ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Breaking News: ವಿಶ್ವಾಸಮತಕ್ಕೂ ಮುನ್ನವೇ ಉದ್ಧವ್‌ ಠಾಕ್ರೆ ರಾಜೀನಾಮೆ! (Uddhav Thackeray resign)

Twitter
Facebook
LinkedIn
WhatsApp
Breaking News: ವಿಶ್ವಾಸಮತಕ್ಕೂ ಮುನ್ನವೇ ಉದ್ಧವ್‌ ಠಾಕ್ರೆ ರಾಜೀನಾಮೆ! (Uddhav Thackeray resign)

ಮುಂಬೈ (ಜೂನ್‌ 29): (Uddhav Thackeray resign) ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ ಬೆನ್ನಲ್ಲಿಯೇ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಉದ್ಧವ್‌ ಠಾಕ್ರೆ ರಾಜೀನಾಮೆ ಸಲ್ಲಿಸಿದ್ದಾರೆ. ರಾತ್ರಿ 9 ಗಂಟೆಯ ವೇಳೆಗೆ ಸುಪ್ರೀಂ ಕೋರ್ಟ್‌ ಗುರುವಾರವೇ ವಿಶ್ವಾಸಮತ ನಡೆಸಿ ಎಂದು ಹೇಳಿದ ಬೆನ್ನಲ್ಲಿಯೇ ರಾತ್ರಿ 9.30ರ ವೇಳೆಗೆ ಫೇಸ್‌ ಬುಕ್‌ ಲೈವ್‌ ಬಂದ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಗುರುವಾರ ಸಂಜೆ 5 ಗಂಟೆಯ ಒಳಗಾಗಿ ಮಹಾರಾಷ್ಟ್ರ ವಿಧಾನಸಭೆಯ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಆದೇಶ ನೀಡಿತ್ತು. ಜೈಲಿನಲ್ಲಿರುವ ಮಹಾರಾಷ್ಟ್ರದ ಸಚಿವರಾದ ನವಾಬ್ ಮಲೀಕ್‌ ಹಾಗೂ ಅನಿಲ್‌ ದೇಶ್‌ಮುಖ್‌ ಅವರಿಗೂ ವಿಶ್ವಾಸಮತ ವೇಳೆ ಮತ ಹಾಕಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿತ್ತು.

ಆದರೆ, ಇದಾವುದಕ್ಕೂ ಕಾಯದ ಉದ್ಧವ್‌ ಠಾಕ್ರೆ ಫೇಸ್‌ ಬುಕ್‌ ಲೈವ್‌ ಮೂಲಕ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅದರೊಂದಿಗೆ ಬಿಜೆಪಿ ಹಾಗೂ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಣದ ಮೈತ್ರಿ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರ ಸ್ಥಾಪಿಸಲು ತನ್ನ ಕೆಲಸ ಆರಂಭಿಸಿದೆ.

ಕೋರ್ಟ್‌ ಹೇಳಿದ್ದೇನು?
ಗುರುವಾರ ಸಂಜೆ 5 ಗಂಟೆಯ ಒಳಗಾಗಿ ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಶಿವಸೇನೆಯ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ಈ ರೀತಿಯಾಗಿ ಹೇಳಿದೆ.

ಉದ್ಧವ್ ಠಾಕ್ರೆ ಸರ್ಕಾರ ಅಲ್ಪಮತಕ್ಕೆ ಜಾರಿದೆ. ಹೀಗಾಗಿ ಗುರುವಾರ ಸಂಜೆ ಐದು ಗಂಟೆಯ ಒಳಗಾಗಿ ವಿಶ್ವಾಸಮತ ಸಾಬೀತು ಮಾಡಬೇಕು ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೊಶ್ಯಾರಿ ಆದೇಶ ನೀಡಿದ್ದರು. ಇದನ್ನು ಪ್ರಶ್ನೆ ಮಾಡಿ ಶಿವಸೇನೆಯ ಮುಖ್ಯಸಚೇತ ಸುನಿಲ್‌ ಪ್ರಭು ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜೆಬಿ ಪರ್ಡಿವಾಲ ಅವರಿದ್ದ ರಜಾಕಾಲದ ದ್ವಿಸದಸ್ಯ ಪೀಠ, ರಾಜ್ಯಪಾಲರ ಸೂಚನೆಯಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ವಿಶ್ವಾಸಮತ ಯಾಚನೆಯ ಫಲಿತಾಂಶವು ಸುಪ್ರೀಂ ಕೋರ್ಟ್ ಪ್ರಕರಣದ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ಪೀಕರ್ ಮತ್ತು ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಜುಲೈ 11 ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ