ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಲೈನ್ ಮ್ಯಾನ್ ದುರ್ಮರಣ

Twitter
Facebook
LinkedIn
WhatsApp
ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಲೈನ್ ಮ್ಯಾನ್ ದುರ್ಮರಣ

ಕೊಡಗು: ಮನೆಯೊಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. 

ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಸಿಬ್ಬಂದಿಯನ್ನು ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿ 26 ವರ್ಷದ ಬಸವರಾಜ್ ತೆಗ್ಗಿ ಎಂದು ಗುರುತಿಸಲಾಗಿದೆ.

ವಿದ್ಯುತ್ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಬಸವರಾಜ್ ಕುಸಿದುಬಿದ್ದು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಮೃತದೇಹವನ್ನು  ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಾರವಾರ: ಅಪರೂಪ ಪ್ರಭೇದದ ಬೃಹತ್ ತಿಮಿಂಗಿಲದ ಮೃತದೇಹ ಪತ್ತೆ

ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿ ಕಡಲ ತೀರದಲ್ಲಿ ಅಪರೂಪ ಪ್ರಭೇದದ ಬೃಹತ್ ತಿಮಿಂಗಿಲದ ಮೃತದೇಹವೊಂದು ಪತ್ತೆಯಾಗಿದೆ.

ಈ ತಿಮಿಂಗಲ ಕುರಿತು ತಜ್ಞರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲ ತಜ್ಞರು ಇದನ್ನು ಬ್ರೈಡ್‌ ತಿಮಿಂಗಿಲ ಎಂದು ಹೇಳುತ್ತಿದ್ದರೆ, ಮತ್ತೆ ಕೆಲವರು ಬಲೀನ್ ತಿಮಿಂಗಿಲ ಎಂದು ಹೇಳುತ್ತಿದ್ದಾರೆ.

ನೇತ್ರಾಣಿ ದ್ವೀಪದ ಬಳಿ ಬಲೀನ್ ತಿಮಿಂಗಿಲಗಳು ಕಾಣಿಸಿಕೊಳ್ಳುತ್ತವೆ ಎಂದು ಹೊನ್ನಾವರದ ಸಮುದ್ರ ತಜ್ಞ ಪ್ರಕಾಶ್ ಮೇಸ್ತಾ ಅವರು ಹೇಳಿದ್ದಾರೆ.

ಪ್ರಸ್ತುತ ಪತ್ತೆಯಾಗಿರುವ ತಿಮಿಂಗಿಲದ ಮೃತದೇಹ ಬಲೀನ್ ತಿಮಿಂಗಿಲದ್ದು. ಇದು ಕಠಿಣ ಭೂಪ್ರದೇಶವಾಗಿರುವುದರಿಂದ ಇಲ್ಲಿ ಜನರು ಬರುವುದು ಕಷ್ಟಸಾಧ್ಯ. ಹೀಗಾಗಯೇ ಕರಾವಳಿ ನಿಯಂತ್ರಣ ವಲಯದ ಅಧಿಕಾರಿಗಳು ಈ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿದ್ದಾರೆಂದು ತಿಳಿಸಿದ್ದಾರೆ.

ಬಲೀನ್ ತಿಮಿಂಗಿಲಗಳು ಸಮುದ್ರದಲ್ಲಿರುವ ಅತಿದೊಡ್ಡ ಸಸ್ತನಿಗಳಲ್ಲಿ ಒಂದಾಗಿದೆ, ಅವು ಸಾಮಾನ್ಯವಾಗಿ 10 ಮೀಟರ್‌ನಿಂದ 102 ಮೀಟರ್ ಉದ್ದವಿರುತ್ತವೆ. ಅಲ್ಲದೆ, ಅಳಿವಿನಂಚಿನಲ್ಲಿರುವ ತಿಮಿಂಗಲಗಳಾಗಿವೆ. ಕಡಲತೀರದಲ್ಲಿ ಅವುಗಳು ಅತ್ಯಂತ ವಿರಳವಾಗಿ ಕಂಡುಬರುತ್ತವೆ, ಪಶ್ಚಿಮ ಕರಾವಳಿಯಲ್ಲಿ. ಇವು ದೊಡ್ಡ ತಿಮಿಂಗಿಲಗಳಾಗಿದ್ದು, ಈ ತಿಮಿಂಗಿಲಗಳು ತಮ್ಮ ಬಾಯಿಯಲ್ಲಿ ಬಲೀನ್ ಎಂಬ ಫಿಲ್ಟರ್-ಫೀಡಿಂಗ್ ವ್ಯವಸ್ಥೆಯನ್ನು ಹೊಂದಿರುತ್ತವೆ. ಇದೇ ಕಾರಣಕ್ಕೆ ಈ ತಿಮಿಂಗಿಲಗಳಿಗೆ ಬಲೀನ್ ಎಂದು ಹೆಸರಿಡಲಾಗಿದೆ.

ಹೊನ್ನಾವರದಲ್ಲಿ ಕಂಡು ಬಂದಿರುವ ತಿಮಿಂಗಿಲ ಸುಮಾರು 46 ಅಡಿ ಉದ್ದ ಮತ್ತು 9 ಅಡಿ ಎತ್ತರವಿದೆ ಎಂದು ಸೆಟಾಶಿಯನ್ ಜೀವಶಾಸ್ತ್ರಜ್ಞ ಮತ್ತು ಸೆಟಾಸಿಯನ್ ಸ್ಪೆಷಲಿಸ್ಟ್ ಗ್ರೂಪ್ನ ಸದಸ್ಯರಾದ ದಿಪಾನಿ ಸುತಾರಿಯಾ ಹೇಳಿದ್ದಾರೆ.

ಇದು ಬ್ರೈಡ್‌ ತಿಮಿಂಗಿಲ ಎಂದೆನಿಸುತ್ತಿದೆ. ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿದ್ದು, ಮೃತದೇಹ ನೀರಿನಲ್ಲಿ ಬಹುಕಾಲ ಇದ್ದುದ್ದರಿಂದ ವಿಶ್ಲೇಷಣೆ ಮಾಡುವುದು ಕಷ್ಟಸಾಧ್ಯ. ಈ ತಿಮಿಂಗಿಲಗಳು ಕೆಲವು ಸಂದರ್ಭದಲ್ಲಿ ಪಶ್ಚಿಮ ಕರಾವಳಿಯಲ್ಲಿ ಕಂಡು ಬರುತ್ತವೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ