪಿದ್ದರು, ವೈದ್ಯರು ನಿರಂತರ ಒಂದು ವಾರ ಚಿಕಿತ್ಸೆ ನೀಡಿ ನಿಗಾ ವಹಿಸಿದ್ದರು. ಬೈಕ್ ಸವಾರ ಜೀವನ್ಮರಣದ ಹೋರಾಟ ಜಯಿಸಿದ್ಧಾರೆ. ಬೈಕ್‌ನಿಂದ ಬಿದ್ದ ಬಗ್ಗೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಸಂದೀಪ್ ಪತ್ನಿ ಸೀಮಾ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿದ್ದರು.

ಸ್ವಲ್ಪ ರಿಕವರಿ ಆಗುತ್ತಿದ್ದಾರೆ: ನಿನ್ನೆ (ಬುಧವಾರ) ಸಂದೀಪ್ ಸ್ವಲ್ಪ ಕಣ್ಣು ಬಿಟ್ಟಿದ್ದಾರೆ. ಇನ್ನೂ ಕೂಡ ಯಾರನ್ನು ಗುರುತು‌ ಹಿಡಿಯುತ್ತಿಲ್ಲ. ಸ್ವಲ್ಪ ರಿಕವರಿ ಆಗುತ್ತಿದ್ದಾರೆ ಎಂದು ಸಂದೀಪ್ ಪತ್ನಿ ಸೀಮಾ ಹೇಳಿದ್ದಾರೆ. ಡಾಕ್ಟರ್ ಇನ್ನೂ ರಿಕವರಿ ಆಗಲು ಹಲವು ತಿಂಗಳು ಬೇಕಾಗತ್ತೆ ಅಂತಾ ಹೇಳಿದ್ದಾರೆ. ಇದುವರೆಗೂ ಅಸ್ಪತ್ರೆಗೆ 14 ಲಕ್ಷ ಹಣ ಖರ್ಚಾಗಿದೆ. ಮಾಧ್ಯಮದಲ್ಲಿ ವರದಿ ಪ್ರಸಾರವಾದ ನಂತರ ಹಲವರು ಸಹಾಯ ಮಾಡಿದ್ದಾರೆ. ಇನ್ನೂ ಹಲವು ತಿಂಗಳು ಚಿಕಿತ್ಸೆ ಅಗತ್ಯ ಹಿನ್ನಲೆ ಸಹಾಯದ ಅಗತ್ಯ ತುಂಬಾ ಇದೆ. ಈ  ಖಾಸಗಿ ಅಸ್ಪತ್ರೆಯಲ್ಲಿ ತುಂಬಾ ಹಣ ಖರ್ಚಾಗುತ್ತಿದೆ ಎಂದು ತಿಳಿಸಿದರು.

ಹಾಗಾಗೀ ಹಲವು ಸರ್ಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡುವಂತೆ ಹಲವು ಆಸ್ಪತ್ರೆಗೆ ಹೋಗಿದ್ದೆ. ಆದರೆ ಒಬ್ಬರು ಒಂದೊಂದು ಕಾರಣ ನೀಡುತ್ತಿದ್ದಾರೆ. ನಿಮ್ಹಾನ್ಸ್‌ನಲ್ಲಿ ಬೆಡ್ ಇಲ್ಲ ಅಂತಾ ಹೇಳಿದ್ರು, ಈ ಎಸ್‌ಐ ಅಸ್ಪತ್ರೆಯಲ್ಲಿ ನ್ಯೂರೂ ಸರ್ಜನ್ ಇಲ್ಲ ಅಂತಾರೇ. ಇನ್ನೂ ಕೆಲವು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಇಲ್ಲ. ವೆಂಟಿಲೇಟರ್ ಇಲ್ಲ ಅಂತಾ ಹೇಳ್ತಾರೆ. ಇದುವರೆಗೂ ಕೂಡ ಬಿಬಿಎಂಪಿ ಅಧಿಕಾರಿಗಳು ಯಾವುದೇ ಸಹಾಯ ಮಾಡಿಲ್ಲ. ಇಂತಹ ಪರಿಸ್ಥಿತಿ ಯಾರಿಗೂ ಬರೋದು ಬೇಡ. ಇನ್ನೂ ರಸ್ತೆಯಲ್ಲಿ ‌ಹಾಗೇ ಗುಂಡಿಗಳು ಇವೇ ಅವುಗಳನ್ನು ದಯಾಮಾಡಿ ಮುಚ್ಚಿ. ನಮಗೆ ಬಂದ ಪರಿಸ್ಥಿತಿ ಯಾರಿಗೂ ಬರೋದು ಬೇಡ ಎಂದು ಸಂದೀಪ್ ಪತ್ನಿ ಸೀಮಾ ಮನವಿ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ