ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣದ ರಾಜ್ಯಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ

Twitter
Facebook
LinkedIn
WhatsApp
ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣದ ರಾಜ್ಯಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ

ನವದೆಹಲಿ (ಅ.16): ಮುಂದಿನ ತಿಂಗಳು ನಡೆಯಲಿರುವ ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶಕ್ಕೆ 144, ಛತ್ತೀಸ್‌ಗಢಕ್ಕೆ 30 ಹಾಗೂ ತೆಲಂಗಾಣಕ್ಕೆ 55 ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಮಧ್ಯಪ್ರದೇಶದಲ್ಲಿ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕಮಲನಾಥ್‌ ಅವರಿಗೆ ಅವರ ಕ್ಷೇತ್ರವಾದ ಚಿಂದ್ವಾರಾ, ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‌ ಸಿಂಗ್‌ ಪುತ್ರ ಜೈವರ್ಧನ್‌ ಸಿಂಗ್‌ ಅವರಿಗೆ ರಾಘೋಘಡದ ಟಿಕೆಟ್‌ ನೀಡಿದೆ. ಒಟ್ಟು 69 ಹಾಲಿ ಶಾಸಕರಿಗೆ ಟಿಕೆಟ್‌ ನೀಡಲಾಗಿದೆ.

ತಾರಾ ಬಲಕ್ಕೆ ಜೋತು ಬಿದ್ದಿರುವ ಕಾಂಗ್ರೆಸ್ 2018ರಲ್ಲಿ ಕಿರುತೆರೆಯಲ್ಲಿ ಪ್ರಸಾರವಾದ ರಾಮಾಯಣದ ಹನುಮನ ಪಾತ್ರದಾರಿ ವಿಕ್ರಮ್‌ ಮಸ್ತಾಲ್‌ ಅವರನ್ನು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ವಿರುದ್ಧ ಕಣಕ್ಕಿಳಿಸಿದೆ.

ಛತ್ತೀಸ್‌ಗಢದಲ್ಲಿ ಹಾಲಿ ಮುಖ್ಯಮಂತ್ರಿ ಭೂಪೇಶ್‌ ಬಾಘೇಲ್‌ಗೆ ಅವರ ಪಾಟನ್‌ ಕ್ಷೇತ್ರ ಹಾಗೂ ಉಪ ಮುಖ್ಯಮಂತ್ರಿ ಟಿ.ಎಸ್‌.ಸಿಂಗ್‌ ದೇವ್‌ ಅವರಿಗೆ ಅಂಬಿಕಾಪುರ ಕ್ಷೇತ್ರ, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಹಾಲಿ ಸಂಸದ ದೀಪಕ್‌ ಬೈಜ್‌ ಅವರಿಗೆ ಚಿತ್ರಕೂಟದ ಟಿಕೆಟ್‌ ನೀಡಲಾಗಿದೆ.

ತೆಲಂಗಾಣದಲ್ಲಿ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಹಾಲಿ ಸಂಸದ ಅನುಮಾಲ ರೇವಂತ್‌ ರೆಡ್ಡಿ ಅವರಿಗೆ ಕೋಡಂಗಲ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಗೆ ಮಧಿರಾ ಕ್ಷೇತ್ರದ ಟಿಕೆಟ್‌ ನೀಡಿದೆ. ಹಾಲಿ ಸಂಸದ ಉತ್ತಮ ಕುಮಾರ್‌ ರೆಡ್ಡಿಗೆ ಹುಜೂರ್‌ನಗರ ಕ್ಷೇತ್ರದ ಟಿಕೆಟ್‌, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್‌ ಖೇರಾ ಅವರ ಪತ್ನಿ ಕೋಟ ನೀಲಿಮಾ ಅವರಿಗೆ ಸನತ್‌ನಗರ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ.

ಛತ್ತೀಸ್‌ಗಢದಲ್ಲಿ ನ.7 ಹಾಗೂ 17ರಂದು, ಮಧ್ಯಪ್ರದೇಶದಲ್ಲಿ ನ.17ರಂದು ಹಾಗೂ ತೆಲಂಗಾಣದಲ್ಲಿ ನ.30ರಂದು ಮತದಾನ ನಡೆಯಲಿದೆ. ಡಿ.3ರಂದು ಫಲಿತಾಂಶ ಪ್ರಕಟವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ