ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ

Twitter
Facebook
LinkedIn
WhatsApp
CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ

ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್‌ನ ಗುಂಪು ಹಂತದ ಬ್ಯಾಡ್ಮಿಂಟನ್‌ನಲ್ಲಿ ಚಿನದ ಪಕದ ಕೈಚೆಲ್ಲಿದ್ದ ಭಾರತ ಫೈನಲ್ಸ್‌ನಲ್ಲಿ ಮಲೇಷ್ಯಾ ವಿರುದ್ಧ 1-3 ಅಂತರದಲ್ಲಿ ಪರಾಭವಗೊಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಮಲೇಷ್ಯಾದ ಕೆಳಕ್ರಮಾಂಕದ ಆಟಗಾರ ತ್ಸೆಯಾಂಗ್ ಜಿ-ವಿರುದ್ಧ ಸೋಲು ಅನುಭವಿಸಿದ್ದು, ತಂಡದ ಸೋಲಿಗೆ ಕಾರಣವಾಯಿತು. ಅಲ್ಲದೇ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕೂಡ ಸೋಲನುಭವಿಸಿದರು. ಇದರಿಂದ ತಂಡ 2-0 ಯಿಂದ ಹಿನ್ನಡೆ ಕಾಯ್ದುಕೊಂಡಿತು.

CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ

ಮಹಿಳಾ ಸಿಂಗಲ್ಸ್‌ನಲ್ಲಿ ಮಲೇಷ್ಯಾದ ಗೋಹ್ ಜಿನ್ ವೀ ಅವರು, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧುಗೆ ಸುಲಭ ತುತ್ತಾದರು. ಮೊದಲು ನಡೆದ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ, ಒಲಿಂಪಿಕ್ ಕಂಚಿನ ಪದಕ ವಿಜೇತ ಜೋಡಿಯಾದ ಮಲೇಷ್ಯಾದ ಟೆಂಗ್ ಫಾಂಗ್ ಆರನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಎದುರಿಸಿತು. ಕಠಿಣ ಸವಾಲು ಒಡ್ಡಿದ ಚಿಯಾ ಸೋಹ್ ಜೋಡಿ ಭಾರತದ ಎದುರು 21-18, 21-15 ನೇರ ಸೆಟ್‌ಗಳಿಂದ ಪಂದ್ಯ ಜಯಿಸಿತು. ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು.

ಸಿಂಗಲ್ಸ್‌ನಲ್ಲಿ ಸಿಂಧುಗೆ ಜಯ: ನಂತರ ನಡೆದ ಮಹಿಳೆಯರ ಸಿಂಗಲ್ಸ್ನಲ್ಲಿ ಪಿವಿ ಸಿಂಧು, ಗೋಹ್ ಜಿನ್ ವೀ ಸವಾಲು ಎದುರಿಸಿದರು. 22-20, 21-17 ನೇರ ಸೆಟ್‌ಗಳಿಂದ ಸಿಂಧು ಜಯಿಸುವ ಮೂಲಕ 1-1 ರಲ್ಲಿ ಸಮಬಲ ಸಾಧಿಸಿದರು. ವಿಶ್ವ ಕ್ರಮಾಂಕದಲ್ಲಿ 40ನೇ ಸ್ಥಾನದಲ್ಲಿದ್ದ ಮಲೇಷ್ಯಾದ ಗೋಹ್, 7ನೇ ಕ್ರಮಾಂಕದಲ್ಲಿರುವ ಸಿಂಧುಗೆ ಕಠಿಣ ಸವಾಲು ಒಡ್ಡಿದರು.

CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ

ಶ್ರೀಕಾಂತ್‌ಗೆ ಸೋಲು: ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ 14 ನೇ ಶ್ರೇಯಾಂಕಿತ, ಭಾರತದ ಅಗ್ರ ಶೆಟ್ಲರ್ ಕಿಡಂಬಿ ಶ್ರೀಕಾಂತ್ ತ್ಸೆಯಾಂಗ್ ಜಿ ವಿರುದ್ಧ ಸೋತು ಶಾಕ್ ನೀಡಿದರು. 21-19, 6-21, 21-16 ಮೂರು ಸೆಟ್‌ಗಳಲ್ಲಿ ನಡೆದ ಆಟದಲ್ಲಿ ತ್ಸೆಯಾಂಗ್ ಜಿ ಗೆಲುವು ಸಾಧಿಸಿದರು.

ನಿರ್ಣಾಯಕ ಪಂದ್ಯವಾದ ಮಹಿಳೆಯರ ಮಿಶ್ರ ಡಬಲ್ಸ್‌ನಲ್ಲಿ ವಿಶ್ವದ 11ನೇ ಶ್ರೇಯಾಂಕದ ಮಲೇಷ್ಯಾ ಜೋಡಿಯಾದ ಥಿನಾ ಮುರಳೀಧರನ್ ಮತ್ತು ಕೂಂಗ್‌ಲೆ ಪರ್ಲಿ ತಾನ್ ಭಾರತದ ಜೋಡಿಯಾದ ಗಾಯತ್ರಿ ಗೋಪಿಚಂದ್ ಮತ್ತು ಟ್ರೀಸಾ ಜಾಲಿ ವಿರುದ್ಧ 21-18, 21-17ರ ನೇರ ಸೆಟ್‌ಗಳಿಂದ ಸುಲಭ ಜಯ ಸಾಧಿಸಿದರು. ಈ ಮೂಲಕ ತಂಡ 1-3ರ ಅಂತರದಲ್ಲಿ ಚಿನ್ನಕ್ಕೆ ಕೊರಳೊಡ್ಡಿತು. ಭಾರತ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist