ಸೋಮವಾರ, ಫೆಬ್ರವರಿ 24, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶುಂಠಿ ಬೆಳೆಗಾರರಿಗೆ ಜಾಕ್​ಪಾಟ್, ಬಂತು ಬಂಗಾರದ ಬೆಲೆ!

Twitter
Facebook
LinkedIn
WhatsApp
33 1

ಚಿಕ್ಕಮಗಳೂರು, (ಜುಲೈ 14): ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ದಿನಸಿ ಸೇರಿದಂತೆ ಕೆಲ ತರಕಾರಿ ದರ ಏರಿಕೆಯಾಗಿದೆ.ಅದರಲ್ಲೂ ಮುಖ್ಯವಾಗಿ ಟೊಮೆಟೊ ದರ ಗಗನಕ್ಕೇರಿದೆ. ಇದರ ಮಧ್ಯೆ ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ(ginger) ಬಂಗಾರದ ಬೆಲೆ ಬಂದಿದೆ. ಹೌದು.. 100 ಕೆ.ಜಿ‌ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.

ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಶುಂಠಿ ಬೆಳೆದ ರೈತರು ಇದೀಗ ಜಾಕ್ ಪಾಟ್ ಹೊಡೆದಿದ್ದಾರೆ. ಅದರಲ್ಲೂ ಹಳೆಯ ಶುಂಠಿಗೆ ಬೇಡಿಕೆ ಹೆಚ್ಚಾಗಿದೆ. ಹಳೆ ಶುಂಠಿಗೆ 18ರಿಂದ 20 ಸಾವಿರ ರೂ. ಇದ್ದು, ಈ ವರ್ಷ ಬೆಳೆದಿರುವ ಶುಂಠಿಗೆ 10 ರಿಂದ 12 ಸಾವಿರ ರೂ.ಇದೆ. ಇದರಿಂದ ಕಳೆದ ವರ್ಷದ ಶುಂಠಿಯನ್ನ ಹೊಲದಲ್ಲಿ ಉಳಿಸಿಕೊಂಡ ರೈತರಿಗೆ ಬಂಪರ್ ಬೆಲೆ ಸಿಗುತ್ತಿದೆ. ದೆಹಲಿ ಮತ್ತು ಉತ್ತರ ಭಾರತದಲ್ಲಿ ಶುಂಠಿಗೆ ಬೇಡಿಕೆ ಹೆಚ್ಚಾಗಿದ್ದು, 2011 ರಿಂದ 2023 ರಲ್ಲಿ ಇದೆ ಮೊದಲಿ ಬಾರಿಗೆ ಶುಂಠಿ ಬೆಲೆ 20 ಸಾವಿರ ರೂ. ಗಡಿ ತಲುಪಿದೆ. ಹೀಗಾಗಿ ಒಂದು ಎಕರೆ ಶುಂಠಿ ಬೆಳೆದ ರೈತ 25 ಲಕ್ಷ ರೂ. ಲಾಭದ ನಿರೀಕ್ಷೆಯಲ್ಲಿದ್ದಾನೆ.

ಸಾಮಾನ್ಯವಾಗಿ ಏಪ್ರಿಲ್‌- ಮೇ ತಿಂಗಳಲ್ಲಿ ಶುಂಠಿ ಬಿತ್ತನೆ ಮಾಡಲಾಗುತ್ತದೆ. 8 ತಿಂಗಳಿಗೂ ಹೆಚ್ಚಿನ ಅವಧಿಯ ಈ ಬೆಳೆ ಜನವರಿ ಹೊತ್ತಿಗೆ ಕೈಗೆ ಸಿಗುತ್ತದೆ. ಆದರೆ ಇದೀಗ ಈಗ ರೈತರು ಬೆಳೆಯೆಲ್ಲ ಮಾರಾಟ ಮಾಡಿ ಹೊಸದಾಗಿ ಬಿತ್ತನೆ ಮಾಡಿ ಶುಂಠಿ ಸಸಿ ಬೆಳೆಸುವ ಸಮಯದಲ್ಲಿ ಹಿಂದೆಂದೂ ಕಾಣದ ದಾಖಲೆಯ ಬೆಲೆ ಬಂದಿದೆ. ಹೆಚ್ಚಿನ ರೈತರ ಕೈಯಲ್ಲಿ ಬೆಳೆ ಇಲ್ಲದಿರುವುದರಿಂದ ಬೆಲೆ ಬಂದರೂ ಪ್ರಯೋಜನ ಇಲ್ಲದಂತಾಗಿದೆ. ಇನ್ನು ಮಾರಾಟ ಮಾಡದೇ ಇಟ್ಟುಕೊಂಡಿರುವ ರೈತರಿಗೆ ಮಾತ್ರ ಜಾಕ್​ಪಾಟ್.

ಟೊಮ್ಯಾಟೋ ತಿನ್ನುವುದನ್ನೇ ಕಡಿಮೆ ಮಾಡಿದ್ದೇನೆ : ನಟ ಸುನೀಲ್ ಶೆಟ್ಟಿ

ದೇಶದಾದ್ಯಂತ ಟೊಮ್ಯಾಟೋ (Tomato) ಬೆಲೆ ಏರಿ ಕೂತಿದೆ. ಇದು ಮಧ್ಯಮ ಮತ್ತು ಕೆಳಮಧ್ಯಮ ವರ್ಗಕ್ಕೆ ಮಾತ್ರ ತಲೆಬಿಸಿ ತಂದಿಲ್ಲ, ಶ್ರೀಮಂತರು ಕೂಡ ಟೊಮ್ಯಾಟೋ ಬಗ್ಗೆ ಮಾತನಾಡುವಂತಾಗಿದೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಬಾಲಿವುಡ್ (Bollywood) ನಟ ಸುನೀಲ್ ಶೆಟ್ಟಿ (Sunil Shetty) ಟೊಮ್ಯಾಟೋ ಬೆಲೆ ಬಗ್ಗೆ ಮಾತನಾಡಿದ್ದಾರೆ.

ನನ್ನ ಮನೆಯಲ್ಲಿ ಯಾವಾಗಲೂ ನಾವು ತಾಜಾ ತರಕಾರಿಯನ್ನೇ ತಂದು ಬಳಸುತ್ತೇವೆ. ದಿನಕ್ಕೆ ಎರಡ್ಮೂರು ರೀತಿಯ ತರಕಾರಿಗಳನ್ನು ನನ್ನ ಪತ್ನಿ ಖರೀದಿಸುತ್ತಾರೆ. ಅದರಲ್ಲೂ ಇತ್ತೀಚೆಗೆ ಟೊಮ್ಯಾಟೋ ದರ ಗಗನಕ್ಕೇರಿದೆ. ಹಾಗಾಗಿ ನಾನು ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಟೊಮ್ಯಾಟೋ ದರ ಏರಿಕೆಯಾಗುತ್ತಿದ್ದಂತೆಯೇ ಹಲವರು ಹಲವು ರೀತಿಯ ಪ್ರಯೋಗಗಳನ್ನು ಅಡುಗೆಯಲ್ಲಿ ಮಾಡುತ್ತಿದ್ದಾರೆ. ಅಲ್ಲದೇ, ತಮ್ಮ ಮನೆಯಲ್ಲೇ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ನಟಿ ರಾಖಿ ಸಾವಂತ್ ಹೇಳಿದ್ದರು. ಹದಿನೈದು ದಿನದ ಒಳಗೆ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ತೋರಿಸಿಕೊಟ್ಟಿದ್ದರು. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist