ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸಗುಲ್ಲಕ್ಕಾಗಿ ಮದುವೆ ಮನೆಯಲ್ಲಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ರಸಗುಲ್ಲಕ್ಕಾಗಿ ಮದುವೆ ಮನೆಯಲ್ಲಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ

ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ವಾದಗಳು ನಡೆಯುವುದು ಸಾಮಾನ್ಯ ಆದರೆ, ಕೇವಲ ಜಗಳ ನಡೆದಿಲ್ಲ ಬದಲಾಗಿ ರಸಗುಲ್ಲಕ್ಕಾಗಿ ಹೊಡೆದಾಟವೇ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶಂಸಾಬಾದ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಶರ್ಮಾ ತಿಳಿಸಿದ್ದಾರೆ.

ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮವಿತ್ತು, ಸಮಾರಂಭದಲ್ಲಿ, ರಸಗುಲ್ಲಾಗಳ ಕೊರತೆಯ ಬಗ್ಗೆ ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದರು.

ಇದು ಜಗಳಕ್ಕೆ ಕಾರಣವಾಯಿತು ಮತ್ತು ಭಗವಾನ್ ದೇವಿ, ಯೋಗೇಶ್, ಮನೋಜ್, ಕೈಲಾಶ್, ಧರ್ಮೇಂದ್ರ ಮತ್ತು ಪವನ್ ಗಾಯಗೊಂಡಿದ್ದಾರೆ ಎಂದು ಎಸ್‌ಎಚ್‌ಒ ಶರ್ಮಾ ಹೇಳಿದ್ದಾರೆ.

ಹಾಗೆಯೇ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎತ್ಮಾದ್‌ಪುರದಲ್ಲಿ ನಡೆದ ಮದುವೆಯೊಂದರಲ್ಲಿ ಸಿಹಿತಿಂಡಿಗಳ ಕೊರತೆ ಬಗ್ಗೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು ಎಂದು ತಿಳಿಸಿದ್ದಾರೆ.

ಉತ್ತರಕಾಶಿ ಸುರಂಗ ಮಾರ್ಗಕ್ಕೆ ರಕ್ಷಣಾ ಸಾಧನಗಳನ್ನು ಸಾಗಿಸುತ್ತಿದ್ದ ಟ್ರಕ್ ಕಮರಿಗೆ ಬಿದ್ದು ಚಾಲಕ ಸಾವು

ಉತ್ತರಕಾಶಿ ನವೆಂಬರ್ 20: ಉತ್ತರಕಾಶಿ ಸುರಂಗದಲ್ಲಿ (Uttarkashi tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆಗಾಗಿ ಉಪಕರಣಗಳನ್ನು ಸಾಗಿಸುವ ಟ್ರಕ್ ಸೋಮವಾರ ಮಧ್ಯಾಹ್ನ ಉತ್ತರಾಖಂಡದ (Uttarakhand )ತೆಹ್ರಿ ಜಿಲ್ಲೆಯ ನರೇಂದ್ರನಗರ (Narendranagar) ಪ್ರದೇಶದ 100 ಮೀಟರ್ ಆಳದ ಕಮರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಚಾಲಕ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನರೇಂದ್ರನಗರ ಪೊಲೀಸ್ ಠಾಣೆ ಪ್ರಭಾರಿ ಗೋಪಾಲ್ ದತ್ ಭಟ್ ಮಾತನಾಡಿ, ಇಲ್ಲಿನ ನರೇಂದ್ರನಗರ ಪ್ರದೇಶದಲ್ಲಿ ಟ್ರಕ್ 100 ಮೀಟರ್ ಕಮರಿಗೆ ಬಿದ್ದಿದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಸಂಜೆ 4.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಚಾಲಕ ಗೌರವ್ ಕುಮಾರ್ (35) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ವಲ್ಪ ಕಷ್ಟಪಟ್ಟು ಚಾಲಕನನ್ನು ಕಂದರದಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಭಟ್ ಹೇಳಿದ್ದಾರೆ.

ಸ್ಥಳದಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ಕೆಲವು ಪೈಪ್‌ಗಳು ಮತ್ತು ಡ್ರಿಲ್ಲಿಂಗ್ ಮೆಷಿನ್ ಅನ್ನು ಹೊತ್ತ ಟ್ರಕ್ ಡೆಹ್ರಾಡೂನ್‌ನಿಂದ ಉತ್ತರಕಾಶಿಯ ಸುರಂಗದ ಸ್ಥಳಕ್ಕೆ ಪ್ರಯಾಣಿಸುತ್ತಿತ್ತು.

“ನಾವು ಅಪಘಾತದ ಸ್ಥಳದಲ್ಲಿ ಸಂಗ್ರಹಿಸಿದ ಮಾಹಿತಿಯಿಂದ, ಡೆಹ್ರಾಡೂನ್‌ನಿಂದ ಉತ್ತರಕಾಶಿ ಸುರಂಗಕ್ಕೆ ಉಪಕರಣಗಳನ್ನು ಕಳುಹಿಸಲು ರೈಲ್ವೆ ವಿಕಾಸ್ ನಿಗಮ್ ಲಿಮಿಟೆಡ್‌ನಿಂದ ತೊಡಗಿಸಿಕೊಂಡಿದ್ದ ಕೆಲವು ಖಾಸಗಿ ಮಾರಾಟಗಾರರು ಉಪಕರಣಗಳನ್ನು ಕಳುಹಿಸುತ್ತಿದ್ದರು. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ದೂರವಾಣಿ ಕರೆ ಮಾಡಿ ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದರು.

“ಸುರಂಗದೊಳಗೆ ಸಿಲುಕಿರುವ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ಹೊರತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ