ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Delhi Shraddha Murder Case: ಶ್ರದ್ಧಾ ಕೊಂದ ಬಳಿಕ ಮತ್ತೊಬ್ಬಳನ್ನು ಮನೆಗೆ ಕರೆತಂದಿದ್ದ ಅಫ್ತಾಬ್

Twitter
Facebook
LinkedIn
WhatsApp
Delhi Shraddha Murder Case: ಶ್ರದ್ಧಾ ಕೊಂದ ಬಳಿಕ ಮತ್ತೊಬ್ಬಳನ್ನು ಮನೆಗೆ ಕರೆತಂದಿದ್ದ ಅಫ್ತಾಬ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಯುವತಿ ಶ್ರದ್ಧಾ ಕೊಲೆ ಪ್ರಕರಣ ತನಿಖೆ ಮುಂದುವರೆಯುತ್ತಿದ್ದಂತೆ ಒಂದೊಂದೇ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿವೆ. ತನ್ನ ಜೊತೆ ಸಹ ಜೀವನ ನಡೆಸುತ್ತಿದ್ದ ಗೆಳತಿ ಶ್ರದ್ಧಾಳನ್ನು ಆಕೆಯ ಗೆಳೆಯ ಅಫ್ತಾಬ್ ಅಮೀನ್ ಪೂನಾವಾಲಾ ಬರ್ಬರವಾಗಿ ಹತ್ಯೆಗೈದಿದ್ದ ಗೆಳತಿಯ ಹತ್ಯೆ ಬಳಿಕ ಆಕೆಯ ಮೃತದೇಹವನ್ನು 35 ಪೀಸುಗಳಾಗಿ ಮಾಡಿ ಕತ್ತಿರಿಸಿ ಪ್ರಿಡ್ಜ್‌ನಲ್ಲಿ ಇರಿಸಿದ್ದ ಇದಕ್ಕಾಗಿ ಹೊಸದೊಂದು ಫ್ರಿಡ್ಜ್‌ನ್ನು ಆತ ಖರೀದಿಸಿದ್ದ, ನಂತರ ಸುಮಾರು 18 ದಿನಗಳ ಕಾಲ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮೃತದೇಹದ ಸ್ವಲ್ಪ ಸ್ವಲ್ಪ ಭಾಗವನ್ನೇ ಸಮೀಪದ ಮೆಹ್ರುಲಿಯ ಕಾಡಿನಲ್ಲಿ ತೆಗೆದುಕೊಂಡು ಹೋಗಿ ಎಸೆದಿದ್ದ. ಈ ಭೀಕರ ಕೊಲೆ ಪ್ರಕರಣ ನಡೆದು ಆರು ತಿಂಗಳ ಬಳಿಕ ಪೊಲೀಸರು ನಿನ್ನೆ ಅಫ್ತಾಬ್‌ನನ್ನು ಬಂಧಿಸಿದ್ದರು.

ಈತನ ಬಂಧನದ (Arrest) ಬಳಿಕ ಈ ಭೀಕರ ಕೊಲೆ (Brutual Murder) ಪ್ರಕರಣ ಬಯಲಾಗಿತ್ತು. ಈಗ ಈ ಹೀನ ಕೃತ್ಯದ ಮತ್ತಷ್ಟು ಅಂಶಗಳು ಬಯಲಾಗುತ್ತಿದೆ. ಶ್ರದ್ಧಾಳನ್ನು ಇಷ್ಟೊಂದು ಭೀಕರವಾಗಿ ಹತ್ಯೆ ಮಾಡಿದ 15 ರಿಂದ 20 ದಿನಗಳ ನಂತರ ಅಫ್ತಾಬ್ ಪೂನಾವಾಲಾ ಡೇಟಿಂಗ್ ಆಪ್ (Dating App) ಮೂಲಕ ಮತ್ತೊಬ್ಬ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ. ಅಲ್ಲದೇ ಆಕೆಯೊಂದಿಗೆ ಡೇಟಿಂಗ್ ಶುರು ಮಾಡಿದ್ದ ಎಂದು ತನಿಖೆ ನಡೆಸಿದ ಪೊಲೀಸರು ಹೇಳಿದ್ದಾರೆ. ಅಲ್ಲದೇ ಶ್ರದ್ಧಾ ಮೃತದೇಹ ಮನೆಯಲ್ಲಿರುವ ವೇಳೆಯೇ ಆತ ಆ ಹೊಸ ಹುಡುಗಿಯನ್ನು ದೆಹಲಿಯಲ್ಲಿ (Delhi) ತಾನು ವಾಸವಿದ್ದ ಬಾಡಿಗೆ ಮನೆಗೆ ಆಗಾಗ ಕರೆದುಕೊಂಡು ಬರುತ್ತಿದ್ದ ಎಂಬ ಬೆಚ್ಚಿ ಬೀಳಿಸುವ ಅಂಶವನ್ನು ವಿಚಾರಣೆ ನಡೆಸಿದ ಪೊಲೀಸರು ತಿಳಿಸಿದ್ದಾರೆ. ಹೊಸ ಗೆಳತಿಯ ಆಗಮನದ ವೇಳೆಯೂ ಶ್ರದ್ಧಾ ದೇಹದ ತುಣುಕುಗಳು ಅಫ್ತಾಬ್ ಕೊಂಡ 300 ಲೀಟರ್‌ನ ಹೊಸ ಪ್ರಿಡ್ಜ್‌ ಒಳಗೆ ಇತ್ತು ಎಂಬುದನ್ನು ವಿಚಾರಣೆ ವೇಳೆ ಆರೋಪಿ ಅಫ್ತಾಬ್ ಬಾಯ್ಬಿಟ್ಟಿದ್ದಾನೆ.

ಶ್ರದ್ಧಾ(Shraddha) ಹಾಗೂ ಅಫ್ತಾಬ್ ಪೂನಾವಾಲ (Aftab Poonawala) ಡೇಟಿಂಗ್ ಆಪ್ ಬಂಬಲ್ (Bumble) ನಲ್ಲಿ ಪರಸ್ಪರ ಮೊದಲ ಬಾರಿಗೆ ಭೇಟಿಯಾಗಿದ್ದರು. ಮುಂಬೈನಲ್ಲಿ ಆರಂಭವಾದ ಈ ಪ್ರೇಮಕಥನ ದೆಹಲಿಯಲ್ಲಿ ಭಯಾನಕ ಕೊಲೆಯೊಂದಿಗೆ ಅಂತ್ಯವಾಗುವ ಮೊದಲು ಮೂರು ವರ್ಷ ಇವರು ಜೊತೆಯಾಗಿಯೇ ಇದ್ದರು. ಅಫ್ತಾಬ್ ಜೊತೆಗಿನ ಪ್ರೇಮದ ಕಾರಣಕ್ಕೆ ಶ್ರದ್ಧಾ ಪೋಷಕರು ಮಗಳೊಂದಿಗೆ ಮುನಿಸಿಕೊಂಡಿದ್ದರು. ಪೋಷಕರ ವಿರೋಧದ ನಂತರ ಶ್ರದ್ಧಾ, ತನಗೆ 25 ವರ್ಷ ಆಗಿದೆ. ನನ್ನ ಬದುಕಿನ ನಿರ್ಧಾರವನ್ನು ನಾನೇ ತೆಗೆದುಕೊಳ್ಳುವೆ ಎಂದು ಬಟ್ಟೆಬರೆಗಳನ್ನು ಹೊತ್ತುಕೊಂಡು ಮನೆಬಿಟ್ಟು ಅಫ್ತಾಬ್ ಜೊತೆ ದೆಹಲಿಗೆ ಬಂದಿದ್ದಳು.

ದೆಹಲಿಯ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು. ಇತ್ತ ಮನೆಯೊಂದಿಗೆ ಸಂಪೂರ್ಣ ಸಂಪರ್ಕ ಕಳೆದುಕೊಂಡಿದ್ದ ಶ್ರದ್ಧಾ, ಫೇಸ್ಬುಕ್‌ನಲ್ಲಿ ಆಗಾಗ ಏನಾದರೂ ಪೋಸ್ಟ್‌ಗಳನ್ನು ಮಾಡುತ್ತಿದ್ದಳು. ಮಗಳೊಂದಿಗೆ ಮಾತುಕತೆ ಇಲ್ಲದಿದ್ದರೂ ಪೋಷಕರು ಈ ಮೂಲಕ ಮಗಳ ಇರುವಿಕೆಯನ್ನು ಗಮನಿಸುತ್ತಿದ್ದರು. ಆದರೆ ಅನೇಕ ದಿನಗಳಿಂದ ಫೇಸ್‌ಬುಕ್‌ನಲ್ಲಿ ಯಾವುದೇ ಪೋಸ್ಟ್‌ಗಳು ಬಾರದ ಹಿನ್ನೆಲೆಯಲ್ಲಿ ಪೋಷಕರಿಗೆ ತಮ್ಮ ಮಗಳೇನಾದಳು ಎಂಬ ಬಗ್ಗೆ ಸಂಶಯ ಮೂಡಿದ ಹಿನ್ನೆಲೆಯಲ್ಲಿ ಶ್ರದ್ಧಾ ತಂದೆ ಐದು ತಿಂಗಳ ಹಿಂದೆ ದೆಹಲಿಗೆ ಬಂದು ಶ್ರದ್ಧಾ ಇರುವ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಬೀಗ ಹಾಕಿತ್ತು. ಈ ಹಿನ್ನೆಲೆಯಲ್ಲಿ ಸಂಶಯಗೊಂಡ ಶ್ರದ್ಧಾ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದಾಗಿ ಐದು ತಿಂಗಳ ಬಳಿಕ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳ ಮಹಜರು

ಇನ್ನು ಪೊಲೀಸರು ಇಂದು ಶ್ರದ್ಧಾಳ ದೇಹದ ಭಾಗಗಳನ್ನು ಬಿಸಾಕಿದ ಮೆಹ್ರುಲಿಯ ಕಾಡಿಗೆ ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ.  

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist