ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

CHIKKAMAGALURU ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಜಾರಿ; ಸ್ಲೀವ್‌ಲೆಸ್ ಡ್ರೆಸ್, ಸಾಕ್ಸ್ ಹಾಕ್ಕೊಂಡು ಬರುವಂತಿಲ್ಲ!

Twitter
Facebook
LinkedIn
WhatsApp
CHIKKAMAGALURU ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಜಾರಿ; ಸ್ಲೀವ್‌ಲೆಸ್ ಡ್ರೆಸ್, ಸಾಕ್ಸ್ ಹಾಕ್ಕೊಂಡು ಬರುವಂತಿಲ್ಲ!

ಚಿಕ್ಕಮಗಳೂರು, ಆ.05: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ(Bindiga Deviramma Temple) ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಸಂಪ್ರದಾಯಿಕ ಉಡುಗೆ ಧರಿಸಿ ದೇವಾಲಯಕ್ಕೆ ಬರುವಂತೆ ದೇವಾಲಯ ಅಡಳಿತ ಮಂಡಳಿ ಸೂಚಿಸಿದೆ. ಹಾಗೂ ಸಂಪ್ರದಾಯಿಕ ಉಡುಗೆ ಧರಿಸದೆ ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯದ ಒಳಗೆ ನಿಷೇಧ ಹೇರಲಾಗಿದೆ.

ಹಿಂದು ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ಬಿಂಡಿಗ ದೇವೀರಮ್ಮ ದೇವಾಲಯಕ್ಕೆ ದೀಪಾವಳಿ ದಿನ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಬಿಂಡಿಗ ದೇವೀರಮ್ಮ ಬೆಟ್ಟಕ್ಕೆ ರಾಜ್ಯ ಹೊರ ರಾಜ್ಯದಿಂದ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಬಿಂಡಿಗ ದೇವಾಲಯ ಮತ್ತು ಬೆಟ್ಟಕ್ಕೆ ಬರುವವರಿಗೆ ವಸ್ತ್ರ ಸಂಹಿತೆ ರೂಲ್ಸ್ ಹಾಕಲಾಗಿದೆ. ಇನ್ನು ಭಕ್ತರು ದೇವಾಲಯಕ್ಕೆ ಬೇಕಾಬಿಟ್ಟಿಯಾಗಿ ಬರುತ್ತಾರೆ. ಹೆಣ್ಣು ಮಕ್ಕಳು ಟೈಟ್ ಜೀನ್ಸ್, ಸ್ಕರ್ಟ್, ಶಾರ್ಟ್ಸ್ ಧರಿಸಿ ಬರುತ್ತಾರೆ. ಹಾಗೂ ಪುರುಷರು ನೈಟ್ ಪ್ಯಾಟ್, ಶಾರ್ಟ್​​ ಧರಿಸಿ ಬರುತ್ತಾರೆ. ಇದರಿಂದ ದೇವಾಲಯದ ಭಕ್ತಿಯ ವಾತವರಣ ಹಾಳಾಗುತ್ತಿದೆ ಎಂದು ಈ ಹಿಂದೆಯೇ ಕೆಲ ಸಂಘಟನೆಗಳು ವಾದಿಸಿದ್ದವು. ಸದ್ಯ ಈಗ ಸಿದ್ಧ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಅಲ್ಲದೆ ಅನೇಕ ದೇವಾಲಯಗಳ ಕಮಿಟಿಗಳು ಈ ಕಾನೂನನ್ನು ಈಗಾಗಲೇ ಜಾರಿ ಮಾಡಿವೆ. ಪ್ರಸಿದ್ಧ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಇದೆ.

ಕಾಫಿನಾಡಿನಲ್ಲಿರುವ ಬಿಂಡಿಗ ದೇವಿರಮ್ಮನ ದೇವಾಲಯ ವರ್ಷಕ್ಕೆ ಒಮ್ಮೆ ಮಾತ್ರ ತೆರೆಯುತ್ತದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ಗ್ರಾಮದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ 3 ಸಾವಿರ ಅಡಿ ಎತ್ತರದ ಬೆಟ್ಟವೇ ದೇವೀರಮ್ಮ ಬೆಟ್ಟ. ತಾಯಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯಗಳಿಂದಲೂ ಭಕ್ತರು ಬರಿ ಕಾಲಿನಲ್ಲಿ ನಡೆದುಕೊಂಡು ಬರುತ್ತಾರೆ. ಭಕ್ತರಿಗೆ ದೇವಿರಮ್ಮನ ದರ್ಶನ ಭಾಗ್ಯ ಸಿಗುವುದು ದೀಪಾವಳಿಯ ನರಕ ಚತುರ್ದಶಿಯಂದು ಮಾತ್ರ. ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ತಾಯಿಯನ್ನು ಕಾಣುತ್ತಾರೆ. ಇಲ್ಲಿ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯನ್ನು ಹೊತ್ತು. ನರಕ ಚತುರ್ದಶಿಯಂದು ತಾಯಿಗೆ ಅರ್ಪಿಸುತ್ತಾರೆ. ಹರಕೆಯ ರೂಪದಲ್ಲಿ ತಾಯಿಗೆ ತುಪ್ಪ, ಬಳೆ, ಬಟ್ಟೆ, ಕಟ್ಟಿಗೆಗಳನ್ನು ಅರ್ಪಿಸಲಾಗುತ್ತೆ.

ಆ.5ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ (Karnataka Rain) ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್‌ 3 ರಿಂದ ಆಗಸ್ಟ್‌ 5ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ   
ಕರ್ನಾಟಕದ ಪ್ರಮುಖ ಜಲಾಶಯಗಳು (Dam)ಗರಿಷ್ಠ ನೀರಿನ ಮಟ್ಟ (ಮೀ)ಒಟ್ಟು ಸಾಮರ್ಥ್ಯ (ಟಿಎಂಸಿ)ಇಂದಿನ ನೀರಿನ ಮಟ್ಟ (ಟಿಎಂಸಿ)ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ)ಒಳಹರಿವು (ಕ್ಯೂಸೆಕ್ಸ್​​)ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam)519.60123.08117.04108.669605444231
ತುಂಗಭದ್ರಾ ಜಲಾಶಯ (Tungabhadra Dam)497.71105.7984.30100.99214924493
ಮಲಪ್ರಭಾ ಜಲಾಶಯ (Malaprabha Dam)633.8037.7320.9025.774430194
ಲಿಂಗನಮಕ್ಕಿ ಜಲಾಶಯ (Linganamakki Dam)554.44151.7570.9596.42128546055
ಕಬಿನಿ ಜಲಾಶಯ (Kabini Dam)696.1319.5218.9119.1743665750
ಭದ್ರಾ ಜಲಾಶಯ (Bhadra Dam)657.7371.5446.8469.455850191
ಘಟಪ್ರಭಾ ಜಲಾಶಯ (Ghataprabha Dam)662.9151.0038.9538.71122481828
ಹೇಮಾವತಿ ಜಲಾಶಯ (Hemavathi Dam)890.5837.1030.5237.102215200
ವರಾಹಿ ಜಲಾಶಯ (Varahi Dam)594.3631.1011.0415.2017720
ಹಾರಂಗಿ ಜಲಾಶಯ (Harangi Dam)​​871.388.508.207.7220002166
ಸೂಫಾ (Supa Dam)564.00145.3377.8867.59109122291

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist