ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮುಂಬೈ: ಪ್ರಮುಖ ಘಟನೆಯೊಂದರಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ 5 ಕೋಟಿ ರೂಪಾಯಿ ಮೌಲ್ಯದ ಎರಡು ಕೈಗಡಿಯಾರಗಳನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ.
ನವೆಂಬರ್ 14 ರ ಭಾನುವಾರ ರಾತ್ರಿ ಕಸ್ಟಮ್ಸ್ ಅಧಿಕಾರಿಗಳು ಕೈಗಡಿಯಾರಗಳನ್ನು ವಶಪಡಿಸಿಕೊಂಡಿದ್ದಾರೆ. ಐಸಿಸಿ ಪುರುಷರ T20 ವಿಶ್ವಕಪ್ 2021 ರಲ್ಲಿ ಭಾಗವಹಿಸಿದ ನಂತರ ಭಾರತೀಯ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ದುಬೈನಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮುಂಬೈ ಕಸ್ಟಮ್ಸ್ ಇಲಾಖೆಯ ಪ್ರಕಾರ, ಅವರ ಬಳಿ ವಾಚ್ಗಳ ಬಿಲ್ ರಶೀದಿ ಇರಲಿಲ್ಲ. ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಸ್ಟಮ್ಸ್ ಅಧಿಕಾರಿಗಳು ಹಾರ್ದಿಕ್ ಬಳಿ ಎರಡು ಐಷಾರಾಮಿ ಕೈಗಡಿಯಾರಗಳನ್ನು ಹೊಂದಿದ್ದು, ಅದನ್ನು ವಶಕ್ಕೆ ತೆಗೆದುಕೊಳ್ಳಲು ಮುಂದಾದರು. ಹಾರ್ದಿಕ್ ಪಾಂಡ್ಯ ವಾಚ್ಗಳನ್ನು ಕಸ್ಟಮ್ಸ್ ವಸ್ತುಗಳೆಂದು ಘೋಷಿಸದೆ ಇದ್ದುದರಿಂದ ತೊಂದರೆಗೆ ಕಾರಣವಾಯಿತು. ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹಾರ್ದಿಕ್ ದುಬಾರಿ ವಾಚ್ಗಳ ದೊಡ್ಡ ಸಂಗ್ರಹವನ್ನು ಹೊಂದಿದ್ದಾರೆ. ಅವರ ಬಳಿ ಪಾಟೆಕ್ ಫಿಲಿಪ್ ನಾಟಿಲಸ್ ಪ್ಲಾಟಿನಂ 5711 ಇದೆ – ಇದರ ಬೆಲೆ 5 ಕೋಟಿ ರೂ ಆಗಿದೆ.
ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿರುವ ಪಾಂಡ್ಯ ತಮ್ಮ ಬಳಿ ಇದ್ದ ವಾಚ್ನ ಬೆಲೆ 5 ಕೋಟಿ ರೂಪಾಯಿ ಅಲ್ಲ. ಬದಲಾಗಿ ತಲಾ 1.8 ಕೋಟಿ ರೂಪಾಯಿ ಹಾಗೂ 1.4 ಕೋಟಿ ರೂಪಾಯಿ ಮೌಲ್ಯದ್ದಾಗಿವೆ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಕಾನೂನಿನ ಎಲ್ಲಾ ಕ್ರಮಗಳನ್ನು ಪಾಲಿಸಿಯೇ ದುಬೈನಲ್ಲಿ ಈ ವಾಚುಗಳನ್ನು ಖರೀದಿಸಿದ್ದೇನೆ ಎಂದು ಹೇಳಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?