ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಿಢೀರ್ ರಾಜೀನಾಮೆ ಕೊಟ್ಟ ಚುನಾವಣಾ ಆಯುಕ್ತ ಅರುಣ್ ಗೋಯಲ್..!

Twitter
Facebook
LinkedIn
WhatsApp
ದಿಢೀರ್ ರಾಜೀನಾಮೆ ಕೊಟ್ಟ ಚುನಾವಣಾ ಆಯುಕ್ತ ಅರುಣ್ ಗೋಯಲ್..!

ಅಚ್ಚರಿ ಮತ್ತು ಆಘಾತಕಾರಿ ಬೆಳವಣಿಗೆಯಲ್ಲಿ ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಅರುಣ್ ಗೋಯಲ್(Arun Goel) ಅವರು ಶನಿವಾರ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಚುನಾವಣಾ ಆಯೋಗದಲ್ಲಿ ಈಗಾಗಲೇ ಒಂದು ಪ್ರಮುಖ ಹುದ್ದೆ ಖಾಲಿ ಇದ್ದು, ಅರುಣ್ ಗೋಯಲ್ ಅವರ ರಾಜೀನಾಮೆಯಿಂದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತ್ರ ಆಯೋಗದಲ್ಲಿ ಉಳಿದಂತಾಗಿದೆ.

ಅರುಣ್ ಗೋಯಲ್ ಅವರು ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿವಿಧ ರಾಜ್ಯಗಳಲ್ಲಿನ ತಯಾರಿಯ ಪರಿಶೀಲನೆಗಾಗಿ ಅವರು ನಿರಂತರ ಪ್ರವಾಸ ಕೈಗೊಂಡಿದ್ದರು. ಆದರೆ ಏಪ್ರಿಲ್- ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿದ್ದು, ಇದೇ ವಾರದ ಅಂತ್ಯದೊಳಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎನ್ನುವ ವರದಿಗಳ ನಡುವೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಅವರ ದಿಢೀರ್ ರಾಜೀನಾಮೆ ಅಚ್ಚರಿಗೆ ಕಾರಣವಾಗಿದೆ.

“ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರೆ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಚೇರಿ ಅವಧಿ) ಕಾಯ್ದೆ 2023ರ ಸೆಕ್ಷನ್ 11ರ 1 ನೇ ಪರಿಚ್ಛೇದದ ಅಡಿಯಲ್ಲಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಸಲ್ಲಿಸಿರುವ ರಾಜೀನಾಮೆಯನ್ನು 2024ರ ಮಾರ್ಚ್ 9ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ಅವರು ಅಂಗೀಕರಿಸಿದ್ದಾರೆ” ಎಂದ ಗೆಜೆಟ್ ಅಧಿಸೂಚನೆ ತಿಳಿಸಿದೆ.

1985ನೇ ಬ್ಯಾಚ್‌ನ ಪಂಜಾಬ್ ಕೇಡರ್ ಐಎಎಸ್ ಅಧಿಕಾರಿಯಾಗಿರುವ ಅರುಣ್ ಗೋಯಲ್ ಅವರು 2022ರ ನವೆಂಬರ್ 18ರಂದು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಅದರ ಮರುದಿನವೇ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. 2022ರ ನವೆಂಬರ್ 21ರಂದು ಅವರು ಅಧಿಕಾರ ಸ್ವೀಕರಿಸಿದ್ದರು. ಅವರ ತರಾತುರಿಯ ನೇಮಕಾತಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಇಷ್ಟು ಅವಸರದ ತೀರ್ಮಾನಕ್ಕೆ ಕಾರಣವೇನು ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. 2027ರವರೆಗೂ ಅವರ ಅಧಿಕಾರಾವಧಿ ಇತ್ತು. ಗೋಯಲ್ ಅವರು ಈ ಹಿಂದೆ ಭಾರಿ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಗೋಯಲ್ ನೇಮಕಾತಿ ವಿರುದ್ಧದ ವಿಚಾರವನ್ನು ಸಾಂವಿಧಾನಿಕ ಪೀಠ ಪರಿಶೀಲನೆ ನಡೆಸಿತ್ತು. “ಅಂತಿಮಗೊಳಿಸಲಾದ ನಾಲ್ಕು ಹೆಸರುಳ ಪಟ್ಟಿಯನ್ನು ಕಾನೂನು ಸಚಿವಾಲಯ ಆಯ್ದುಕೊಂಡಿದೆ. ನವೆಂಬರ್ 18ರಂದು ಕಡತ ಸಿದ್ಧಪಡಿಸಿ, ಅದೇ ದಿನ ರವಾನಿಸಲಾಗಿದೆ. ಅದೇ ದಿನವೇ ಪ್ರಧಾನಿ ಕೂಡ ಹೆಸರನ್ನು ಶಿಫಾರಸುಗೊಳಿಸಿದ್ದಾರೆ. ಈ ಆವಸರ ಏಕೆ?” ಎಂದು ನ್ಯಾಯಪೀಠ ಪ್ರಶ್ನಿಸಿತ್ತು. ಆದರೆ ಗೋಯಲ್ ಅವರ ನೇಮಕಾತಿಯನ್ನು ರದ್ದುಗೊಳಿಸಲು ನಿರಾಕರಿಸಿದ್ದ ದ್ವಿಸದಸ್ಯ ಪೀಠ, ಕಳೆದ ವರ್ಷ ಅರ್ಜಿಯನ್ನು ವಜಾಗೊಳಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist