ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ ; ಕಾಂಗ್ರೆಸ್ ಗೆ ಮತ ಹಾಕಿದ ಶಾಸಕ..!

Twitter
Facebook
LinkedIn
WhatsApp
ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ ; ಕಾಂಗ್ರೆಸ್ ಗೆ ಮತ ಹಾಕಿದ ಶಾಸಕ..!

ಇಂದು (ಫೆ.27) ಬೆಳಿಗ್ಗೆಯಿಂದಲೇ ರಾಜ್ಯಸಭೆ ಚುನಾವಣೆ (Rajya Sabha Election) ಮತದಾನ ಆರಂಭವಾಗಿದೆ. ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ (BJP) ಶಾಸಕ ಎಸ್.ಟಿ.ಸೋಮಶೇಖರ್ (ST Somashekar) ಕಾಂಗ್ರೆಸ್ (Congress) ಪರ ಮತ ಚಲಾಯಿಸುವ ಮೂಲಕ ಅಡ್ಡ ಮತದಾನ ಮಾಡಿದ್ದಾರೆ. ಮಾತದಾನ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಆತ್ಮಸಾಕ್ಷಿಯ ಮತ ಚಲಾವಣೆ ‌ಮಾಡಿದ್ದೇನೆ ಎಂದು ಹೇಳಿದರು.

ಶಾಸಕ ಎಸ್​ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್​ ಅಶೋಕ್ ಕೊಠಡಿಯಲ್ಲಿ ಸಭೆ ಸೇರಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ “ತಲೆ ಕೆಡಿಸಿಕೊಳ್ಳುವುದು ಬೇಡ, ಅದು ಗೊತ್ತಿದ್ದ ವಿಷಯ” ಎಂಬ ಸಮಾಧಾನದ ಮಾತುಗಳನ್ನು ಆಡಿದ್ದಾರೆ.

ಇನ್ನು ಅಡ್ಡ ಮತದಾನ ಮಾಡಿರುವ ಎಸ್​​ಟಿ ಸೋಮಶೇಖರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. “ನಮಗೆ ಮತ ಹಾಕಿದ್ದರೆ ಸೋಮಶೇಖರ್​ಗೆ ಧನ್ಯವಾದ ತಿಳಿಸುವೆ” ಎಂದರು.

ಬಿಜೆಪಿಯಿಂದ ಶಿಸ್ತು ಕ್ರಮವೇನು? ಬಿಜೆಪಿ ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಈ ಮೂಲಕ ಎಲ್ಲ ಶಾಸಕರು ರಾಜ್ಯಸಭೆ ಚುನಾವಣೆಗೆ ಹಾಜರಾಗಬೇಕು. ಹಾಗೇ ಪಕ್ಷ ಸೂಚಿಸುವ ಅಭ್ಯರ್ಥಿಗೆ ಮತ ಹಾಕಬೇಕು. ಆದರೆ ಇಲ್ಲಿ ಶಾಸಕ ಎಸ್​ಟಿ ಸೋಮಶೇಖರ್​ ಅಡ್ಡ ಮತದಾನ ಮಾಡಿದ್ದು, ಬಿಜೆಪಿಯ ಮುಂದಿನ ನಡೆ ಏನು ಎಂಬುವುದು ಕಾದು ನೋಡಬೇಕಿದೆ. ಇನ್ನು ವಿಪ್​ ಉಲ್ಲಂಘನೆ ಮಾಡಿದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕಾಂಗ ಪಕ್ಷದ ನಾಯಕರು ಇಲ್ಲವೇ ಮುಖ್ಯ ಸಚೇತಕರು ಸ್ಪೀಕರ್‌ಗೆ ದೂರು ಸಲ್ಲಿಸಲು ಅವಕಾಶ ಇದೆ. ಆಗ ಶಾಸಕರು, ತಮ್ಮ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.

ಹೆಬ್ಬಾರ್​​ನಿಂದಲೂ ಬಿಜೆಪಿಗೆ ಶಾಕ್​ ಸಾಧ್ಯತೆ ಇನ್ನು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್​​ ಕೂಡ ಅಡ್ಡ ಮತದಾನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಿವರಾಮ ಹೆಬ್ಬಾರ್​ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಹೀಗಾಗಿ ಶಿವರಾಮ ಹೆಬ್ಬಾರ್​ ಕಾಂಗ್ರೆಸ್​ ಅಭ್ಯರ್ಥಿಗೆ ಮತಹಾಕು ಸಾಧ್ಯತೆ ಇದೆ ಎನ್ನಲಾಗಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಲ್ಕು ಸ್ಥಾನಗಳಿರುವ ಚುನಾವಣೆಗೆ ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಕ್ಷವಾರು ಸಂಖ್ಯಾ ಬಲ ನೋಡುವುದಾದರೆ ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19 ಮತ್ತು ನಾಲ್ವರು ಪಕ್ಷೇತರ ಶಾಸಕರು ಮತದಾನ ಮಾಡಲಿದ್ದಾರೆ. ಒಟ್ಟು 223 ಶಾಸಕರು ಮತದಾನ ಮಾಡುತ್ತಿದ್ದಾರೆ. 11 ಗಂಟೆಯವರೆಗೆ ಒಟ್ಟು ಶೇ. 50 ಮತ ಚಲಾವಣೆಯಾಗಿದೆ. ಒಟ್ಟು 112 ಶಾಸಕರು ಮತದಾನ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist