ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಕೆಎಸ್‌ಅರ್‌ಟಿಸಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

Twitter
Facebook
LinkedIn
WhatsApp
photo 1616353071588 708dcff912e2 27

ಚಿಕ್ಕಮಗಳೂರು: ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್​ಆರ್​ಟಿಸಿ(KSRTC) ಬಸ್ಸಿನ ಗ್ಲಾಸ್ ಒಡೆದು, ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು(Kaduru) ತಾಲೂಕಿನ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ. ನಿನ್ನೆ(ಜು.7) ಸಂಜೆ ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು KSRTC ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ನಾಲ್ವರು ಪುಂಡರ ವಿರುದ್ಧ ಪ್ರಕರಣ ದಾಖಲು

ಇನ್ನು ಘಟನೆ ವೇಳೆ ನಾಲ್ವರು ಮಧ್ಯ ಸೇವಿಸಿದ್ದು, ಅದರ ಅಮಲಿನಲ್ಲಿದ್ದ ಪುಂಡರು ಬಸ್ಸಿನ ಗ್ಲಾಸ್ ಒಡೆಯುವುದರ ಜೊತೆಗೆ ಪ್ರಶ್ನೆ ಮಾಡಿದ ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕನನ್ನ ಬೀರೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಲಿಸುತ್ತಿದ್ದ ಬಸ್ಸಿನ ಮೇಲೆ ಗಾಜಿನ ಬಾಟಲಿ ಎಸೆದ ನಾಲ್ವರ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ. ಇನ್ನು ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

ಬೆಸ್ಕಾಂ ಗ್ರಾಹಕರೇ ಎಚ್ಚರ! ವಿದ್ಯುತ್​​ ಬಿಲ್​ ಬಾಕಿ ಇದೆ ಎಂದು ಕರೆ ಮಾಡುತ್ತಾರೆ ಸೈಬರ್ ಕಳ್ಳರು; ಅಕೌಂಟ್​​ನಿಂದ ಹಣ ಮಾಯ

ಬೆಂಗಳೂರು: ಕರ್ನಾಟಕ ಸರ್ಕಾರ (Karnataka Government) ಮಹತ್ವದ 5 ಗ್ಯಾರಂಟಿ (5 Guarantee) ಯೋಜನೆಗಳಲ್ಲಿ ಒಂದಾದ “ಗೃಹ ಜ್ಯೋತಿ”ಗೆ (Gruha Jyothi) ಅಭೂತಪೂರ್ವ ರೆಸ್ಪಾನ್ಸ್​ ದೊರೆತಿದೆ. ಆದರೆ ಆರಂಭದ ವೇಳೆಯೇ ಸೈಬರ್ ಕಳ್ಳರ (Cyber thieves) ಕೈಚಳಕ ಆತಂಕ ಮೂಡಿಸಿದೆ. ಆರೋಪಿಗಳು ಬೆಸ್ಕಾಂ (BESCOM) ಗ್ರಾಹಕರಿಗೆ ಕರೆ ಮಾಡಿ ​ಬಿಲ್ ಬಾಕಿ ಇದೆ ಬೇಗ ಬಿಲ್ ಕಟ್ಟಿ ಇಲ್ಲವಾದರೆ ಕನೆಕ್ಷನ್ ಕಟ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ದೋಚಿರುವ ಆರೋಪ ಕೇಳಿಬಂದಿದೆ. ಹೀಗೆ ನಗರದ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್​ ಅವರಿಗೆ ಕರೆ ಮಾಡಿ ಸುಳ್ಳು ಹೇಳಿ ಅಕೌಂಟ್​ನಿಂದ 53 ಸಾವಿರ ರೂ. ವಂಚಿಸಿದ್ದಾರೆ.

ಸೈಬರ್ ಕಳ್ಳರು ಮೊದಲಿಗೆ ನಾರಾಯಣ್ ಅವರ ಮೊಬೈಲ್ ನಂಬರ್​ಗೆ ಒಂದು ಲಿಂಕ್ ಕಳಿಸಿದ್ದಾರೆ. ಬಳಿಕ ಕರೆ ಮಾಡಿ ಬೆಸ್ಕಾಂ ಬಿಲ್ ಬಾಕಿ ಇದೆ ಎಂದು ಹೇಳಿದ್ದಾರೆ. ನೀವು ಇಂದೇ ಬೆಸ್ಕಾಂ ಬಿಲ್ ಕಟ್ಟಬೇಕು ಇಲ್ಲವಾದರೇ ಕನೆಕ್ಷನ್ ಕಟ್ ಆಗುತ್ತೆ ಎಂದು ಹೇಳಿದ್ದಾರೆ. ಅದಕ್ಕೆ ನಾರಾಯಣ್ ಪ್ರಸಾದ್ ಗಾಬರಿಯಾಗಿ ಹೇಗೆ ತುಂಬುವುದು ಎಂದಿದ್ದಾರೆ.

ಆರೋಪಿಗಳು ನಾವು ಕಳುಹಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಫಾಲೋ ಮಾಡಿ ಎಂದಿದ್ದಾರೆ. ಸೈಬರ್ ಕಳ್ಳರ ಮಾತು ಕೇಳಿ ನಾರಾಯಣ್ ಪ್ರಸಾದ್​ ಲಿಂಕ್ ಕ್ಲಿಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಈ ವೇಳೆ ನಾರಾಯಣ್ ಪ್ರಸಾದ್​ ಮೊದಲು ಒಂದು ರೂಪಾಯಿ ಕಳುಹಿಸಿದ್ದಾರೆ. ಬಳಿಕ ಹಂತ ಹಂತವಾಗಿ 9 ಸಾವಿರ 10 ಸಾವಿರ ಹಣ ಅಕೌಂಟ್​​​ನಿಂದ ಕಟ್ ಆಗಿತ್ತು. ಬಳಿಕ ನಾರಾಯಣ್​ ಪ್ರಸಾದ್​​ ಅಕೌಂಟ್​ ಚೆಕ್​​ ಮಾಡಿದಾಗ 53 ಸಾವಿರ ರೂ. ಕಟ್​​ ಆಗಿರುವುದು ತಿಳಿದಿದೆ. ಸದ್ಯ ನಾರಾಯಣ್ ಪ್ರಸಾದ್ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ. ಪೊಲೀಸರು 420 ವಂಚನೆ ಅಡಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ