ಪ್ರತಿನಿತ್ಯ ಎಣ್ಣೆ ಕುಡಿದು ಪತಿ ಜಗಳ- ನೇಣಿಗೆ ಕೊರಳೊಡ್ಡಿದ ಪತ್ನಿ
ಚಾಮರಾಜನಗರ: ಕುಡಿದು ಬಂದು ಪ್ರತಿನಿತ್ಯ ಜಗಳವಾಡುತ್ತಿದ್ದ ಪತಿಯಿಂದಾಗಿ ಪತ್ನಿ ನೇಣಿಗೆ ಕೊರಳೊಡ್ಡಿದ ಘಟನೆಯೊಂದು ಚಾಮರಾಜನಗರದಲ್ಲಿ (Chamarajanagar) ನಡೆದಿದೆ.
ರೂಪಾ (32) ಆತ್ಮಹತ್ಯೆಗೆ ಶರಣಾದಾಕೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ. ರೂಪಾ 6 ವರ್ಷದ ಹಿಂದೆ ಮಂಜುನಾಥ್ ನನ್ನು ವಿವಾಹವಾಗಿದ್ದರು. ಆದರೆ ಕೌಟುಂಬಿಕ ಕಲಹದಿಂದಾಗಿ ನೇಣು ಬಿಗಿದುಕೊಂಡು ರೂಪಾ ಸಾವಿನ ದಾರಿ ಹಿಡಿದಿದ್ದಾರೆ.
ಮಂಜುನಾಥ್ ಪ್ರತಿನಿತ್ಯ ಕುಡಿದು ಬಂದು ರೂಪಾ ಜೊತೆ ಕ್ಲುಲ್ಲಕ ವಿಚಾರಕ್ಕೆ ಜಗಳ ಮಾಡುತ್ತಿದ್ದನು. ಸಾಕಷ್ಟು ಬಾರಿ ಇದನ್ನು ಸಹಿಸಿಕೊಂಡಿದ್ದ ರೂಪಾ ಇದೀಗ ತನ್ನ ತಾಳ್ಮೆ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪತಿ ಮಂಜುನಾಥ್ನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಯುವಕನ ಕೊಲೆ – ನಾಲ್ವರಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು.
ಪ್ರಕರಣದ ಬೆನ್ನತ್ತಿದ್ದ ಪೊಲೀಸರು (Police) ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಒಂದು ವೇಳೆ ದಂಡದ ಹಣ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದೆ.