ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ, ಕಾರಣವೇನು ಗೊತ್ತಾ?

Twitter
Facebook
LinkedIn
WhatsApp
23

ಚಿಕ್ಕಬಳ್ಳಾಪುರ: ಸಾರಿಗೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು (Students) ತೊಂದರೆ ಅನುಭವಿಸುತಂತಾಗಿದೆ ಎಂದು ಆರೋಪಿಸಿ ಬಸ್ (Bus) ತಡೆದು ಪ್ರತಿಭಟನೆ ನಡೆಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.

ಸೋಮವಾರ ಬೆಳಗ್ಗೆ ಹುಲಿಕುಂಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ಸನ್ನು ವಿದ್ಯಾರ್ಥಿಗಳು ತಡೆದಿದ್ದಾರೆ. ದೊಡ್ಡಬಳ್ಳಾಪುರ-ತುಮಕೂರು ಮಾರ್ಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಒಂದೇ ಬಸ್ಸಿನಲ್ಲಿ 130 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾಗಬೇಕಾಗಿದೆ. ಬಸ್ಸಿನ ಡೋರಿನಲ್ಲೇ ನೇತಾಡಿಕೊಂಡು ತೆರಳಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದೆ. ಆದರೂ ಬಸ್‍ಗಳ ವ್ಯವಸ್ಥೆ ಮಾಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಆಯತಪ್ಪಿ ಬಿದ್ದು ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಸಮರ್ಪಕ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡುವ ವರೆಗೂ ಬಸ್ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಜನ ಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ 55 ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

ಉಡುಪಿ/ದಕ್ಷಿಣ ಕನ್ನಡ: 2023-24ನೇ ಸಾಲಿನ ಶೈಕ್ಷಣಿಕ ವರ್ಷ (2023-24 Academic Year) ಆರಂಭವಾಗಿ ಒಂದು ತಿಂಗಳು ಕಳೆಯಿತು. ಶಾಲೆಗಳ (School) ಬಾಗಿಲು ತೆರದಿದ್ದು, ಬೇಸಿಗೆ ರಜೆ ಕಳೆದು ಮಕ್ಕಳು ಶಾಲೆಗಳಿಗೆ ಹೋಗುತ್ತಿದ್ದಾರೆ. ಇನ್ನು ಹೊಸದಾಗಿ ಮಕ್ಕಳು ಶಾಲೆಗಳಿಗೆ ದಾಖಲಾಗುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳ ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ (Government Primary School) ಒಂದನೇ ತರಗತಿಗೆ ಮಕ್ಕಳ ದಾಖಲೆ ಸಂಖ್ಯೆ ಶೂನ್ಯವಾಗಿರುವುದು ಅಚ್ಚರಿ ಮೂಡಿಸಿದೆ. ಹೌದು ಎರಡು ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಒಂದನೇ ತರಗತಿಗೆ ಯಾವುದೇ ವಿದ್ಯಾರ್ಥಿ ದಾಖಲಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ.

ದಕ್ಷಿಣ ಕನ್ನಡದ 24 ಶಾಲೆಗಳಲ್ಲಿ ಒಂದನೇ ತರಗತಿಗೆ ಶೂನ್ಯ ದಾಖಲಾತಿ. ಪುತ್ತೂರು ತಾಲೂಕಿನ ಎರಡು, ಬಂಟ್ವಾಳದ ನಾಲ್ಕು, ಬೆಳ್ತಂಗಡಿಯಲ್ಲಿ ಮೂರು, ಮಂಗಳೂರು ಉತ್ತರದಲ್ಲಿ ಎರಡು, ಮಂಗಳೂರು ದಕ್ಷಿಣದಲ್ಲಿ ಎರಡು, ಮೂಡುಬಿದಿರೆಯ ಮೂರು ಮತ್ತು ಸುಳ್ಯ ತಾಲೂಕಿನ ಎಂಟು ಶಾಲೆಗಳಿಗೆ ಮಕ್ಕಳ ದಾಖಲಾತಿ ಸಂಖ್ಯೆ ಶೂನ್ಯವಾಗಿದೆ.

ಈ ಬಗ್ಗೆ ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (DDPI) ಆರ್ ದಯಾನಂದ ಮಾತನಾಡಿ, ಪ್ರವೇಶಕ್ಕೆ ಇನ್ನೂ ಸಮಯವಿದ್ದು, ಮಕ್ಕಳು ಶಾಲೆಗಳಿಗೆ ಸೇರುವ ಸಾಧ್ಯತೆಯಿದೆ. ಗ್ರೇಡ್‌ವಾರು ಡೇಟಾ ಕ್ರೋಢೀಕರಣ ಪ್ರಕ್ರಿಯೆಯು ನಡೆಯುತ್ತಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ 31 ಶಾಲೆಗಳಲ್ಲಿ ಒಂದನೇ ತರಗತಿಗೆ ಶೂನ್ಯ ದಾಖಲಾತಿ ಇದೆ. ಉಡುಪಿಯಲ್ಲಿ ನಾಲ್ಕು, ಬ್ರಹ್ಮಾವರದಲ್ಲಿ ನಾಲ್ಕು, ಕುಂದಾಪುರದಲ್ಲಿ ಐದು, ಬೈಂದೂರಿನಲ್ಲಿ ಒಂಬತ್ತು, ಕಾರ್ಕಳ ತಾಲೂಕಿನಲ್ಲಿ ಒಂಬತ್ತು ಶಾಲೆಗಳ ಒಂದನೇ ತರಗತಿಗೆ ದಾಖಲಾದ ಮಕ್ಕಳ ಸಂಖ್ಯೆ ಶೂನ್ಯವಾಗಿದೆ.

ಉತ್ತಮ ಮೂಲಸೌಕರ್ಯ ಮತ್ತು ಸಾರಿಗೆ ಸೌಲಭ್ಯ ಹೊಂದಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಏರಿಕೆಯಾಗಿರುವುದು ಸರ್ಕಾರಿ ಶಾಲೆಗಳ ಪ್ರವೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist