ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!
ಮಂಗಳೂರು : ಮಂಗಳೂರು ಮೀನುಗಾರಿಕೆ ಬಂದರಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿ ಸಿಲುಕಿಕೊಂಡಿದ್ದ ಮೀನುಗಾರಿಕಾ ದೋಣಿಯಿಂದ 10 ಮಂದಿ ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ರಕ್ಷಿಸಿದೆ.
ಮಂಗಳೂರು ಮೀನುಗಾರಿಕಾ ಧಕ್ಕೆಯಿಂದ 39 ನಾಟಿಕಲ್ ಮೈಲ್ ದೂರದ ಸಮುದ್ರದ ಮಧ್ಯೆ ಸೆ.24ರಿಂದ ಇಂಜಿನ್ನ ತಾಂತ್ರಿಕ ವೈಫಲ್ಯದಿಂದ ತೊಂದರೆಗೆ ಮೀನುಗಾರಿಕಾ ಬೋಟ್ ಸಿಲುಕಿಕೊಂಡಿತ್ತು.
2 ದಿನಗಳಿಂದ ಪ್ರತಿಕೂಲ ಹವಮಾನದ ಮಧ್ಯೆ 10 ಮಂದಿ ಮೀನುಗಾರರು ಸಮುದ್ರ ಮಧ್ಯೆ ಏನೂ ಮಾಡಲಾಗದೆ ಸಿಕ್ಕಿಹಾಕಿಕೊಂಡಿದ್ದರು.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿದ್ದ ಬಗ್ಗೆ ಬೋಟ್ನಿಂದ ರಕ್ಷಣೆಗಾಗಿ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್ಸೆಪ್ಟರ್ ಬೋಟ್ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್ನ್ನು ಮತ್ತು ಮೀನುಗಾರರನ್ನು ರಕ್ಷಣೆ ಮಾಡಿದೆ.
ಕೆಟ್ಟು ಹೋದ ಮೀನುಗಾರಿಕಾ ದೋಣಿಯನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದಿದೆ.
ಕರಾವಳಿಯಲ್ಲಿ ಬಂದ್ ಗೆ ನೈತಿಕ ಬೆಂಬಲ – ಜನಜೀವನ ಯಥಾಸ್ಥಿತಿ
ಮಂಗಳೂರು/ಉಡುಪಿ, ಸೆ 29 : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಬಂದ್ ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್ ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸುತ್ತಿದೆ.
ಕಾವೇರಿ ವಿಚಾರವಾಗಿ ನಮಗೆ ಸಹಾನುಭೂತಿಯಿದ್ದು ಆದರೆ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗಲಿದೆ ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್ಗೆ ನೈತಿಕ ಸೂಚಿಸಿದ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ.