ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಳ್ವಾಸ್‌ ಎಂಜಿನಿಯರಿಂಗ್‌, ತಂತ್ರಜ್ಞಾನ ಸಂಸ್ಥೆ (AIET)ಗೆ ’ಎ+’ ಮಾನ್ಯತೆ

Twitter
Facebook
LinkedIn
WhatsApp
DJI 0135

ಮೂಡುಬಿದಿರೆ (ಜ.21) : ಮೂಡುಬಿದಿರೆಯ ಆಳ್ವಾಸ್‌ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಸಂಸ್ಥೆಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್‌ ಮೊದಲ ಸುತ್ತಿನಲ್ಲೇ ಸಿಜಿಪಿಎ 3.32 ನೊಂದಿಗೆ ’ಎ+’ ಮಾನ್ಯತೆ ನೀಡಿದೆ. ಮುಂದಿನ ಐದು ವರ್ಷಗಳ ಅವಧಿಯ ಈ ಮಾನ್ಯತೆಯನ್ನು ಜ. 17ರಂದು ಘೋಷಿಸಿದೆ.

ನ್ಯಾಕ್‌ ತಂಡದ ಭೇಟಿ, ಪರೀಶಿಲನೆ: ಆಂಧ್ರ ಪ್ರದೇಶದ ಪೂರ್ವ ಗೋದಾವರಿಯ ಆದಿಕವಿ ನನ್ನಯಾ ವಿವಿಯ ಸಿಎಸ್‌ಇ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ನ ಕುಲಪತಿ ಡಾ. ಸುರೇಶ್‌ ವರ್ಮಾ ನ್ಯಾಕ್‌ ತಂಡದ ನೇತೃತ್ವ ವಹಿಸಿದ್ದರು. ಪಾಂಡಿಚೇರಿ ವಿವಿಯ ಸ್ಕೂಲ್‌ ಆಫ್‌ ಮ್ಯಾನೇಜ್ಮೆಂಟ್‌ನ ಪ್ರಾಧ್ಯಾಪಕಿ ಡಾ. ಮಾಲಬಿಕ ಡಿಯೋ ಹಾಗೂ ಅಮರಾವತಿಯ ಶ್ರೀ ಶಿವಾಜಿ ಎಜುಕೇಶನ್‌ ಸೊಸೈಟಿಯ ಕಾರ‍್ಯದರ್ಶಿ ಡಾ. ವಿಜಯ್‌ ಠಾಕ್ರೆ ತಂಡದ ಸದಸ್ಯರಾಗಿದ್ದರು. ಈ ಮೂವರ ನ್ಯಾಕ್‌ ತಂಡವು 2023ರ ಜ. 13 ಮತ್ತು 14ರಂದು ಸಂಸ್ಥೆಗೆ ಎರಡು ದಿನಗಳ ಭೇಟಿ ನೀಡಿ ಶೈಕ್ಷಣಿಕ ಸಿದ್ಧತೆ ಹಾಗೂ ಪೂರಕ ವ್ಯವಸ್ಥೆಗಳನ್ನು ಕೂಲಂಕಷವಾಗಿ ಮೌಲ್ಯಮಾಪನ ನಡೆಸಿತ್ತು.

ನ್ಯಾಕ್‌ನ ಗುಣಾತ್ಮಕ ಮಾಪನದ ಪ್ರಮುಖ ಏಳು ಆಯಾಮಗಳ ಆಧಾರದಲ್ಲಿ ತಂಡವು ಸಂಸ್ಥೆಯಲ್ಲಿ ಸೂಕ್ಷ್ಮ ಪರಿಶೀಲನೆ ಹಾಗೂ ಮಾಪನ ನಡೆಸಿತು. ಈ ಆಯಾಮಗಳಾದ ಸಂಸ್ಥೆಯಲ್ಲಿನ ಪಠ್ಯಕ್ರಮದ ಅಂಶಗಳು, ಬೋಧನೆ- ಕಲಿಕೆ ಹಾಗೂ ಮೌಲ್ಯಮಾಪನೆ, ಸಂಶೋಧನೆ, ಆವಿಷ್ಕಾರ ಮತ್ತು ವಿಸ್ತರಣಾ ಕಾರ್ಯಕ್ರಮಗಳು, ಮೂಲಸೌಕರ್ಯ ಹಾಗೂ ಕಲಿಕಾ ಸಂಪನ್ಮೂಲಗಳು, ವಿದ್ಯಾರ್ಥಿ ಪ್ರೋತ್ಸಾಹ ಹಾಗೂ ಪ್ರಗತಿ, ಆಡಳಿತ, ನಾಯಕತ್ವ ಮತ್ತು ನಿರ್ವಹಣೆ ಮತ್ತು ಸಾಂಸ್ಥಿಕ ಮೌಲ್ಯಗಳು ಹಾಗೂ ಉನ್ನತ ಅಭ್ಯಾಸಗಳ ಆಧಾರದಲ್ಲಿ ತಂಡವು ಜ. 14ರಂದು ನಡೆದ ನಿರ್ಗಮನ ಸಭೆಯಲ್ಲಿ ಪ್ರಶಂಸೆ ವ್ಯಕ್ತಪಡಿಸಿತ್ತು.

ಪ್ರತಿಷ್ಠಿತ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ದೂರದೃಷ್ಟಿತ್ವದ ನಾಯಕತ್ವ ಹಾಗೂ ವ್ಯವಸ್ಥಾಪಕ ಟ್ರಸ್ಟಿಎಂ. ವಿವೇಕ ಆಳ್ವ ಅವರ ದಿಟ್ಟಮುಂದಾಳತ್ವದಲ್ಲಿ ಸಂಸ್ಥೆಯು ಐಐಎಸ್‌ಸಿ ಇಸ್ರೊ, ಎನ್‌ಆರ್‌ಎಸ್‌ಸಿ, ಕುಮಮೊಟೊ ವಿಶ್ವವಿದ್ಯಾಲಯ- ಜಪಾನ್‌, ಎಸ್‌ಕೆಎಫ್‌, ಟಿಸಿಎಸ್‌-ಐಯಾನ್‌, ಟೊಯೊಟೊ- ಕಿರ್ಲೊಸ್ಕರ್‌ ಮತ್ತಿತರ ಕೈಗಾರಿಕೆ ಹಾಗೂ ಸಂಸ್ಥೆಗಳ ಜೊತೆ ಶೈಕ್ಷಣಿಕ ಸಹಯೋಗ ಹಾಗೂ ಒಪ್ಪಂದಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳನ್ನು ಸಮಕಾಲೀನ ತಂತ್ರಜ್ಞಾನ ಆಧಾರಿತ ಜಗತ್ತಿನ ಸವಾಲಿಗೆ ಸಿದ್ಧಗೊಳಿಸಿದೆ. ಪ್ರತಿಷ್ಠಿತ ಸಂಸ್ಥೆ- ಕೈಗಾರಿಕೆಗಳ ಜೊತೆ ಸಕ್ರಿಯ ಸಹಭಾಗಿತ್ವಗಳು ಹಾಗೂ ಗುಣಮಟ್ಟದ ಶಿಕ್ಷಣದ ಉನ್ನತ ಧೋರಣೆಯ ಕಾರಣ ನ್ಯಾಕ್‌ ಎ+ ಶ್ರೇಣಿ ಮಾನ್ಯತೆಯನ್ನು ಸಿಜಿಪಿಎ 3.32ರ ಜೊತೆ ನೀಡಿದೆ.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್‌ ಫೆರ್ನಾಂಡಿಸ್‌, ಐಕ್ಯೂಎಸಿ ಹಾಗೂ ನ್ಯಾಕ್‌ ಸಂಚಾಲಕ ಡಾ. ದತ್ತಾತ್ರೇಯ ನೇತ್ರತ್ವದ ಅಧ್ಯಾಪಕರ ತಂಡವು ನ್ಯಾಕ್‌ ಸಮಿತಿಯ ಮುಂದೆ ಅಗತ್ಯ ದಾಖಲೆಗಳನ್ನು ಪ್ರಸ್ತುತ ಪಡಿಸಿದ್ದರು.

ಸರ್ಕಾರದ ಸಂಸ್ಥೆಯಾದ ನ್ಯಾಕ್‌ ನೀಡಿದ ಎ+ ಮಾನ್ಯತೆಯು ಸಂಸ್ಥೆಯ ಉನ್ನತ ಮಟ್ಟದ ಗುಣಾತ್ಮಕ ಶಿಕ್ಷಣವನ್ನು ದೇಶದ ನಕಾಶೆಯಲ್ಲಿ ಗುರುತಿಸುವಂತೆ ಮಾಡಿದೆ. ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮಗ್ರ ಪ್ರಯತ್ನದ ಫಲವಾಗಿ ಮುಂದಿನ ದಿನಗಳಲ್ಲಿ ‘ಸ್ವಾಯತ್ತ’ ದತ್ತ ದೃಢ ಹೆಜ್ಜೆ ಇಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist