ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಕೋಚಿಂಗ್ ಆಪರೇಟರ್ ನಿಂದ ಹತ್ಯೆ!

Twitter
Facebook
LinkedIn
WhatsApp
9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಕೋಚಿಂಗ್ ಆಪರೇಟರ್ ನಿಂದ ಹತ್ಯೆ!

ವಾರಣಸಿ ನಿವಾಸಿಯಾಗಿರುವ 9ನೇ ತರಗತಿ ವಿದ್ಯಾರ್ಥಿನಿ ಕೋಚಿಂಗ್ ಸೆಂಟರ್ ಸೇರಿಕೊಂಡಿದ್ದಾಳೆ. ಕೋಚಿಂಗ್ ಆಪರೇಟರ್ 43 ವರ್ಷದ ಸಂಜಯ್ ಪಟೆಲ್ ಈ ವಿದ್ಯಾರ್ಥಿನಿ ಮೇಲೆ ಕಣ್ಣು ಹಾಕಿದ್ದಾನೆ. ಪುಸಲಾಯಿಸಿ ಸ್ನೇಹ ಬೆಳೆಸಿದ್ದಾನೆ. ಬಳಿಕ ಒಳ್ಳೆ ಕೆಲಸ, ಉತ್ತಮ ವಿಧ್ಯಾಭ್ಯಾಸ ಸೇರಿದಂತೆ ಹಲವು ಆಮಿಷಗಳನ್ನು ಒಡ್ಡಿದ್ದಾನೆ. ಇಷ್ಟೇ ಅಲ್ಲ ಕೆಲ ಫೋಟೋಗಳನ್ನು ಎಡಿಟ್ ಮಾಡಿ ಬೆದರಿಕೆ ತಂತ್ರವನ್ನೂ ಉಪಯೋಗಿಸಿದ್ದಾನೆ.  

ಪ್ರತಿ ದಿನ ಸಂಜೆ ಕೋಚಿಂಗ್ ಸೆಂಟರ್‌‌ಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಗರ್ಭಿಣಿಯಾದ ಮಾಹಿತಿ ತಿಳಿಯುತ್ತದ್ದಂತೆ ವಿದ್ಯಾರ್ಥಿನಿ ಆತಂಕಗೊಂಡಿದ್ದಾಳೆ. ಈ ಮಾಹಿತಿಯನ್ನು ಕೋಚಿಂಗ್ ಆಪರೇಟರ್ ಸಂಜಯ್ ಪಟೇಲ್‌ಗೆ ತಿಳಿಸಿದ್ದಾಳೆ. ಇತ್ತ ಸಂಜಯ್ ಪಟೇಲ್ ಅಬಾರ್ಶನ್ ಮಾಡಿಸಿಕೊಂಡು ಬರಲು ಸೂಚಿಸಿದ್ದಾನೆ. ವಿದ್ಯಾರ್ಥಿನಿಗೆ ಪೋಷಕರಲ್ಲೂ ಹೇಳಲು ಆಗದೆ, ಇತ್ತ ಏಕಾಂಗಿಯಾಗಿ ಹೋಗಿ ಅಬಾರ್ಶನ್ ಮಾಡಿಸಿಕೊಳ್ಳಲು ಸಾಧ್ಯವಾಗದೇ ವಿದ್ಯಾರ್ಥಿನಿ ನೊಂದಿದ್ದಾಳೆ.

ಅಬಾರ್ಷನ್ ಮಾಡದೆ ಇದ್ದ ಕಾರಣ ಆಕ್ರೋಶಗೊಂಡ ಸಂಜಯ್ ಪಟೇಲ್ ಅಬಾರ್ಶನ್ ಮಾಡಿಸಿಕೊಂಡಿಲ್ಲ ಎಂದು ವಿದ್ಯಾರ್ಥಿನಿ ಬಾಯಿಗೆ ಪಾಲಿಥಿನ್ ಬಟ್ಟೆ ತುರುಕಿಸಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಹತ್ಯೆ ಬಳಿಕೆ ಆಯೆಕ ಮೃತದೇಹವನ್ನು ಪ್ಯಾಕ್ ಮಾಡಿ ರೈಲಿನ ಬೋಗಿಯಲ್ಲಿ ಇಟ್ಟು ಪರಾರಿಯಾಗಿದ್ದಾನೆ.

ರೈಲಿನಲ್ಲಿನ ಅನಾಥ ಪ್ಯಾಕೇಜ್ ನೋಡಿದ ಅಧಿಕಾರಿಗಳು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ  ಆಗಮಿಸಿದ ಪೊಲೀಸರು ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಳಿಕ ಆರೋಪಿ ಸಂಜಯ್ ಪಾಟೀಲ್ ಅರೆಸ್ಟ್ ಮಾಡಿದ್ದಾರೆ.ವಿಚಾರಣೆ ವೇಳೆ ನಡೆದ ಘಟನೆ ಬಹರಂಗವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ