ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಸ್ಸಾಂ: ಅಕ್ರಮವಾಗಿ ಭಾರತ ಪ್ರವೇಶಿಸಿದ 10 ಬಾಂಗ್ಲಾದೇಶಿಯರ ಬಂಧನ

Twitter
Facebook
LinkedIn
WhatsApp
ಅಸ್ಸಾಂ: ಅಕ್ರಮವಾಗಿ ಭಾರತ ಪ್ರವೇಶಿಸಿದ 10 ಬಾಂಗ್ಲಾದೇಶಿಯರ ಬಂಧನ

ಕರೀಂಗಂಜ್: ಅಸ್ಸಾಂನ ಕರೀಂಗಂಜ್ ಪೊಲೀಸರು ಶನಿವಾರ ಕರೀಂಗಂಜ್ ಜಿಲ್ಲೆಯ ಬಜಾರಿಚೆರಾ ಪೊಲೀಸ್ ವಾಚ್‌ಪೋಸ್ಟ್‌ನ ಅಸ್ಸಾಂ-ತ್ರಿಪುರ ಗಡಿಯ ಚುರೈಬರಿ ಪ್ರದೇಶದಲ್ಲಿ 4 ಮಹಿಳೆಯರು ಸೇರಿದಂತೆ 10 ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಿದ್ದಾರೆ.
ಈ ಘಟನೆ ಕರೀಂಗಂಜ್ ಜಿಲ್ಲೆಯ ಸ್ಥಳೀಯ ಜನರಲ್ಲಿ ಸಂಚಲನ ಮೂಡಿಸಿದೆ. ಇವರೆಲ್ಲರೂ ತ್ರಿಪುರಾದ ಧರ್ಮನಗರದಿಂದ ಬರುತ್ತಿದ್ದರು ಎನ್ನಲಾಗಿದೆ. ಮೂರು ಬೇರೆ ಬೇರೆ ಸಂದರ್ಭಗಳಲ್ಲಿ ವಾಹನಗಳ ತಪಾಸಣೆಯ ಸಮಯದಲ್ಲಿ ಅವರನ್ನು ಬಂಧಿಸಲಾಗಿದೆ. ಇವರೊಂದಿಗೆ ಭಾರತೀಯ ಲಿಂಕ್‌ಮ್ಯಾನ್‌ನನ್ನು ಕೂಡ ಬಂಧಿಸಲಾಗಿದೆ. ಬಂಧಿತ ಅಕ್ರಮ ವಲಸಿಗರು ಬಾದರ್‌ಪುರ ರೈಲು ನಿಲ್ದಾಣದಿಂದ ದಕ್ಷಿಣ ಭಾರತದತ್ತ ತೆರಳುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅವರು ದಕ್ಷಿಣ ಭಾರತದ ನಗರಗಳ ವಿವಿಧ ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವ ಸಲುವಾಗಿ ಬರುತ್ತಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ಲಿಂಕ್‌ಮ್ಯಾನ್ ಮೂಲಕ ತ್ರಿಪುರಾ ಗಡಿಯ ಮೂಲಕ ಅಕ್ರಮವಾಗಿ ಭಾರತವನ್ನು ಇವರು ಪ್ರವೇಶಿಸಿದ್ದಾರೆ.
ಕರೀಂಗಂಜ್‌ನ ಪೊಲೀಸರು ಮಾಹಿತಿ ನೀಡಿ, ಭಾರತ-ಬಾಂಗ್ಲಾದೇಶದ ಗಡಿಯನ್ನು ಸುರಕ್ಷಿತವಾಗಿ ದಾಟಲು ಮತ್ತು ದಕ್ಷಿಣ ಭಾರತದಲ್ಲಿ ತಮ್ಮ ನಿಗದಿತ ಸ್ಥಳಗಳಿಗೆ ತಲುಪಲು ಪ್ರತಿಯೊಬ್ಬರೂ ತಮ್ಮ ಭಾರತೀಯ ಹ್ಯಾಂಡ್ಲರ್‌ಗಳಿಗೆ 35 ಸಾವಿರ ರೂಪಾಯಿ ಪಾವತಿಸಿದ್ದಾರೆ ಎಂದು ಬಂಧಿತ ಬಾಂಗ್ಲಾದೇಶಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಬಂಧಿತ ಬಾಂಗ್ಲಾದೇಶಿಗಳು ಕೆಲಸಕ್ಕಾಗಿ ಚೆನ್ನೈಗೆ ತೆರಳುತ್ತಿದ್ದಾರೆ ಎಂದು ಬಜಾರಿಚೆರಾ ಪೊಲೀಸ್ ವಾಚ್‌ಪೋಸ್ಟ್‌ನ ಉಸ್ತುವಾರಿ ಮೊನೊರಂಜನ್ ಸಿನ್ಹಾ ತಿಳಿಸಿದ್ದಾರೆ. ಶೋಧ ಸಮಯದಲ್ಲಿ ಅವರು ಯಾವುದೇ ಸರಿಯಾದ ದಾಖಲೆಗಳನ್ನು ನೀಡಲು ವಿಫಲರಾಗಿದ್ದಾರೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಲು ಸಹಾಯ ಮಾಡಿದ್ದಕ್ಕಾಗಿ ರತಾಬರಿ ಪ್ರದೇಶದ ಲಿಂಕ್‌ಮ್ಯಾನ್ ಬಿದನ್ ಚಂದ್ರ ದಾಸ್‌ನನ್ನು ಸಹ ಬಂಧಿಸಲಾಗಿದೆ.
ಬಂಧಿತರು ಬಾಂಗ್ಲಾದೇಶದ ರಾಜಶಾಹಿ ಮತ್ತು ಖುಲ್ನಾ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನಗಳ ಚಾಲಕರನ್ನೂ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಂಧಿತ ಬಾಂಗ್ಲಾ ಪ್ರಜೆಗಳಾದ ಸೊಹೈಲ್ ಅಹ್ಮದ್ 23, ಅಬ್ದುಲ್ ಗಫೂರ್ 29, ನಜ್ಮಾ ಬೇಗಂ 25, ಸೋಫಿರಾ ಅಖ್ತರ್ 23, ಅಲಿಯಾ ಬೇಗಂ 45, ಫಾತಿಮಾ ಅಖ್ತಾ 21, ರಾಜೇಶ್ ಶೇಖ್ 29, ಅಸಾಬುಲ್ ಶೇಖ್ 29, ಸನಾವುಲ್ಲಾ 28, ಕೌಸರ್ ಹುಸೇನ್ 20 ಎಂದು ಗುರುತಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು