ಭಾನುವಾರ, ಜೂನ್ 16, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ..!

Twitter
Facebook
LinkedIn
WhatsApp
ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ..!

ಇಂದು ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ(Cyclone) ಅಪ್ಪಳಿಸುವ ಸಾಧ್ಯತೆ ಇದೆ. ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್‌ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ, ಪುದುಚೇರಿ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವಿಶೇಷವಾಗಿ ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿರುವವರು ಜಾಗರೂಕತೆ ವಹಿಸುವಂತೆ ರಾಜ್ಯ ಸರ್ಕಾರವು ನಿವಾಸಿಗಳನ್ನು ಒತ್ತಾಯಿಸಿದೆ. ನೈಋತ್ಯ ಮುಂಗಾರು ಮೇ 31ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ