ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಂದೆಯ ಪಕ್ಕ ಪುತ್ರ ಅಮರ: ಬಿಬಿಎಂಪಿ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಸಿದ್ಧತೆ.

Twitter
Facebook
LinkedIn
WhatsApp
ತಂದೆಯ ಪಕ್ಕ ಪುತ್ರ ಅಮರ: ಬಿಬಿಎಂಪಿ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಸಿದ್ಧತೆ.

ಬೆಂಗಳೂರು ಮಹಾನಗರ ಪಾಲಿಕೆಯ ಆವರಣದಲ್ಲಿ ಡಾ.ರಾಜ್ ಪುತ್ಥಳಿ ಕನ್ನಡಿಗರ ಹೆಮ್ಮೆಯ ದ್ಯೋತಕವಾಗಿ ನಿಂತಿದೆ. ಇದೇ ಪುತ್ಥಳಿಯ ಪಕ್ಕದಲ್ಲಿ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪುತ್ಥಳಿ ಕೂಡ ನಿರ್ಮಾಣವಾಗಲಿದ್ದು, ಇನ್ನೇನು ಪ್ರತಿಮೆಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇನ್ನೇನು ಒಂದು ತಿಂಗಳು ತುಂಬಲಿದೆ. ಈ ಹೊತ್ತಿನಲ್ಲೇ ಅವರ ನೆನಪುಗಳನ್ನು ಅಮರವಾಗಿಸಲು ಅಭಿಮಾನಿಗಳು ನೊರೆಂಟು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಪೈಕಿ ಬಿಬಿಎಂಪಿ ನೌಕರರ ಸಂಘವೂ ಸರ್ಕಾರದ ಅನುಮತಿಯೊಂದಿಗೆ ಪುನೀತ್ ಪುತ್ಥಳಿಯನ್ನು ಬಿಬಿಎಂಪಿ ಆವರಣದಲ್ಲಿ ನಿಲ್ಲಿಸಲು ಸಜ್ಜಾಗಿದೆ.

ಈಗಾಗಲೇ ಪುತ್ಥಳಿ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಸದ್ಯದಲ್ಲೇ ಅದ್ದೂರಿ ಕಾರ್ಯಕ್ರಮದಲ್ಲಿ ಪುನೀತ್ ಹಾಗೂ ಡಾ.ರಾಜ್ ಕುಟುಂಬಸ್ಥರ ಸಮ್ಮುಖದಲ್ಲಿ ಬಿಬಿಎಂಪಿಯ ಆವರಣದಲ್ಲಿ ಪುನೀತ್ ಪುತ್ಥಳಿ ಅನಾವರಣಗೊಳ್ಳಲಿದೆ. ಹಲವು ಹಿರಿಯರ ಪುತ್ಥಳಿ ಗಳನ್ನು ನಿರ್ಮಿಸಿದ ಅನುಭವ ಉಳ್ಳ ಬೆಂಗಳೂರಿನ ಹಿರಿಯ ಶಿಲ್ಪ ಕಲಾವಿದ ಸಪ್ತತಿ ಕ್ರಿಯೇಷನ್ಸ್ ನ ನಾ ಶಿವದತ್ತ ಪುನೀತ್ ಪುತ್ಥಳಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ. ಪುನೀತ್ ನಿಧನದ ಬಳಿಕ ಅವರ ಪುತ್ಥಳಿಗೆ ಸಾಕಷ್ಟು ಬೇಡಿಕೆ ಇದ್ದು ಜನರು, ಅಭಿಮಾನಿಗಳು, ಸಂಘ ಸಂಸ್ಥೆಗಳು ವಿವಿಧ ಅಳತೆಯ ಪುನೀತ್ ಪುತ್ಥಳಿಗಾಗಿ ಆರ್ಡರ್ ನೀಡಿದ್ದಾರಂತೆ.

ಬಿಬಿಎಂಪಿ ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಪುನೀತ್ ಪುತ್ಥಳಿ ಇನ್ನೇನು ಅಂತಿಮ ಹಂತದಲ್ಲಿದ್ದು ಅದನ್ನು ನಟ ರಾಘವೇಂದ್ರ ರಾಜಕುಮಾರ ವೀಕ್ಷಣೆ ನಡೆಸಿದ್ದಾರೆ. ಅಲ್ಲದೇ ಚಿಕ್ಕಪುಟ್ಟ ಬದಲಾವಣೆಗಳನ್ನು ಶಿಲ್ಪಿಗೆ ಸೂಚಿಸಿದ್ದಾರಂತೆ. ಡಾ.ರಾಜ್ ಪುತ್ಥಳಿಯನ್ನು ಈ ಹಿಂದೆ ಶಿವದತ್ ಅವರೇ ನಿರ್ಮಿಸಿದ್ದರಂತೆ. ಆಗಲೂ ಶಿವಣ್ಣ ತಂದೆಯವರ ಪುತ್ಥಳಿ ನೋಡಲು ಬಂದಿದ್ದರಂತೆ. ಈಗ ತಮ್ಮನ ಪ್ರತಿಮೆ ನೋಡಲು ಬರುವಂತಾಯಿತು ಎಂದು ರಾಘಣ್ಣ ಕಣ್ಣೀರಾದರು.ಅಲ್ಲದೇ ಪುನೀತ್ ಅವಸರದಲ್ಲಿ ಹೋಗಿದ್ದಾನೆ. ಆದರೆ ನೀವು ಪುತ್ಥಳಿ ಕೆತ್ತನೆಯಲ್ಲಿ ಯಾವುದೇ ಅವಸರ ಮಾಡಬೇಡಿ ಎಂದು ಕಾಳಜಿ ತೋರಿದ್ದಾರೆ.
ಪುನೀತ್ ರಂತೆ ತೋರುವ ಪುತ್ಥಳಿಯನ್ನು ಕಂಡು ಭಾವುಕರಾದ ರಾಘಣ್ಣ ಆ ಪ್ರತಿಮೆಗೆ ಮುತ್ತನಿತ್ತು ತಮ್ಮ ಸಹೋದರ ಪ್ರೇಮ ತೋರಿದ್ದಾರೆ. ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಈ ಪುತ್ಥಳಿ ನಿರ್ಮಾಣ ಹಾಗೂ ಸ್ಥಾಪನೆಯ ಹೊಣೆಗಾರಿಕೆ ಹೊತ್ತಿದ್ದು ಅವರು ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ನಗರದ ಹಲವೆಡೆ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು