ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೈತ್ರ ಕುಂದಾಪುರ ವಂಚನೆ ಪ್ರಕರಣ: 101 ಈಡುಗಾಯಿ ಹೊಡೆದ ಮಲೆನಾಡಿಗರು..!

Twitter
Facebook
LinkedIn
WhatsApp
ಚೈತ್ರ ಕುಂದಾಪುರ ವಂಚನೆ ಪ್ರಕರಣ: 101 ಈಡುಗಾಯಿ ಹೊಡೆದ ಮಲೆನಾಡಿಗರು..!

ಚಿಕ್ಕಮಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaithra Kundapura), ಸಿಸಿಬಿ (CCB) ಪೊಲೀಸರ ಅತಿಥಿಯಾಗಿರುವುದಕ್ಕೆ ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಗ್ರಾಮದ ಜನರು ಆನೆ ವಿಘ್ನೇಶ್ವರ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಗಿ ಹೊಡೆದು ಸಂಭ್ರಮಿಸಿದ್ದಾರೆ.

ಕಳೆದ ಅಕ್ಟೋಬರ್ 4 ರಂದು ಮಾವಿನಕಟ್ಟೆ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಹಿಂದೂಗಳ ಮನಸ್ಸಿಗೆ ನೋವಾಗುವಂತಹ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಭಾಷಣಕ್ಕೆ ಸ್ಥಳೀಯರೇ ಬೇಸರ ವ್ಯಕ್ತಪಡಿಸಿದ್ದರು. ಸಹಬಾಳ್ವೆಯಿಂದಿದ್ದ ಗ್ರಾಮಕ್ಕೆ ಕಾಲಿಟ್ಟು ಶಾಂತಿ ಕದಡುವ ಕೆಲಸ ಮಾಡಿದ್ದರು. ಹಿಂದೂಗಳ ವಿರುದ್ಧ ಹಿಂದೂಗಳನ್ನೇ ಎತ್ತಿಕಟ್ಟುವ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಅಂದು ಊರಿನ ಜನ ಆನೆ ವಿಘ್ನೇಶ್ವರ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿಗೆ, ಈ ವರ್ಷದೊಳಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು. ಅದರಂತೆ ಈಗ ಬಿಜೆಪಿ ಟಿಕೆಟ್ ವಿಚಾರದ ವಂಚನೆ ಪ್ರಕರಣದಲ್ಲಿ ಚೈತ್ರ ಲಾಕ್ ಆಗಿರುವುದರಿಂದ ಸಂತಸ ವ್ಯಕ್ತಪಡಿಸಿರುವ ಮಾವಿನಕಟ್ಟೆ ಗ್ರಾಮದ ಜನ ಆಕೆ ಕಾಲಿಟ್ಟ ಜಾಗವನ್ನು ಶುದ್ಧೀಕರಣ ಮಾಡಿದ್ದಾರೆ.

ಆನೆ ವಿಘ್ನೇಶ್ವರ ಸ್ವಾಮಿ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಆಕೆ ಭಾಷಣ ಮಾಡಿದ ಜಾಗಕ್ಕೆ ತೀರ್ಥ ಹಾಕಿ ಶುದ್ಧ ಮಾಡಿದ್ದಾರೆ. ಜೊತೆಗೆ ಆಕೆ ಭಾಷಣ ಮಾಡಿದ ಜಾಗದಲ್ಲೇ 101 ತೆಂಗಿನಕಾಯಿ ಹೊಡೆದು ಸಂತಸಪಟ್ಟಿದ್ದಾರೆ. 

ಸದ್ಯಕ್ಕೆ ಚೈತ್ರಾ ಕುಂದಾಪುರ, ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸಿನಿಮಾ ಕಥೆಗೂ ಮೀರಿ ಗೋವಿಂದ ಬಾಬುರನ್ನು ಯಾಮಾರಿಸಲು ವಿಭಿನ್ನ ಕಥೆ ಎಣೆದಿದ್ದ ಚೈತ್ರಾ ಮತ್ತು ಆಕೆಯ ತಂಡದ ಒಂದೊಂದು ಕಥೆ ಹೊರಬರುತ್ತಿದ್ದು, ಚೈತ್ರಾಳ ಕಥೆ ದಿನದಿಂದ ದಿನಕ್ಕೆ ಟ್ವಿಸ್ಟ್‌ ಪಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist