ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶ್ವ ಕಪ್ ಫೈನಲ್ ಪಂದ್ಯ ವೀಕ್ಷಿಸುವಾಗ ಟಿವಿ ಆಫ್ ಮಾಡಿದ ಮಗನನ್ನೇ ಕೊಂದ ತಂದೆ...!

Twitter
Facebook
LinkedIn
WhatsApp
ವಿಶ್ವ ಕಪ್ ಫೈನಲ್ ಪಂದ್ಯ ವೀಕ್ಷಿಸುವಾಗ ಟಿವಿ ಆಫ್ ಮಾಡಿದ ಮಗನನ್ನೇ ಕೊಂದ ತಂದೆ...!

ಲಕ್ನೋ: ಭಾರತ (India) ಆಸ್ಟ್ರೇಲಿಯಾ (Australia) ನಡುವಿನ ವಿಶ್ವಕಪ್‌ (World Cup Cricket Final) ಪಂದ್ಯದ ವೇಳೆ ಟಿವಿ ಸ್ವಿಚ್‌ ಆಫ್‌ ಮಾಡಿದ್ದಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಫೈನಲ್‌ ಪಂದ್ಯವನ್ನು ತಂದೆ ಗಣೇಶ್‌ ಪ್ರಸಾದ್‌ ಟಿವಿಯಲ್ಲಿ ವೀಕ್ಷಿಸುತ್ತಿದ್ದ. ಈ ವೇಳೆ ಪುತ್ರ ದೀಪಕ್‌ ರಾತ್ರಿಯ ಊಟಕ್ಕೆ ಆಹಾರ ಸಿದ್ಧಪಡಿಸುವಂತೆ ಹೇಳಿದ್ದಾನೆ.

ಮಗನ ಮಾತಿಗೆ ಗಣೇಶ್‌ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಮತ್ತು ಕ್ರಿಕೆಟ್‌ ನೋಡುವುದರಲ್ಲಿ ಮಗ್ನನಾಗಿದ್ದ. ತನ್ನ ಮಾತಿಗೆ ಸ್ಪಂದಿಸದ್ದಕ್ಕೆ ಸಿಟ್ಟಾದ ಮಗ ಟಿವಿಯನ್ನೇ ಸ್ವಿಚ್‌ ಆಫ್‌ ಮಾಡಿದ್ದಾನೆ. ಸ್ವಿಚ್‌ ಆಫ್‌ ಮಾಡಿದ ನಂತರ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆದಿದೆ.

ಜಗಳ ವಿಕೋಪಕ್ಕೆ ಹೋಗಿದ್ದು ತಂದೆ ಎಲೆಕ್ಟ್ರಿಕ್‌ ಕೇಬಲ್‌ ವಯರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದ. ಖಚಿತ ಮಾಹಿತಿ ಪಡೆದ ಪೊಲೀಸರು ಗಣೇಶ್‌ ಪ್ರಸಾದ್‌ನನ್ನು ಬಂಧಿಸಿದ್ದಾರೆ.

ರೈತ ಗಣೇಶ ಪ್ರಸಾದ್‌ ಮದ್ಯವ್ಯಸನಿಯಾಗಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆಯುತ್ತಲೇ ಇತ್ತು. ಫೈನಲ್‌ ಕ್ರಿಕೆಟ್‌ ಪಂದ್ಯ ನೋಡುವಾಗ ನಡೆದ ಜಗಳದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋ

ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಪ್ರಕರಣ ಮಾಸುವ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಅದೇ ರೀತಿ ಹಗಲೊತ್ತಲ್ಲಿ, ಜನಜಂಗುಳಿಯಲ್ಲೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತುಂಬಿ ತುಳುಕುತ್ತಿದ್ದ ಮೆಟ್ರೋದಲ್ಲಿ (Namma Metro)  ಯುವತಿಗೆ (Young Woman) ಲೈಂಗಿಕ ಕಿರುಕುಳ ನೀಡಿದ್ದು, ಕಿಡಿಗೇಡಿಯ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಯುವತಿಗೆ ನ್ಯಾಯ ಒದಗಿಸಿ ಕಿಡಿಗೇಡಿಗೆ ತಕ್ಕ ಶಾಸ್ತಿ ಮಾಡುವಂತೆ ಆಗ್ರಹಿಸಲಾಗಿದೆ.

ಆಗಿದ್ದೇನು?
ಸೋಮವಾರ ಬೆಳಗ್ಗೆ ಸುಮಾರು 8:30ರ ಸುಮಾರಿನಲ್ಲಿ ಸದಾ ಜನಜಂಗುಳಿ ಇರುವ ಮೆಜೆಸ್ಟಿಕ್ ಮೆಟ್ರೋದಲ್ಲಿ ಘಟನೆ ನಡೆದಿದೆ. ಯುವತಿ ಪ್ರತಿ ದಿನ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ ಸೋಮವಾರ ಬೆಳಗ್ಗೆ 8:30ರ ಸುಮಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ಮೆಟ್ರೋ ಹತ್ತಿದ ನಂತರ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯನ್ನು ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಅರಿವಾದಾಗ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಸಹಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ. ಆಕೆ ಅತ್ತು ಕಿರುಚಿದರೂ ಯಾರೂ ಆಕೆಯ ಸಹಾಯಕ್ಕೆ ಬರಲೇ ಇಲ್ಲ. ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ವಿಚಾರ ಬಹಿರಂಗ ಪಡಿಸಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬಿಎಂಆರ್‌ಸಿಎಲ್ ಅಧಿಕಾರಿ ಯಶವಂತ್ ಚೌಹಾಣ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾವ ಟೈಂ, ಯಾವ ಟ್ರೈನ್ ಅಂತಾ ಗೊತ್ತಾಗಬೇಕಿದೆ. ಈಗಾಗಲೇ ಸಿಸಿಟಿವಿಯಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇದುವರೆಗೂ ಈ ಕೇಸ್ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೂ ನಾವು ಕ್ರಮ ವಹಿಸಿ ಪರಿಶೀಲನೆ ಮಾಡುತ್ತಿದ್ದೇವೆ. ಇದರ ಬಗ್ಗೆ ವಿಚಾರಿಸಿ ಹೇಳುತ್ತೇವೆ. ಶೀಘ್ರದಲ್ಲೇ ಪತ್ತೆ ಮಾಡುತ್ತೇವೆ ಎಂದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist