ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Dasara: ಬೆಂಕಿ ಹಚ್ಚಿದರೂ ಸುಡಲಿಲ್ಲ ರಾವಣನ 10 ತಲೆ; 3ನೇ ದರ್ಜೆ ನೌಕರ ಅಮಾನತು

Twitter
Facebook
LinkedIn
WhatsApp
Dasara: ಬೆಂಕಿ ಹಚ್ಚಿದರೂ ಸುಡಲಿಲ್ಲ ರಾವಣನ 10 ತಲೆ; 3ನೇ ದರ್ಜೆ ನೌಕರ ಅಮಾನತು

ಛತ್ತೀಸ್‌ಗಢದ (Chattisgarh) ಧಮತರಿ (Dhamtari) ಎಂಬಲ್ಲಿ ದಸರಾ (Dasara) ಹಬ್ಬದ ನಿಮಿತ್ತ ಆಯೋಜಿಸಲಾಗಿದ್ದ ರಾವಣ (Ravan) ದಹನ ಕಾರ್ಯಕ್ರಮದಲ್ಲಿ ರಾವಣನ 10 ತಲೆಗಳು ಸುಡದೆ ಹಾಗೇ ಉಳಿದಿವೆ. ಈ ಹಿನ್ನೆಲೆ ರಾವಣ ದಹನ ಉಸ್ತುವಾರಿ ಹೊತ್ತಿದ್ದ ಗುಮಾಸ್ತ (Clerk) ಸೇರಿದಂತೆ 4 ಅಧಿಕಾರಿಗಳಿಗೆ (Officials) ಶೋಕಾಸ್‌ ನೋಟಿಸ್‌ ನೀಡಲಾಗಿದೆ. ಇಲ್ಲಿನ ಸ್ಥಳಿಯ ಆಡಳಿತದಿಂದ ರಾವಣ ದಹನ ಆಯೋಜಿಸಲಾಗಿತ್ತು. ಆದರೆ ರಾವಣ ಪ್ರತಿಕೃತಿ (Ravan Effigy) ತಯಾರಿಕೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಕಾರಣ ನೀಡಿ 3ನೇ ದರ್ಜೆ ನೌಕರ ಯಾದವ್‌ ಅವರನ್ನು ಅಮಾನತುಗೊಳಿಸಲಾಗಿದೆ. 

ಛತ್ತೀಸ್‌ಗಢದಲ್ಲಿ ನಡೆದ ದಸರಾ ಆಚರಣೆಯ ವೇಳೆ ರಾವಣನ ಪ್ರತಿಕೃತಿಯ ಎಲ್ಲಾ ಹತ್ತು ತಲೆಗಳು ಸುಟ್ಟುಹೋಗದ ಹಿನ್ನೆಲೆಯಲ್ಲಿ ಧಮತರಿ ನಾಗರಿಕ ಸಂಸ್ಥೆಯ ನೌಕರನನ್ನು ಅಮಾನತುಗೊಳಿಸಲಾಗಿದೆ ಮತ್ತು ನಾಲ್ವರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅಕ್ಟೋಬರ್ 5 ರಂದು ಧಮತರಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಕೃತಿ ದಹನ ಕಾರ್ಯಕ್ರಮದ ಚಿತ್ರಗಳು ರಾಕ್ಷಸ ರಾಜನ ತಲೆಗಳು ಹಾಗೆ ಉಳಿದಿವೆ ಮತ್ತು ಮುಂಡವು ಬೂದಿಯಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಭಾರತದಲ್ಲಿ ದಸರಾ ಅಥವಾ ವಿಜಯದಶಮಿಯು (Vijayadashami) ವಾರ್ಷಿಕ ದುರ್ಗಾಪೂಜಾ (Durga Puja) ಉತ್ಸವದ ಅಂತ್ಯವನ್ನು ಸೂಚಿಸುತ್ತದೆ. ಇದರಲ್ಲಿ ದುಷ್ಟರ ವಿರುದ್ಧ ಒಳ್ಳೆಯತನದ ವಿಜಯವನ್ನು ಸಂಕೇತಿಸಲು ರಾವಣನ ಪ್ರತಿಕೃತಿಗಳನ್ನು ದೇಶದಾದ್ಯಂತ ಸುಡಲಾಗುತ್ತದೆ. ಧಮತರಿಯಲ್ಲಿ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮವನ್ನು ಸ್ಥಳೀಯ ನಾಗರಿಕ ಸಂಸ್ಥೆ ಆಯೋಜಿಸಿತ್ತು. ದಸರಾ ಆಚರಣೆಯ ನಂತರ, ರಾವಣನ ಮೂರ್ತಿ ತಯಾರಿಕೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಗುಮಾಸ್ತ ರಾಜೇಂದ್ರ ಯಾದವ್ ಅವರನ್ನು ಅಮಾನತುಗೊಳಿಸಿ ಧಮತರಿ ಮುನ್ಸಿಪಲ್ ಕಾರ್ಪೊರೇಷನ್ (Dhamtari Municipal Corporation) (ಡಿಎಂಸಿ) ಆದೇಶ ಹೊರಡಿಸಿದೆ.

2022 ರ ದಸರಾ ಆಚರಣೆಗಾಗಿ ರಾವಣನ ಪ್ರತಿಮೆ ಮಾಡುವಲ್ಲಿ ಸಹಾಯಕ ಗ್ರೇಡ್-3 ನೌಕರ ಯಾದವ್ ಅವರು ಗಂಭೀರ ನಿರ್ಲಕ್ಷ್ಯ ಮಾಡಿದ್ದು, ಇದರಿಂದ ಡಿಎಂಸಿಯ ಪ್ರತಿಷ್ಠೆ ಹಾಳಾಗಿದೆ ಎಂದು ಆದೇಶವು ಹೇಳುತ್ತದೆ. ಯಾದವ್ ಅವರನ್ನು ಅಮಾನತುಗೊಳಿಸಿದ ನಂತರ, ಮತ್ತೊಬ್ಬ ಉದ್ಯೋಗಿ ಸಮರ್ಥ್ ರಾಂಸಿಂಗ್ ಅವರಿಗೆ ಯಾದವ್‌ ಅವರ ಜವಾಬ್ದಾರಿಯನ್ನು ವಹಿಸಲಾಯಿತು ಎಂದು ಡಿಎಂಸಿಯ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ಪದಮ್ವಾರ್ ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಲ್ಲದೆ, ಸಹಾಯಕ ಎಂಜಿನಿಯರ್ ವಿಜಯ್ ಮೆಹ್ರಾ ಮತ್ತು ಉಪ ಎಂಜಿನಿಯರ್‌ಗಳಾದ ಲೋಮಸ್ ದೇವಾಂಗನ್, ಕಮಲೇಶ್ ಠಾಕೂರ್ ಮತ್ತು ಕಮತಾ ನಾಗೇಂದ್ರ ಎಂಬ ನಾಲ್ವರು ಅಧಿಕಾರಿಗಳಿಗೆ ಡಿಎಂಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದು, ಈ ಸಂಬಂಧ ಅವರ ಉತ್ತರ ಕೇಳಿದೆ ಎಂದು ಅವರು ಹೇಳಿದರು. ಇನ್ನೊಂದೆಡೆ, ಡಿಎಂಸಿ ಕಮಿಷನರ್ ವಿನಯ್ ಕುಮಾರ್ ಪೊಯಂ ರಜೆಯಲ್ಲಿರುವ ಕಾರಣ ಪದಮ್ವಾರ್ ಅವರು ಪ್ರಸ್ತುತ ನಾಗರಿಕ ಮಂಡಳಿಯ ಮುಖ್ಯಸ್ಥರಾಗಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇನ್ನು, ಈ ಸಂಬಂದ ಮಾತನಾಡಿದ ಧಮ್ತಾರಿ ಮೇಯರ್ ವಿಜಯ್ ದೇವಾಂಗನ್, ಮೂರ್ತಿ ತಯಾರಿಸುವ ಜವಾಬ್ದಾರಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಈಗ ಕಾಮಗಾರಿಯ ಪಾವತಿಯನ್ನು ತಡೆಹಿಡಿಯಲಾಗುವುದು ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ