ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಅವಧಿಯ ಎಲ್ಲಾ ಹಗರಣಗಳನ್ನು ಹಂತ ಹಂತವಾಗಿ ತನಿಖೆ ನಡೆಸುತ್ತೇವೆ - ಪ್ರಿಯಾಂಕಾ ಖರ್ಗೆ

Twitter
Facebook
LinkedIn
WhatsApp
1 20

ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳ ಕುರಿತಾಗಿ ಹಂತ ಹಂತವಾಗಿ ತನಿಖೆ ನಡೆಸಲಾಗುವುದು, ಜನರಿಗೆ ನಾವು ಕೊಟ್ಟ ಮಾತಿಗೆ ಬದ್ದರಾಗಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು,‌ ಜನರಿಗೆ ಗ್ಯಾರಂಟಿ ಕೊಟ್ಟಿದ್ದೆವು ತನಿಖೆ ಮಾಡುಸ್ತೇವೆ ಎಂದು,‌ ಬಿಜೆಪಿ ಹಗರಣಗಳ ಕುರಿತು ಯಾವ ತಂಡಗಳಿಗೆ ತನಿಖೆಗೆ ಕೊಡಬೇಕು ಎಂಬ ನಿಟ್ಟಿನಲ್ಲಿ ಸರ್ಕಾರದಲ್ಲಿ ತೀರ್ಮಾನ ಆಗ್ತಾ ಇದೆ ಎಂದರು.

ಬೇರೆ ಬೇರೆ ರೀತಿಯ ಹಗರಣಗಳು ಇವೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸೈಬರ್ ಎಕ್ಸಪರ್ಟ್ ತಂಡದ ಅಗತ್ಯವಿದೆ. ಕೆಲವು ಹಗರಣಗಳ ತನಿಖೆಗೆ ಎಸ್ ಐಟಿ ಮಾಡಲಿದೆ. ಕೆಲವು ಇಲಾಖಾವಾರು ತನಿಖೆ ಆಗುತ್ತೆ ಹಾಗೂ ಕೆಲವೊಂದು ನ್ಯಾಯಾಂಗ ತನಿಖೆ ಆಗಲಿದೆ ಎಂದರು.

ಯಾವ್ಯಾವ ಹಗರಣ ಯಾವ ರೀತಿಯಲ್ಲಿ ಮಾಡಿದ್ದಾರೆ. ಆ ರೀತಿಯಲ್ಲಿ ತನಿಖೆ ಆಗುತ್ತೆ. ನಾವು ಜನರಿಗೆ ಗ್ಯಾರಂಟಿ ಕೊಟ್ಟಿದ್ವಿ ತನಿಖೆ ಮಾಡಿಸ್ತೇವೆ ಎಂದು, ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಬಿಟ್ ಕಾಯಿನ್,‌ ಪಿಎಸ್ಐ ಹಗರಣ, ಗಂಗಾ ಕಲ್ಯಾಣ ಹಗರಣ,‌ ಕೆಪಿಟಿಸಿಎಲ್ ನೇಮಕಾತಿ ಹಗರಣ, ಅಸಿಸ್ಟೆಂಟ್ ಪ್ರೊಫೆಸರ್ ಹಗರಣ, ಕೋವಿಡ್ ಸಮಯದ ಭ್ರಷ್ಟಾಚಾರ ಈ ಎಲ್ಲ ವಿಚಾರಗಳನ್ನು ತನಿಖೆ ಮಾಡಿಸುತ್ತೇವೆ ಎಂದರು.

ಈ‌ ಹಿಂದೆ ಈ ಹಗರಣಗಳ ಆರೋಪದ ಬಗ್ಗೆ ತನಿಖೆಗೆ ನಾವೇ ಹಿಂದೆ ಒತ್ತಾಯ ಮಾಡಿದ್ವಿ, ಜನ ಆಶೀರ್ವಾದ ಮಾಡಿದ್ದಾರೆ. ಜನರ ನಿರೀಕ್ಷೇಗೆ ತಕ್ಕಂತೆ ನಾವು ನಡೆಸುಕೊಳ್ಳುತ್ತೇವೆ ಎಂದು ಹೇಳಿದರು.

ಗಂಗಾ ಕಲ್ಯಾಣ ಅಕ್ರಮ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ಆಗಿದೆ. ಕಲ್ಯಾಣ ಕರ್ನಾಟಕ ಯೋಜನೆ ಸಾವಿರಾರು ಕೋಟಿ ಅಕ್ರಮ ಆಗಿದೆ. ಇದರ ಬಗ್ಗೆ ಇಲಾಖಾವಾರು ತನಿಖೆ ನಡಿಯತ್ತಿದೆ. ಉನ್ನತ ಅಧಿಕಾರಗಳನ್ನು ತನಿಖಾ ತಂಡಕ್ಕೆ ನೇಮಕ ಮಾಡುತ್ತಾ ಇದ್ದೇವೆ.‌ ಹಂತ ಹಂತವಾಗಿ ತನಿಖೆ ಮಾಡಿಕೊಂಡು ಹೋಗುತ್ತೇವೆ ಎಂದರು.

ಹಗರಣದಲ್ಲಿ ಬಿಜೆಪಿ ಸಚಿವರು, ಶಾಸಕರು ಭಾಗಿ ವಿಚಾರವಾಗಿ ಮಾತನಾಡಿ, ‌ಯಾರೇ ಭಾಗಿಯಾಗಿದ್ರು ಶಿಕ್ಷೆ ಆಗಬೇಕು.
ನಾನೇ ಭಾಗಿಯಾಗಿದ್ರು ಕೂಡ ಶಿಕ್ಷೆ ಆಗಬೇಕು. ಬಿಜೆಪಿಯವರು ಹೇಳ್ತಾ ಇದ್ರು ಪ್ರಿಯಾಂಕ್ ಖರ್ಗೆ ಸಿಕ್ಕಿಹಾಕಿಕೊಳ್ತಾರೆ ಅಂತ,‌ ಕಾಂಗ್ರೆಸ್ ಅವರೆ ಸಿಕ್ಕಿ ಹಾಕಿಕೊಳ್ತಾರೆ ಅಂತಿದ್ರು. ಬರಲಿ, ಯಾರೇ ತಪ್ಪು ಮಾಡಿದರೂ ಅವರು ಸಿಕ್ಕಿಹಾಕಿಕೊಳ್ತಾರೆ ಎಂದರು‌.

ನಮ್ಮ ಹೆಸರು ಆದ್ರೂ ಬರಲಿ, ಬಿಜೆಪಿಯವರ ಹೆಸರು ಆದ್ರೂ ಬರಲಿ,‌ ಯಾರೇ ಭಾಗಿಯಾಗಿದ್ರು ಮುಲಾಜಿಲ್ಲದೆ ಒಳಗೆ ಹಾಕ್ತೇವೆ.
ನನ್ನ ಪ್ರಕಾರ ಕೆಪಿಎಸ್ಸಿ , ಕೆಇಎ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯ ಏನಾಗಬೇಕು, ಕೆಲವರಿಗೆ ವಯಸ್ಸಾಗುತ್ತಿದೆ. ಕೆಲವರು ಪ್ರಾಮಾಣಿಕರು ಇದ್ದಾರೆ. ನಮಗೆ ಯುವಕರ ಭವಿಷ್ಯ ಮುಖ್ಯ ಈ ಹಿನ್ನಲೆಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗದುಕೊಳ್ಳುತ್ತೇವೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist