ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ

Twitter
Facebook
LinkedIn
WhatsApp
Oommen Chandy passes away

ಬೆಂಗಳೂರು: ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕೇರಳ ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಚಾಂಡಿಯವರು ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ತನ್ನ ನೇತೃತ್ವದಲ್ಲಿ ನಾನಾ ರಾಜ್ಯಗಳಲ್ಲಿರುವ ವಿಪಕ್ಷಗಳ ಬೃಹತ್ ಸಭೆ ಆಯೋಜಿಸಿರುವ ದಿನವೇ (ಜು. 18), ತನ್ನ ನಾಯಕರೊಬ್ಬರನ್ನು ಕಳೆದುಕೊಂಡಿರುವುದು ವಿಪರ್ಯಾಸ.

1943ರ ಕೇರಳದ ಕೊಟ್ಟಾಯಂ ಜಿಲ್ಲೆಯ ಪುದುಪಲ್ಲಿ ಎಂಬಲ್ಲಿ ಜನಿಸಿದ್ದ ಚಾಂಡಿ, ವಿದ್ಯಾರ್ಥಿಯಾಗಿದ್ದಾಗಿನಿಂದಲೇ ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಅಖಿಲ ಭಾರದ ಕಾಂಗ್ರೆಸ್ ನ ವಿದ್ಯಾರ್ಥಿ ಗಳ ವಿಭಾಗವಾದ ಕೇರಳ ಸ್ಟೂಡೆಂಟ್ಸ್ ಯೂನಿಯನ್ ನ (ಕೆಎಸ್ ಯು) ಸದಸ್ಯರಾಗಿ, ಅನೇಕ ಹೋರಾಟಗಳಲ್ಲಿ ಅವರು ಗುರುತಿಸಿಕೊಂಡಿದ್ದರು. ಕಲಾ ವಿಭಾಗದಲ್ಲಿ ಪದವಿಯನ್ನು ಪಡೆದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡರು.

ಮೊದಲ ಬಾರಿಗೆ ಸ್ಪರ್ಧಿಸಿ ಜಯ ಗಳಿಸಿದ್ದ ಅವರು, ಸತತವಾಗಿ ಐದು ದಶಕಗಳ ಕಾಲ ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2021ರಲ್ಲಿ ನಡೆದಿದ್ದ ಕೇರಳ ವಿಧಾನಸಭೆ ಚುನಾವಣೆಯಲ್ಲಿಯೂ ಅವರು ಅದೇ ಕ್ಷೇತ್ರದಿಂದ ಜಯ ಗಳಿಸಿದ್ದರು. 2004ರಿಂದ 2006ರವರೆಗೆ ಕೇರಳದ 10ನೇ ಮುಖ್ಯಮಂತ್ರಿಯಾಗಿ ಅವರು ಸೇವೆ ಸಲ್ಲಿಸಿದ್ದರು. ಆನಂತರ, 2011ರಿಂದ 2016ರವರೆಗೆ ಕೇರಳದ 10ನೇ ಮುಖ್ಯಮಂತ್ರಿಯಾಗಿ ಅವರು ಸೇವೆ ಸಲ್ಲಿಸುವ ಅವಕಾಶ ಒದಗಿಬಂದಿತ್ತು.

ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಅವರು ಟ್ವಿಟರ್ ನಲ್ಲಿ ಚಾಂಡಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಅವರು ಒಬ್ಬ ಧೀಮಂತ ನಾಯಕರೊಬ್ಬರನ್ನು ಕಾಂಗ್ರೆಸ್ ಇಂದು ಕಳೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist