ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ - ಜೆಡಿಎಸ್ ಮೈತ್ರಿ ಕನ್ಫರ್ಮ್ ; ನಾಳೆ ಸುದ್ದಿಗೋಷ್ಠಿಯಲ್ಲಿ ಘೋಷಣೆ ಸಾಧ್ಯತೆ?

Twitter
Facebook
LinkedIn
WhatsApp
ಬಿಜೆಪಿ - ಜೆಡಿಎಸ್ ಮೈತ್ರಿ ಕನ್ಫರ್ಮ್ ; ನಾಳೆ ಸುದ್ದಿಗೋಷ್ಠಿಯಲ್ಲಿ ಘೋಷಣೆ ಸಾಧ್ಯತೆ?

ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ಬಿಜೆಪಿ ವರಿಷ್ಠರು ಅದೇನು ಮೀನಾಮೇಶ ಎಣಿಸುತ್ತಿದ್ದಾರೂ ಅಥವಾ ಕಾಂಗ್ರೆಸ್​​ ಆಡಳಿತವನ್ನು ಹಣಿಯಲು ಚಾಣಾಕ್ಯ ರಣತಂತ್ರವನ್ನೇ ಹೆಣೆಯುತ್ತಿದ್ದಾರೋ ಅಂತೂ ಲೀಡರ್​ ಆಫ್​ ಅಪೊಸಿಷನ್​ ನೇಮಕ ಇನ್ನೂ ನೆರವೇರಿಲ್ಲ. ಈ ಮಧ್ಯೆ, ಜೆಡಿಎಸ್​ ಜೊತೆ ಕೈಜೋಡಿಸುವುದು ಬಹುತೇಕ ಅಂತಿಮ ಹಂತಕ್ಕೆ ಬಂದಂತಿದೆ. ಬಿಜೆಪಿ-ಜೆಡಿಎಸ್ ಭಾಯಿ ಭಾಯಿ ಆಗುವ ಮುನ್ಸೂಚನೆಗಳು ದಟ್ಟವಾಗಿರುವುದರಿಂದ ಚುನಾವಣೆ ಮುಗಿದು ನಾಲ್ಕು ತಿಂಗಳೇ ಆಗಿದ್ದರೂ ಇನ್ನೂ LoP ಆಯ್ಕೆಯಾಗಿಲ್ಲ. ಇನ್ನು ಕುತೂಹಲಕಾರಿ ಬೆಳವಣಿಗೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಡೆಸಲು ಬಿಜೆಪಿ ವರಿಷ್ಠರು ತಮ್ಮ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಮುಂಚೂಣಿಗೆ ಬಿಟ್ಟಂತಿದೆ. ತನ್ನಿಮಿತ್ತ, ಮೊನ್ನೆ ಗಣೇಶನ ಹಬ್ಬದ ದಿನ ರಮೇಶ್ ಜಾರಕಿಹೊಳಿ ಅವರು ಸೀದಾ ಕುಮಾರಣ್ಣನ ಮನೆಗೆ ತೆರಳಿ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಮೈತ್ರಿ ಮಾತುಕತೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರ

ಅದರ ಮುಂದುವರಿದ ಭಾಗವಾಗಿ ಇಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರನ್ನು ಜೊತೆ ಮಾಡಿಕೊಂಡು ದಿಲ್ಲಿ ಫ್ಲೈಟ್​ ಹತ್ತಿದ್ದಾರೆ. ಅದೇ ವೇಳೆ, ಸೋಮವಾರ ಹಬ್ಬದ ದಿನ ಹೆಚ್ ಡಿಕೆ ಜೊತೆ ಮೀಟಿಂಗ್ ಮಾಡಿದ್ದ ರಮೇಶ್ ಜಾರಕಿಹೊಳಿ ಅವರೂ ಸಹ ಏಕಾಂಗಿಯಾಗಿ ದೆಹಲಿ ತಲುಪಿಕೊಂಡಿದ್ದಾರೆ.

ಇಂದು ಸಂಜೆ ಕಮಲ-ದಳ ದೋಸ್ತಿ ಅಂತಿಮ ಹಂತದ ಮಾತುಕತೆ ಏರ್ಪಟ್ಟಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಮತ್ತು ಗೃಹ ಸಚಿವ ಅಮಿತ್ ಶಾ ಜೊತೆ ಹೆಚ್ ಡಿ ಕೆ ಮೀಟಿಂಗ್ ನಡೆಯಲಿದೆ. ಅಮಿತ್ ಶಾ ಮೀಟಿಂಗ್ ಸಂದರ್ಭದಲ್ಲಿ ಬಹುತೇಕ ಮೈತ್ರಿ ಮತ್ತು ಸೀಟ್ ಷೇರಿಂಗ್ ಲೆಕ್ಕಾಚಾರ ಫೈನಲೈಸ್​ ಆಗುವ ಸಾಧ್ಯತೆಗಳಿವೆ.

ನಾಳೆ ಶುಕ್ರವಾರವೇ ಜಂಟಿ ಸುದ್ದಿಗೋಷ್ಠಿ ಮೂಲಕ ಮೈತ್ರಿ ಘೋಷಣೆ ಮಾಡುವ ಅಂದಾಜಿದೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ನಾಲ್ಕೈದು ಸೀಟು ಬೇಡಿಕೆ ಇಡಲು ಜೆಡಿಎಸ್ ನಿರ್ಧಾರ ಮಾಡಿದಂತಿದೆ. ಹಾಸನ, ಮಂಡ್ಯ, ತುಮಕೂರು, ಕೋಲಾರ ಕ್ಷೇತ್ರಗಳ ಮೇಲೆ ಜೆಡಿಎಸ್ ಕಣ್ಣು ನೆಟ್ಟಿದೆ. ಬಿಜೆಪಿ ತುಮಕೂರು ಬಿಟ್ಟುಕೊಡದಿದ್ರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನಾದರೂ ಕೇಳಲು ಜೆಡಿಎಸ್​ ಚಿಂತನೆ ನಡೆಸಿದೆ ಎನ್ನಲಾಗಿದೆ. ಮೈತ್ರಿ ಆಖೈರು ಆಗಿ, ಟಿಕೆಟ್​​ ಹಂಚಿಕೆ ಪೂರ್ತಿಯಾಗುತ್ತಿದ್ದಂತೆ​ ತಡವಾಗಿಯಾದರೂ ಕರ್ನಾಟಕ ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆಯಾಗುವ ಸಂಭವವೂ ಇದೆ ಎಂದು ರಾಜಕೀಯ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist