ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕನ್ನಡದ ಖ್ಯಾತ ನಟ ಮತ್ತು ಮಾಜಿ ಐಎಎಸ್‌ ಅಧಿಕಾರಿ ಕೆ. ಶಿವರಾಮ್‌ ನಿಧನ..!

Twitter
Facebook
LinkedIn
WhatsApp
ಕನ್ನಡದ ಖ್ಯಾತ ನಟ ಮತ್ತು ಮಾಜಿ ಐಎಎಸ್‌ ಅಧಿಕಾರಿ ಕೆ. ಶಿವರಾಮ್‌ ನಿಧನ..!

ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ (K Shivaram) ಅವರು HCG ಆಸ್ಪತ್ರೆಯಲ್ಲಿ ಹೃದಾಯಘಾತದಿಂದ ಫೆ.29ರಂದು ನಿಧನರಾಗಿದ್ದಾರೆ. ಕಳೆದ ಎರಡು ದಿನದ ಹಿಂದೆ ತೀವ್ರ ‌ಹೃದಾಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟನಿಗೆ 71 ವರ್ಷ ವಯಸ್ಸಾಗಿತ್ತು.

“ಬಾ ನಲ್ಲೆ ಮಧುಚಂದ್ರಕೆ” ಸಿನಿಮಾ ಮೂಲಕ ನಾಯಕ ‌ನಟನಾಗಿದ್ದ ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ 10 ಸಿನೆಮಾದಲ್ಲಿ ನಟಿಸಿದ್ದಾರೆ.

ಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2013 ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist